ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 
ವಾಣಿಜ್ಯ

ಮಲ್ಯ, ನೀರವ್ ಮೋದಿಯಂತಹ ಸುಸ್ತಿದಾರರ ಆಸ್ತಿ ಮಾರಾಟದಿಂದ 13,100 ಕೋಟಿ ರೂ. ವಸೂಲಿ: ನಿರ್ಮಲಾ ಸೀತಾರಾಮನ್

ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯಂತಹ  ಸಾಲ ಮರುಪಾವತಿಸದೆ ತಲೆ ಮರೆಸಿಕೊಂಡಿರುವ ಉದ್ಯಮಿಗಳ ಆಸ್ತಿ ಮಾರಾಟದಿಂದ ರೂ. 13,109.17 ಕೋಟಿಯನ್ನು ಬ್ಯಾಂಕ್ ಗಳು ವಶಪಡಿಸಿಕೊಂಡಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ತಿಳಿಸಿದರು.

ನವದೆಹಲಿ: ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯಂತಹ  ಸಾಲ ಮರುಪಾವತಿಸದೆ ತಲೆ ಮರೆಸಿಕೊಂಡಿರುವ ಉದ್ಯಮಿಗಳ ಆಸ್ತಿ ಮಾರಾಟದಿಂದ ರೂ. 13,109.17 ಕೋಟಿಯನ್ನು ಬ್ಯಾಂಕ್ ಗಳು ವಶಪಡಿಸಿಕೊಂಡಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ತಿಳಿಸಿದರು.

ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳಿಂದ ಪ್ರತಿಭಟನೆ ನಡುವೆಯೂ ಲೋಕಸಭೆಯಿಂದ ಅಂಗೀಕರಿಸಲ್ಪಟ್ಟ ಪೂರಕ ಅನುದಾನ ಬೇಡಿಕೆ (ಎರಡನೇ ಬ್ಯಾಚ್ ) ಮೇಲಿನ ಚರ್ಚೆಯಲ್ಲಿ ಪ್ರತಿಕ್ರಿಯಿಸಿದ ಸಚಿವರು, ಜಾರಿ ನಿರ್ದೇಶನಾಲಯ ನೀಡಿರುವ  ಮಾಹಿತಿಯಂತೆ, ಜುಲೈ 2021ರಲ್ಲಿ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಆಸ್ತಿ ಮಾರಾಟದಿಂದ ಒಟ್ಟಾರೇ, ರೂ. 13,109,17 ಕೋಟಿ ಹಣವನ್ನು ಬ್ಯಾಂಕ್ ಗಳು ವಶಕ್ಕೆ ಪಡೆದಿರುವುದಾಗಿ ಹೇಳಿದರು.

ಇತ್ತೀಚಿಗೆ ಜುಲೈ 16, 2021ರಲ್ಲಿ ವಿಜಯ್ ಮಲ್ಯ ಮತ್ತಿತರರಿಗೆ ಸೇರಿದ ಆಸ್ತಿ ಮಾರಾಟದಿಂದ ರೂ. 792 ಕೋಟಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ತೈಲಬೆಲೆ ಹೆಚ್ಚಳ ಸೇರಿದಂತೆ ವಿವಿಧ ವಿಷಯಗಳ ಕುರಿತಂತೆ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್, ಖಾದ್ಯ ತೈಲ ಮತ್ತಿತರ ಅವಶ್ಯಕ ಸರಕುಗಳ ದರ ಇಳಿಕೆಗೆ ಸರ್ಕಾರ ಕ್ರಮ ಕೈಗೊಂಡಿದೆ. ಅವಶ್ಯಕ ಸರಕುಗಳಿಗಾಗಿ ಸಚಿವರ ಗುಂಪಿನ ಮೂಲಕ ಕ್ರಮ ಕೈಗೊಳ್ಳಲಾಗಿದೆ.  ಖಾದ್ಯ ತೈಲ ಬೆಲೆ ಮತ್ತಿತರ ಅವಶ್ಯಕ ಸಾಮಾಗ್ರಿಗಳ ಬೆಲೆಯಲ್ಲಿನ ತೊಂದರೆಯನ್ನು ಪರಿಹರಿಸಲಾಗುವುದು ಎಂದರು. 

ಸಾರ್ವಜನಿಕ ಕ್ಷೇತ್ರದ ಬ್ಯಾಂಕ್ ಗಳ ಜೊತೆಗೂಡಿ ಕಳೆದ ಏಳು ವರ್ಷಗಳಲ್ಲಿ ಸುಮಾರು 5.49 ಲಕ್ಷ ಕೋಟಿ ರೂಪಾಯಿಯನ್ನು ವಸೂಲಿ ಮಾಡಲಾಗಿದೆ. ಆದ್ದರಿಂದ ಸುಸ್ತಿದಾರರು, ತಲೆಮರೆಸಿಕೊಂಡಿದ್ದಾರೆ. ಅವರ ಹಣವನ್ನು ವಶಕ್ಕೆ ಪಡೆದು ಸಾರ್ವಜನಿಕ ಕ್ಷೇತ್ರದ ಬ್ಯಾಂಕಿನಲ್ಲಿಟ್ಟಿದ್ದೇವೆ. ಆದ್ದರಿಂದ ಬ್ಯಾಂಕುಗಳು ಈಗಲೂ ಸುರಕ್ಷಿತವಾಗಿದ್ದು, ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳಲ್ಲಿ ರೇವಣಿದಾರರು ಹಣ ಸುಭದ್ರವಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT