ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ 
ವಾಣಿಜ್ಯ

ಅಕ್ಟೋಬರ್ 1 ರಿಂದ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಹೊಸ ನಿಯಮಗಳು ಜಾರಿ: ನೀವು ತಿಳಿದುಕೊಳ್ಳಬೇಕಾದ ಅಂಶಗಳು ಇವು 

ಅ.1 ರಿಂದ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನ ಹೊಸ ನಿಯಮಗಳು ಜಾರಿಗೆ ಬರಲಿದೆ. 

ನವದೆಹಲಿ: ಅ.1 ರಿಂದ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನ ಹೊಸ ನಿಯಮಗಳು ಜಾರಿಗೆ ಬರಲಿದೆ. 

ಡೆಬಿಟ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್ ನ ಪೇಮೆಂಟ್ ಗಳನ್ನು ಮತ್ತಷ್ಟು ಸುರಕ್ಷಿತಗೊಳಿಸುವುದಕ್ಕಾಗಿ ಆರ್ ಬಿಐ ಹೊಸ ಮಾರ್ಗಸೂಚಿಗಳನ್ನು ನೀಡಿದ್ದು, ಅ.1 ರಿಂದ ಇವುಗಳು ಜಾರಿಗೆ ಬರಲಿವೆ. ಆರ್ ಬಿಐ ನ ಹೊಸ ಮಾರ್ಗಸೂಚಿಗಳ ಬಗ್ಗೆ ಇಲ್ಲಿದೆ ಮಾಹಿತಿ 

ಗ್ರಾಹಕರೇ ಕೇಳದ ಹೊರತು ಕಾರ್ಡ್ ಗಳಿಗೆ ಅಂತಾರಾಷ್ಟ್ರೀಯ ಸೌಲಭ್ಯವನ್ನು ಕಲ್ಪಿಸುವಂತಿಲ್ಲ. ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್ ಗಳನ್ನು ಬಳಸಿ ವಂಚನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿಯಮ ಜಾರಿಗೆ ತರಲಾಗಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ ಗ್ರಾಹಕರಿಗೆ ತಮಗೆ ಯಾವೆಲ್ಲಾ ಸೇವೆಗಳು ಬೇಕು-ಬೇಡ ಎಂಬುದನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಹೆಚ್ಚಿನ ಅವಕಾಶ ಇರಲಿದೆ. 

ಖರ್ಚು ಮಿತಿ, ಆನ್ ಲೈನ್ ವಹಿವಾಟು, ಅಂತಾರಾಷ್ಟ್ರೀಯ ವಹಿವಾಟು ಹಾಗೂ ಕಾಂಟಾಕ್ಟ್ ಲೆಸ್ ( ವೈಫೈ ಮೂಲಕ ಪಿನ್ ಇಲ್ಲದೇ ಪಾವತಿಸುವ ವಿಧಾನ) ಗಳನ್ನು ನಿರ್ಧರಿಸಿ, ಮಿತಿ ಹಾಕಿಕೊಳ್ಳುವ ಆಯ್ಕೆಯೂ ಗ್ರಾಹಕರಿಗೇ ನೀಡಲಾಗುತ್ತದೆ. 

ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್ ಗಳ ವಹಿವಾಟುಗಳನ್ನು ಪ್ರಾಥಮಿಕವಾಗಿ ಎಟಿಎಂ ಗಳಲ್ಲಿ ಹಾಗೂ ಪಾಯಿಂಟ್ ಆಫ್ ಸೇಲ್ ಟರ್ಮಿನಲ್ ಗಳಲ್ಲಿನ ಬಳಕೆಗೆ ಸಕ್ರಿಯಗೊಳಿಸಲಾಗುತ್ತದೆ. ಹೊಸ ನಿಯಮಗಳ ಪ್ರಕರ ಡೆಬಿಟ್, ಕ್ರೆಡಿಟ್ ಕಾರ್ಡ್ ಹೊಂದಿರುವವರು ವಹಿವಾಟು ಮಿತಿಯನ್ನು ವಿಧಿಸಿಕೊಳ್ಳಬಹುದಾಗಿದೆ. 

ಇ-ಕಾಮರ್ಸ್, ಎನ್ಎಫ್ ಸಿ ಗಳಲ್ಲಿ ಪಾವತಿಸುವುದೂ ಸೇರಿ ಕ್ರೆಡಿಟ್, ಡೆಬಿಟ್ ಕಾರ್ಡ್ ದಾರರು ನಿರ್ದಿಷ್ಟ ಸೇವೆಗಳನ್ನು ಒಪ್ಪಿಕೊಳ್ಳುವ ಅಥವಾ ಬಿಡುವ ಆಯ್ಕೆಯನ್ನು ನೀಡಲಾಗುತ್ತದೆ. ಭಾರತ ಅಥವಾ ವಿದೇಶಗಳಲ್ಲಿ ಆನ್ ಲೈನ್ ಅಥವಾ ಕಾಂಟಾಕ್ಟ್ ಲೆಸ್ ವಹಿವಾಟನ್ನು ಒಮ್ಮೆಯೂ ನಡೆಸದೇ ಇರುವಂತಹ ಡೆಬಿಟ್, ಕ್ರೆಡಿಟ್ ಕಾರ್ಡ್ ಗಳಿಗೆ ಆನ್ ಲೈನ್ ಪೇಮೆಂಟ್ ಸೌಲಭ್ಯವನ್ನು ನಿಷ್ಕ್ರಿಯಗೊಳಿಸಲಾಗುತ್ತದೆ. 

ಇನ್ನು ಮುಂದೆ ಎನ್ ಎಫ್ ಸಿಯನ್ನು ಸಕ್ರಿಯ, ನಿಶ್ಕ್ರಿಯಗೊಳಿಸುವ ಆಯ್ಕೆ ಗ್ರಾಹರದ್ದೇ ಆಗಿರುತ್ತದೆ. ಗ್ರಾಹಕರು ಮೊಬೈಲ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಲಾಗ್ ಇನ್ ಆಗಿ ಕಾರ್ಡ್ ವಿಭಾಗದಲ್ಲಿ ಮ್ಯಾನೇಜ್ ಕಾರ್ಡ್ ನ್ನು ಆಯ್ಕೆ ಮಾಡುವ ಮೂಲಕ   ಈ ಬದಲಾವಣೆಗಳನ್ನು ನಿಮ್ಮ ಅಗತ್ಯಕ್ಕೆ ತಕ್ಕಂತೆ ಮಾಡಿಕೊಳ್ಳಬಹುದಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT