ರಾಜೇಶ್ ಖುಲ್ಲರ್ 
ವಾಣಿಜ್ಯ

ಹರಿಯಾಣದ ಅಧಿಕಾರಿಗೆ ಒಲಿದ ವಿಶ್ವ ಬ್ಯಾಂಕ್ ಉನ್ನತ ಹುದ್ದೆ..!

ಹರಿಯಾಣದ ಮುಖ್ಯ ಕಾರ್ಯದರ್ಶಿಯಾಗಿರುವ ಹಿರಿಯ ಅಧಿಕಾರಿ ರಾಜೇಶ್ ಖುಲ್ಲರ್ ಅವರನ್ನು, ವಾಷಿಂಗ್ಟನ್ ನಲ್ಲಿರುವ ವಿಶ್ವ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಲಾಗಿದೆ.

ನವದೆಹಲಿ: ಹರಿಯಾಣದ ಮುಖ್ಯ ಕಾರ್ಯದರ್ಶಿಯಾಗಿರುವ ಹಿರಿಯ ಅಧಿಕಾರಿ ರಾಜೇಶ್ ಖುಲ್ಲರ್ ಅವರನ್ನು , ವಾಷಿಂಗ್ಟನ್ ನಲ್ಲಿರುವ ವಿಶ್ವ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಲಾಗಿದೆ.

ಕೇಂದ್ರ ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ಈ ಮಾಹಿತಿ ತಿಳಿಸಲಾಗಿದೆ. 1984 ರಲ್ಲಿ ಪಂಜಾಬ್ ವಿಶ್ವವಿದ್ಯಾಲಯದಿಂದ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ಖುಲ್ಲರ್ 1988ರ ತಂಡದ ಐಎಎಸ್ ಅಧಿಕಾರಿಯಾಗಿದ್ದಾರೆ. ಅಷ್ಟೇ ಅಲ್ಲದೆ ಜಪಾನ್‌ನ ಟೋಕಿಯೊದ ನ್ಯಾಷನಲ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಫಾರ್ ಪಾಲಿಸಿ ಸ್ಟಡೀಸ್ (ಜಿಆರ್‍ಪಿಎಸ್) ನಿಂದ ಮಾಸ್ಟರ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಪದವಿ ಗಳಿಸಿದ್ದಾರೆ. ವಿಶ್ವಬ್ಯಾಂಕಿನಲ್ಲಿ 2023, ಆ.31ರ ವರೆಗೆ ಅವರ ಅಧಿಕಾರಾವಧಿಯಿರಲಿದೆ.

ಖುಲ್ಲರ್ ಅವರನ್ನು ಫೆಬ್ರವರಿ 2011 ರಲ್ಲಿ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಜಂಟಿ ಕಾರ್ಯದರ್ಶಿಯಾಗಿ ನೇಮಿಸಲಾಯಿತು ಖುಲ್ಲರ್ ಅವರು ವೈರಲ್ ಮ್ಯಾಚ್‌ನ ಲೇಖಕರಾಗಿದ್ದಾರೆ, ‘ಭಾರತದ ಮೊದಲ ವೈದ್ಯಕೀಯ ಥ್ರಿಲ್ಲರ್ ಎಚ್‌ಐವಿ’. 2007 ರಲ್ಲಿ ಪಾಕಿಸ್ತಾನ ಮತ್ತು ಭಾರತ ನಡುವಿನ ಬೆಂಗಳೂರು ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಈ ಪುಸ್ತಕವನ್ನು ಭಾರತೀಯ ಕ್ರಿಕೆಟ್ ತಂಡ ಬಿಡುಗಡೆ ಮಾಡಿತು.

ಸಿಬ್ಬಂದಿ ಸಚಿವಾಲಯದ ಇನ್ನೊಂದು ಆದೇಶದಲ್ಲಿ, ಮನಿಲಾದಲ್ಲಿರುವ ಏಷ್ಯಾ ಅಭಿವೃದ್ಧಿ ಬ್ಯಾಂಕ್ ನ (ಎಡಿಬಿ) ಕಾರ್ಯ ನಿರ್ವಾಹಕ ನಿರ್ದೇಶಕರನ್ನಾಗಿ ಸಮೀರ್ ಕುಮಾರ್ ಖರೆಯನ್ನು ನೇಮಿಸಲಾಗಿದೆ ಎಂದು ತಿಳಿಸಲಾಗಿದೆ. ಇವರ ಅಧಿಕಾರಾವಧಿಯೂ ಮೂರು ವರ್ಷವಾಗಿರುತ್ತದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT