ಸಾಂದರ್ಭಿಕ ಚಿತ್ರ 
ವಾಣಿಜ್ಯ

ಐಜಿಎಸ್ ಟಿಯನ್ನು ತಪ್ಪಾಗಿ ಲೆಕ್ಕಹಾಕಿದ ಕೇಂದ್ರ ಸರ್ಕಾರ, ರಾಜ್ಯಗಳಿಗೆ ಭಾರೀ ನಷ್ಟ: ಸಿಎಜಿ ವರದಿಯಲ್ಲಿ ಬಹಿರಂಗ

ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಪರಿಹಾರವನ್ನು ನೀಡದಿರುವ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿಸಿಕೊಂಡಿರುವಾಗ, ಕೇಂದ್ರ ಸರ್ಕಾರ ಆಂತರಿಕ ಸರಕು ಮತ್ತು ಸೇವಾ ತೆರಿಗೆ(ಐಜಿಎಸ್ ಟಿ)ಯನ್ನು ತಪ್ಪಾಗಿ ಲೆಕ್ಕಹಾಕಿದೆ ಎಂದು ಕಂಟ್ರೋಲರ್ ಅಂಡ್ ಆಡಿಟರ್ ಜನರಲ್ ಆಫ್ ಇಂಡಿಯಾ(ಸಿಎಜಿ) ಹೇಳಿದೆ.

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಪರಿಹಾರವನ್ನು ನೀಡದಿರುವ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿಸಿಕೊಂಡಿರುವಾಗ, ಕೇಂದ್ರ ಸರ್ಕಾರ ಆಂತರಿಕ ಸರಕು ಮತ್ತು ಸೇವಾ ತೆರಿಗೆ(ಐಜಿಎಸ್ ಟಿ)ಯನ್ನು ತಪ್ಪಾಗಿ ಲೆಕ್ಕಹಾಕಿದೆ ಎಂದು ಕಂಟ್ರೋಲರ್ ಅಂಡ್ ಆಡಿಟರ್ ಜನರಲ್ ಆಫ್ ಇಂಡಿಯಾ(ಸಿಎಜಿ) ಹೇಳಿದೆ. ಇದರಿಂದ ರಾಜ್ಯಗಳಿಗೆ ತಮ್ಮ ಪಾಲಿನ ಜಿಎಸ್ ಟಿ ಬಹಳ ಕಡಿಮೆ ಸಿಗುತ್ತಿದೆ ಎಂದು ಸಿಎಜಿ ವರದಿ ಹೇಳಿದೆ.

2018-19ರಲ್ಲಿ ಒಟ್ಟು 15 ಸಾವಿರದ 001 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ರಾಜ್ಯಗಳ ಐಜಿಎಸ್ ಟಿ ಪಾಲು ಎಂದು ವರ್ಗಾಯಿಸಿತು, ಆದರೆ ರಾಜ್ಯ ಮತ್ತು ಕೇಂದ್ರಗಳ ಮಧ್ಯೆ ಸರಿಯಾಗಿ ಜಿಎಸ್ ಟಿ ಲೆಕ್ಕಾಚಾರ ಹಾಕಿರಲಿಲ್ಲ ಎಂದು ಹೇಳುತ್ತದೆ.ಕಳೆದ ವಾರ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಸದನದ ಮುಂದಿಟ್ಟಿರುವ ಸಿಎಜಿ ವರದಿಯಿಂದ ಇದು ತಿಳಿದುಬಂದಿದೆ.

ಜಿಎಸ್ ಟಿ ನಿಯಮ ಪ್ರಕಾರ, 15 ಸಾವಿರ ಕೋಟಿ ರೂಪಾಯಿ ಕೇಂದ್ರ ಮತ್ತು ರಾಜ್ಯಗಳ ಮಧ್ಯೆ ವಿಭಜನೆ ಮಾಡಬೇಕಾಗಿತ್ತು. ಕಳೆದ ವರ್ಷ ಐಜಿಎಸ್ ಟಿ ಸರಿಯಾಗಿ ಹಂಚಿಕೆಯಾಗಿರಲಿಲ್ಲ, ಅಲ್ಲದೆ, ಉಳಿಕೆ 13 ಸಾವಿರದ 944 ಕೋಟಿ ರೂಪಾಯಿ ಐಜಿಎಸ್ಟಿಯ ತಾತ್ಕಾಲಿಕ ಹಂಚಿಕೆಗೆ ಅವಕಾಶ ನೀಡಿದ್ದರೂ ಸಹ, ಅದನ್ನು ಸರಿಯಾಗಿ ವಿಂಗಡಿಸಲಾಗಿಲ್ಲ ಮತ್ತು ಸಿಎಫ್ಐ (ಕನ್ಸಾಲಿಡೇಟೆಡ್ ಫಂಡ್ ಆಫ್ ಇಂಡಿಯಾ) ನಲ್ಲಿ ಉಳಿಸಿಕೊಳ್ಳಲಾಗಿದೆ, ಹೀಗಾಗಿ ರಾಜ್ಯಗಳಿಗೆ ಕಡಿಮೆ ಹಣ ದೊರಕಿದೆ ಎಂದು ವರದಿ ಹೇಳಿದೆ.

ಕೇಂದ್ರ ಸರ್ಕಾರ ರಾಜ್ಯಗಳಿಗೆ ಕಳೆದ 5 ತಿಂಗಳಿನಿಂದ ಜಿಎಸ್ ಟಿ ಪರಿಹಾರವನ್ನೇ ನೀಡಿಲ್ಲ. ಮುಂದಿನ ತಿಂಗಳು ಅಕ್ಟೋಬರ್ 4ರಂದು ನಡೆಯುವ ಜಿಎಸ್ ಟಿ ಮಂಡಳಿ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT