ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ 
ವಾಣಿಜ್ಯ

ಆರ್ ಬಿಐ ವಿತ್ತೀಯ ನೀತಿ ಪ್ರಕಟ: ಸತತ ಏಳನೇ ಬಾರಿ ರೆಪೊ ದರ ಯಥಾಸ್ಥಿತಿ ಮುಂದುವರಿಕೆ 

ದೇಶದಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗಿ ಇನ್ನೂ ಆರ್ಥಿಕ ಪುನಶ್ಚೇತನವಾಗದಿರುವ ಸಂದರ್ಭದಲ್ಲಿ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಮುಂದುವರಿಸಲು ಆರ್ ಬಿಐ ನಿರ್ಧರಿಸಿದೆ.

ಮುಂಬೈ: ದೇಶದಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗಿ ಇನ್ನೂ ಆರ್ಥಿಕ ಪುನಶ್ಚೇತನವಾಗದಿರುವ ಸಂದರ್ಭದಲ್ಲಿ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಮುಂದುವರಿಸಲು ಆರ್ ಬಿಐ ನಿರ್ಧರಿಸಿದೆ.

ಇಂದು ಮುಂಬೈಯಲ್ಲಿ ಆರ್ ಬಿಐಯ ವಿತ್ತೀಯ ನೀತಿ ಪ್ರಕಟಿಸಿದ ಗವರ್ನರ್ ಶಕ್ತಿಕಾಂತ್ ದಾಸ್, ರೆಪೊ ದರ ಶೇಕಡಾ 4ರಷ್ಟು ಹಾಗೂ ರಿವರ್ಸ್ ರೆಪೊ ದರವನ್ನು ಶೇಕಡಾ 3.35ರಷ್ಟು ಯಥಾಸ್ಥಿತಿ ಮುಂದವರಿಸಲು ತೀರ್ಮಾನಿಸಲಾಗಿದೆ ಎಂದು ಪ್ರಕಟಿಸಿದರು. ಈ ರೀತಿ ಸತತ ಏಳನೇ ಬಾರಿ ಆರ್ ಬಿಐ ವಿತ್ತೀಯ ದರದ ಯಥಾಸ್ಥಿತಿ ಕಾಯ್ದುಕೊಂಡು ಬಂದಿದೆ. ಕಳೆದ ವರ್ಷ ಮೇ 22ರಂದು ವಿತ್ತೀಯ ದರವನ್ನು ಆರ್ ಬಿಐ ಪರಿಷ್ಕರಿಸಿತ್ತು.

ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಆರ್‌ಬಿಐ ಬಡ್ಡಿದರಗಳನ್ನು ಸಹಜ ಸ್ಥಿತಿಗೆ ಬರುವವರೆಗೆ ತಡೆಹಿಡಿಯುತ್ತದೆ ಎಂದು ಇಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆರು ಸದಸ್ಯರ ಹಣಕಾಸು ವಿತ್ತೀಯ ನೀತಿಯ ಮೂರು ದಿನಗಳ ಸಭೆ ಮುಗಿದ ಬಳಿಕ ಹೇಳಿದರು.

ಬಡ್ಡಿದರ ಬದಲಾಗದೆ ಇರಿಸಲು ವಿತ್ತೀಯ ನೀತಿ ಸಮಿತಿ(ಎಂಪಿಸಿ) ಸರ್ವಾನುಮತದಿಂದ ಮತ ಚಲಾಯಿಸಿತು. ಆರ್ಥಿಕ ಬೆಳವಣಿಗೆಯನ್ನು ಬೆಂಬಲಿಸಲು ಮತ್ತು ಹಣದುಬ್ಬರವನ್ನು ಗುರಿಯೊಳಗೆ ಉಳಿಸಿಕೊಳ್ಳಲು ಅಗತ್ಯವಿದ್ದಷ್ಟು ಕಾಲ ತನ್ನ ಸೌಕರ್ಯದ ನಿಲುವನ್ನು ಮುಂದುವರಿಸಲು ನಿರ್ಧರಿಸಿದೆ ಎಂದು ದಾಸ್ ಹೇಳಿದರು.

ವಿತ್ತೀಯ ನೀತಿ ಸಮಿತಿಗೆ ವಾರ್ಷಿಕ ಹಣದುಬ್ಬರವನ್ನು ಮಾರ್ಚ್ 31, 2026ರವರೆಗೆ ಶೇಕಡಾ 4ರಷ್ಟು ಕಾಯ್ದುಕೊಳ್ಳಲು ಆದೇಶ ನೀಡಲಾಗಿದೆ.

ರೆಪೊ ದರ: ಬ್ಯಾಂಕುಗಳಲ್ಲಿ ಹಣದ ಕೊರತೆಯಾದರೆ ಅಥವಾ ಹಣದ ಅವಶ್ಯಕತೆಯಿದ್ದರೆ ಆರ್ ಬಿಐ ಬ್ಯಾಂಕುಗಳಿಗೆ ಕೊಡುವ ಸಾಲದ ಹಣದ ಮೇಲೆ ವಿಧಿಸುವ ನಿಶ್ಚಿತ ಬಡ್ಡಿ ದರ ರೆಪೊ ದರವಾಗಿದೆ. ಹಣದುಬ್ಬರವನ್ನು ನಿಯಂತ್ರಿಸಲು ವಿತ್ತೀಯ ಅಧಿಕಾರಿಗಳು ರೆಪೊ ದರವನ್ನು ಬಳಸುತ್ತಾರೆ.

ಹಣದುಬ್ಬರದ ಸಂದರ್ಭದಲ್ಲಿ, ಕೇಂದ್ರ ಬ್ಯಾಂಕು ಆರ್ ಬಿಐ ರೆಪೊ ದರವನ್ನು ಹೆಚ್ಚಿಸುತ್ತವೆ, ಸಾಧ್ಯವಾದಷ್ಟು ಬ್ಯಾಂಕುಗಳು ಆರ್ ಬಿಐಯಿಂದ ಸಾಲ ಪಡೆಯುವುದನ್ನು ತಡೆಯುತ್ತದೆ. ಇದು ಅಂತಿಮವಾಗಿ ಆರ್ಥಿಕತೆಯಲ್ಲಿ ಹಣ ಪೂರೈಕೆಯನ್ನು ಕಡಿಮೆ ಮಾಡಿ ಹಣದುಬ್ಬರ ನಿಯಂತ್ರಿಸಲು ಸಹಾಯ ಮಾಡುತ್ತದೆ.

ರಿವರ್ಸ್ ರೆಪೊ ದರ: ಇದಕ್ಕೆ ಪ್ರತಿಯಾಗಿ ಆರ್‌ಬಿಐ ಅಲ್ಪಾವಧಿಗೆ ಬ್ಯಾಂಕುಗಳಿಂದ ಹಣವನ್ನು ಸಾಲ ಪಡೆದು ಆ ಹಣದ ಮೇಲೆ ನೀಡುವ ಬಡ್ಡಿದರವನ್ನು ರಿವರ್ಸ್ ರೆಪೊ ದರ ಎಂದು ಕರೆಯುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!