ಸಗಟು ಹಣದುಬ್ಬರ (ಸಾಂಕೇತಿಕ ಚಿತ್ರ) 
ವಾಣಿಜ್ಯ

ಸಗಟು ಹಣದುಬ್ಬರ ಸತತ ಎರಡನೇ ತಿಂಗಳು ಇಳಿಕೆ!

ಉತ್ಪಾದಿತ ಸರಕುಗಳು, ಕಚ್ಚಾ ತೈಲ ಬೆಲೆ ಏರಿಕೆಯ ನಡುವೆಯೂ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಗಿರುವುದರ ಪರಿಣಾಮ ಸಗಟು ಹಣದುಬ್ಬರ ಸತತ 2 ನೇ ತಿಂಗಳು ಕುಸಿತ ಕಂಡಿದೆ. 

ನವದೆಹಲಿ: ಉತ್ಪಾದಿತ ಸರಕುಗಳು, ಕಚ್ಚಾ ತೈಲ ಬೆಲೆ ಏರಿಕೆಯ ನಡುವೆಯೂ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಗಿರುವುದರ ಪರಿಣಾಮ ಸಗಟು ಹಣದುಬ್ಬರ ಸತತ 2 ನೇ ತಿಂಗಳು ಕುಸಿತ ಕಂಡಿದೆ. 

ಜುಲೈ ತಿಂಗಳಲ್ಲಿ ಹಣದುಬ್ಬರ ಶೇ.11.16 ಕ್ಕೆ ಕುಸಿದಿದ್ದರೂ ಸತತ ಮೂರನೇ ತಿಂಗಳೂ ಹಣದುಬ್ಬರ, ಕಳೆದ ವರ್ಷದ ಕಡಿಮೆ ಬೇಸ್ ನ ಪರಿಣಾಮವಾಗಿ ಎರಡು ಅಂಕಿಗಳಷ್ಟಿದೆ.  2020 ರ ಜುಲೈ ನಲ್ಲಿ ಡಬ್ಲ್ಯುಪಿಐ ಹಣದುಬ್ಬರ (-)0.25 ರಷ್ಟಿತ್ತು. 

"ಕಳೆದ ವರ್ಷಕ್ಕೆ ಹೋಲಿಕೆ ಮಾಡಿದಲ್ಲಿ, 2021 ರ ಜುಲೈ ನಲ್ಲಿ ಹಣದುಬ್ಬರ ದರ ಏರಿಕೆಯಾಗಿರುವುದಕ್ಕೆ ಕಡಿಮೆ ಬೇಸ್ ಪರಿಣಾಮ ಹಾಗೂ ಕಚ್ಚಾ ತೈಲ, ಪೆಟ್ರೋಲಿಯಮ್ ಹಾಗೂ ನೈಸರ್ಗಿಕ ಅನಿಲ,  ಖನಿಜ ತೈಲ, ಆಹಾರ ಉತ್ಪನ್ನಗಳು, ಜವಳಿ; ರಾಸಾಯನಿಕಗಳು ಮತ್ತು ರಾಸಾಯನಿಕ ಉತ್ಪನ್ನಗಳ ಬೆಲೆ ಏರಿಕೆ ಕಾರಣವಾಗಿದೆ" ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿದೆ. ಈರುಳ್ಳಿ ಬೆಲೆ ಏರಿಕೆಯ ನಡುವೆಯೂ ಆಹಾರ ಪದಾರ್ಥಗಳ ಹಣದುಬ್ಬರ ಮೂರನೇ ತಿಂಗಳೂ ಇಳಿಕೆಯಾಗಿದ್ದು, ಜೂನ್ ನಲ್ಲಿದ್ದ 3.09 ರಿಂಡ ಜುಲೈ ನಲ್ಲಿ ಶೂನ್ಯಕ್ಕೆ ತಲುಪಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಧಿಕಾರ ಹಂಚಿಕೆ ಬಗ್ಗೆ ಯಾರೂ ಮಾತನಾಡಬೇಡಿ, ಸಾರ್ವಜನಿಕ ಹೇಳಿಕೆ ಕೊಡಬೇಡಿ': ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬುದ್ದಿಮಾತು

'ನೀವು ಶಾಶ್ವತ ವಿಪತ್ತು ನಿಧಿ ಏಕೆ ರಚಿಸಿಲ್ಲ': ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ

ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ: ಡಿ ಕೆ ಶಿವಕುಮಾರ್

ಟೈಗರ್‌ ಜಿಂದಾ ಹೈ, ಕಿಂಗ್‌ ಈಸ್ ಅಲೈವ್‌: CM ಬಗ್ಗೆ ಬೈರತಿ ಗುಣಗಾನ; ಯತೀಂದ್ರ ಹೇಳಿಕೆಗೆ ಕೆರಳಿ ಕೆಂಡವಾದ ಡಿಕೆಶಿ ಬಣ!

ದೇವನಹಳ್ಳಿಯ 1,777 ಎಕರೆ ಜಮೀನು 'ಶಾಶ್ವತ ವಿಶೇಷ ಕೃಷಿ ವಲಯ'; ಭೂಮಿ ಮಾರಾಟಕ್ಕೆ ಕಡಿವಾಣ ಇಲ್ಲ: ಸರ್ಕಾರ

SCROLL FOR NEXT