ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ 
ವಾಣಿಜ್ಯ

ಅಕ್ಟೋಬರ್ 1 ರಿಂದ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಹೊಸ ನಿಯಮಗಳು ಜಾರಿ: ನೀವು ತಿಳಿದುಕೊಳ್ಳಬೇಕಾದ ಅಂಶಗಳು ಇವು 

ಅ.1 ರಿಂದ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನ ಹೊಸ ನಿಯಮಗಳು ಜಾರಿಗೆ ಬರಲಿದೆ. 

ನವದೆಹಲಿ: ಅ.1 ರಿಂದ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನ ಹೊಸ ನಿಯಮಗಳು ಜಾರಿಗೆ ಬರಲಿದೆ. 

ಡೆಬಿಟ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್ ನ ಪೇಮೆಂಟ್ ಗಳನ್ನು ಮತ್ತಷ್ಟು ಸುರಕ್ಷಿತಗೊಳಿಸುವುದಕ್ಕಾಗಿ ಆರ್ ಬಿಐ ಹೊಸ ಮಾರ್ಗಸೂಚಿಗಳನ್ನು ನೀಡಿದ್ದು, ಅ.1 ರಿಂದ ಇವುಗಳು ಜಾರಿಗೆ ಬರಲಿವೆ. ಆರ್ ಬಿಐ ನ ಹೊಸ ಮಾರ್ಗಸೂಚಿಗಳ ಬಗ್ಗೆ ಇಲ್ಲಿದೆ ಮಾಹಿತಿ 

ಗ್ರಾಹಕರೇ ಕೇಳದ ಹೊರತು ಕಾರ್ಡ್ ಗಳಿಗೆ ಅಂತಾರಾಷ್ಟ್ರೀಯ ಸೌಲಭ್ಯವನ್ನು ಕಲ್ಪಿಸುವಂತಿಲ್ಲ. ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್ ಗಳನ್ನು ಬಳಸಿ ವಂಚನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿಯಮ ಜಾರಿಗೆ ತರಲಾಗಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ ಗ್ರಾಹಕರಿಗೆ ತಮಗೆ ಯಾವೆಲ್ಲಾ ಸೇವೆಗಳು ಬೇಕು-ಬೇಡ ಎಂಬುದನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಹೆಚ್ಚಿನ ಅವಕಾಶ ಇರಲಿದೆ. 

ಖರ್ಚು ಮಿತಿ, ಆನ್ ಲೈನ್ ವಹಿವಾಟು, ಅಂತಾರಾಷ್ಟ್ರೀಯ ವಹಿವಾಟು ಹಾಗೂ ಕಾಂಟಾಕ್ಟ್ ಲೆಸ್ ( ವೈಫೈ ಮೂಲಕ ಪಿನ್ ಇಲ್ಲದೇ ಪಾವತಿಸುವ ವಿಧಾನ) ಗಳನ್ನು ನಿರ್ಧರಿಸಿ, ಮಿತಿ ಹಾಕಿಕೊಳ್ಳುವ ಆಯ್ಕೆಯೂ ಗ್ರಾಹಕರಿಗೇ ನೀಡಲಾಗುತ್ತದೆ. 

ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್ ಗಳ ವಹಿವಾಟುಗಳನ್ನು ಪ್ರಾಥಮಿಕವಾಗಿ ಎಟಿಎಂ ಗಳಲ್ಲಿ ಹಾಗೂ ಪಾಯಿಂಟ್ ಆಫ್ ಸೇಲ್ ಟರ್ಮಿನಲ್ ಗಳಲ್ಲಿನ ಬಳಕೆಗೆ ಸಕ್ರಿಯಗೊಳಿಸಲಾಗುತ್ತದೆ. ಹೊಸ ನಿಯಮಗಳ ಪ್ರಕರ ಡೆಬಿಟ್, ಕ್ರೆಡಿಟ್ ಕಾರ್ಡ್ ಹೊಂದಿರುವವರು ವಹಿವಾಟು ಮಿತಿಯನ್ನು ವಿಧಿಸಿಕೊಳ್ಳಬಹುದಾಗಿದೆ. 

ಇ-ಕಾಮರ್ಸ್, ಎನ್ಎಫ್ ಸಿ ಗಳಲ್ಲಿ ಪಾವತಿಸುವುದೂ ಸೇರಿ ಕ್ರೆಡಿಟ್, ಡೆಬಿಟ್ ಕಾರ್ಡ್ ದಾರರು ನಿರ್ದಿಷ್ಟ ಸೇವೆಗಳನ್ನು ಒಪ್ಪಿಕೊಳ್ಳುವ ಅಥವಾ ಬಿಡುವ ಆಯ್ಕೆಯನ್ನು ನೀಡಲಾಗುತ್ತದೆ. ಭಾರತ ಅಥವಾ ವಿದೇಶಗಳಲ್ಲಿ ಆನ್ ಲೈನ್ ಅಥವಾ ಕಾಂಟಾಕ್ಟ್ ಲೆಸ್ ವಹಿವಾಟನ್ನು ಒಮ್ಮೆಯೂ ನಡೆಸದೇ ಇರುವಂತಹ ಡೆಬಿಟ್, ಕ್ರೆಡಿಟ್ ಕಾರ್ಡ್ ಗಳಿಗೆ ಆನ್ ಲೈನ್ ಪೇಮೆಂಟ್ ಸೌಲಭ್ಯವನ್ನು ನಿಷ್ಕ್ರಿಯಗೊಳಿಸಲಾಗುತ್ತದೆ. 

ಇನ್ನು ಮುಂದೆ ಎನ್ ಎಫ್ ಸಿಯನ್ನು ಸಕ್ರಿಯ, ನಿಶ್ಕ್ರಿಯಗೊಳಿಸುವ ಆಯ್ಕೆ ಗ್ರಾಹರದ್ದೇ ಆಗಿರುತ್ತದೆ. ಗ್ರಾಹಕರು ಮೊಬೈಲ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಲಾಗ್ ಇನ್ ಆಗಿ ಕಾರ್ಡ್ ವಿಭಾಗದಲ್ಲಿ ಮ್ಯಾನೇಜ್ ಕಾರ್ಡ್ ನ್ನು ಆಯ್ಕೆ ಮಾಡುವ ಮೂಲಕ   ಈ ಬದಲಾವಣೆಗಳನ್ನು ನಿಮ್ಮ ಅಗತ್ಯಕ್ಕೆ ತಕ್ಕಂತೆ ಮಾಡಿಕೊಳ್ಳಬಹುದಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT