ನಿರ್ಮಲಾ ಸೀತಾರಾಮನ್ 
ವಾಣಿಜ್ಯ

ಆರ್ಥಿಕ ಸಮೀಕ್ಷೆ: ಹಣಕಾಸು ವರ್ಷ 2021-22ರಲ್ಲಿ ಶೇ.11 ಬೆಳವಣಿಗೆ ನಿರೀಕ್ಷೆ

ಮಾರ್ಚ್ 31 ಕ್ಕೆ ಕೊನೆಗೊಳ್ಳುವ ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇಕಡಾ 7.7 ರಷ್ಟು ಮಟ್ಟಕ್ಕೆ ಕುಗ್ಗಬಹುದು, ಆದರೆ ಮುಂದಿನ ಹಣಕಾಸು ವರ್ಷದಲ್ಲಿ ಶೇ.11 ರಷ್ಟು ಪ್ರಗತಿ ಕಾಣಬಹುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸಿದ ಆರ್ಥಿಕ ಸಮೀಕ್ಷೆ ಹೇಳಿದೆ.

ನವದೆಹಲಿ: ಮಾರ್ಚ್ 31 ಕ್ಕೆ ಕೊನೆಗೊಳ್ಳುವ ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇಕಡಾ 7.7 ರಷ್ಟು ಮಟ್ಟಕ್ಕೆ ಕುಗ್ಗಬಹುದು, ಆದರೆ ಮುಂದಿನ ಹಣಕಾಸು ವರ್ಷದಲ್ಲಿ ಶೇ.11 ರಷ್ಟು ಪ್ರಗತಿ ಕಾಣಬಹುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸಿದ ಆರ್ಥಿಕ ಸಮೀಕ್ಷೆ ಹೇಳಿದೆ.

ಹಣಕಾಸು ವರ್ಷ 2020-21ರಲ್ಲಿ ಮುಖ್ಯವಾಗಿ ಕೊರೋನಾ ವೈರಸ್ ಸಾಂಕ್ರಾಮಿಕ ಮತ್ತು ನಂತರದ ದೇಶಾದ್ಯಂತದ ಲಾಕ್‌ಡೌನ್‌ನಿಂದ ಉಂಟಾದ ಆರ್ಥಿಕ ಸಂಕಷ್ಟದಿಂದ ಆರ್ಥಿಕ ಬೆಳವಣಿಗೆ ಕುಸಿತ ದಾಖಲಿಸಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಮುನ್ಸೂಚನೆಗಳಿಗೆ ಅನುಗುಣವಾಗಿ ಕೇಂದ್ರ ಬಜೆಟ್ ಗೆ ಎರಡು ದಿನಗಳ ಮುನ್ನ ಆರ್ಥಿಕ ಸಮೀಕ್ಷೆ ಬಹಿರಂಗವಾಗಿದೆ. ಇದು ಮಾರ್ಚ್ 31 ಕ್ಕೆ ಕೊನೆಗೊಳ್ಳುವ ವರ್ಷದಲ್ಲಿ ದೇಶದ ಜಿಡಿಪಿ ಶೇಕಡಾ 7.5 ಕ್ಕೆ ತಲುಪುವ ನಿರೀಕ್ಷೆಯಿದೆ ಎಂದು ಹೇಳಿದೆ.

ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಇತ್ತೀಚೆಗೆ 2020-21ರಲ್ಲಿ ಭಾರತದ ಆರ್ಥಿಕತೆಯ ಬೆಳವಣಿಗೆ ದರವನ್ನು ಶೇಕಡಾ 8 ಕ್ಕೆ ಇಳಿಸಿದೆ. 2022-23ರಲ್ಲಿ ಶೇಕಡಾ 6.8 ಕ್ಕೆ ಇಳಿಯುವ ಮೊದಲು 2021-22ರಲ್ಲಿ ಶೇಕಡಾ 11.5 ರಷ್ಟು ಬೆಳವಣಿಗೆಯ ನಿರೀಕ್ಷೆ ಮಾಡಲಾಗಿದೆ. ಹಾಗೆಯೇ ಎರಡೂ ವರ್ಷಗಳಲ್ಲಿ ಭಾರತವು ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯ ಗುರುತನ್ನು ಮರಳಿ ಪಡೆಯಲಿದೆ.

ಜೂನ್ 2020 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ, ಜಿಡಿಪಿ ಶೇಕಡಾ 23.9 ರಷ್ಟು ಕುಗ್ಗಿತು ಮತ್ತು ಸೆಪ್ಟೆಂಬರ್ 2020 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಶೇಕಡಾ 7.5 ರಷ್ಟು ದಾಖಲಾಗಿದೆ. ಹಣದುಬ್ಬರ ದರದ ಪ್ರಮಾಣ ಶೇ 5ರಂತೆ ತೆಗೆದುಕೊಳ್ಳಲಾಗಿದ್ದು, ಶೇ 4ರಿಂದ 6 ರವರೆಗಿನ ಮಧ್ಯದ ಬಿಂದುವಿನಲ್ಲಿ ಇರಲಿದೆ.

"ವರ್ಷದ ಮಧ್ಯಭಾಗದಲ್ಲಿ ದೀರ್ಘಾವಧಿಯವರೆಗೆ ಪೂರೈಕೆಯನ್ನು ಉತ್ತೇಜಿಸಲು ಮತ್ತು ಉತ್ಪಾದಕ ಸಾಮರ್ಥ್ಯಗಳಿಗೆ ದೀರ್ಘಕಾಲೀನ ಹಾನಿಯನ್ನು ತಪ್ಪಿಸಲು ರಚನಾತ್ಮಕ ಸುಧಾರಣೆಗಳನ್ನು ಘೋಷಿಸಿದ ಏಕೈಕ ದೇಶ ಭಾರತ" ಎಂದು ಸಮೀಕ್ಷೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT