ಸಾಂದರ್ಭಿಕ ಚಿತ್ರ 
ವಾಣಿಜ್ಯ

ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇಕಡಾ 5.59ಕ್ಕೆ ಕುಸಿತ

ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾದ ಪರಿಣಾಮ ಜೂನ್‌ನಲ್ಲಿ ಶೇಕಡಾ 6.26ರಷ್ಟಿದ್ದ ಚಿಲ್ಲರೆ ಹಣದುಬ್ಬರವು ಜುಲೈನಲ್ಲಿ ಶೇ. 5.59 ಇಳಿದಿದೆ ಎಂದು ಸರ್ಕಾರಿ ಅಂಕಿ-ಅಂಶಗಳು ಮಾಹಿತಿ ನೀಡಿವೆ.

ನವದೆಹಲಿ: ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾದ ಪರಿಣಾಮ ಜೂನ್‌ನಲ್ಲಿ ಶೇಕಡಾ 6.26ರಷ್ಟಿದ್ದ ಚಿಲ್ಲರೆ ಹಣದುಬ್ಬರವು ಜುಲೈನಲ್ಲಿ ಶೇ. 5.59ಕ್ಕೆ ಇಳಿದಿದೆ ಎಂದು ಸರ್ಕಾರಿ ಅಂಕಿ-ಅಂಶಗಳು ಮಾಹಿತಿ ನೀಡಿವೆ.

ಗ್ರಾಹಕ ಬೆಲೆ ಸೂಚ್ಯಂಕ(ಸಿಪಿಐ) ಆಧಾರಿತ ಹಣದುಬ್ಬರ ಜೂನ್ ನಲ್ಲಿ ಶೇ. 6.26 ಮತ್ತು ಜುಲೈ 2020 ರಲ್ಲಿ ಶೇಕಡಾ 6.73 ರಷ್ಟಿತ್ತು.

ರಾಷ್ಟ್ರೀಯ ಅಂಕಿಅಂಶ ಕಚೇರಿ(NSO) ಗುರುವಾರ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, ಜುಲೈ 2021 ರ ಆಹಾರ ಹಣದುಬ್ಬರವು ಜೂನ್ 2021 ರಲ್ಲಿದ್ದ ಶೇಕಡಾ 5.15 ರಿಂದ 3.96 ಕ್ಕೆ ಇಳಿದಿದ್ದರಿಂದ ಚಿಲ್ಲರೆ ಹಣದುಬ್ಬರವು ಮುಖ್ಯವಾಗಿ ಆಹಾರ ಬೆಲೆಗಳ ಕುಸಿತದಿಂದಾಗಿ ಕಡಿಮೆಯಾಗಿದೆ. 

ಇನ್ನು ಮೇ 2021ಕ್ಕೆ ಹೋಲಿಸಿದರೆ, ಚಿಲ್ಲರೆ ಹಣದುಬ್ಬರವು ಮೂರು ತಿಂಗಳಲ್ಲಿ ಅತ್ಯಂತ ಕಡಿಮೆ ಮಟ್ಟವನ್ನು ತಲುಪಿದೆ. ಕಳೆದ ಮೇ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.6.3ಕ್ಕೆ  ಏರಿಕೆಯಾಗಿತ್ತು.

ಈ ತಿಂಗಳ ಆರಂಭದಲ್ಲಿ, ಆರ್‌ಬಿಐ ಸಿಪಿಐ ಹಣದುಬ್ಬರವನ್ನು 2021-22ರ ಅವಧಿಯಲ್ಲಿ ಶೇ. 5.7, ಎರಡನೇ ತ್ರೈಮಾಸಿಕದಲ್ಲಿ 5.9 ಶೇಕಡಾ, ಮೂರನೇಯಲ್ಲಿ ಶೇ. 5.3 ಮತ್ತು ನಾಲ್ಕನೇ ತ್ರೈಮಾಸಿಕದಲ್ಲಿ ಶೇಕಡಾ 5.8 ರಷ್ಟಿದ್ದು, ಅಪಾಯಗಳನ್ನು ಸಮತೋಲನಗೊಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT