ಮುಂಬೈಯ ಟಾಟಾ ಕನ್ಸಲ್ಟೆನ್ಸಿ ಸರ್ವಿಸ್ ಕಚೇರಿ 
ವಾಣಿಜ್ಯ

ಕೋವಿಡ್ ಸಾಂಕ್ರಾಮಿಕದ ನಡುವೆ ಟಿಸಿಎಸ್ ನಿಂದ 40 ಸಾವಿರ ಉದ್ಯೋಗಾವಕಾಶ!

ಭಾರತದ ಅತಿದೊಡ್ಡ ಸಾಫ್ಟ್‌ವೇರ್ ರಫ್ತುದಾರ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸ್ (ಟಿಸಿಎಸ್) 2021-22ರ ಆರ್ಥಿಕ ವರ್ಷದಲ್ಲಿ ದೇಶದ ಕ್ಯಾಂಪಸ್‌ ಸೆಲೆಕ್ಷನ್ ಗಳಿಂದ 40,000 ಕ್ಕೂ ಹೆಚ್ಚು ಹೊಸಬರನ್ನು ನೇಮಿಸಿಕೊಳ್ಳಲಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಬೆಂಗಳೂರು: ಭಾರತದ ಅತಿದೊಡ್ಡ ಸಾಫ್ಟ್‌ವೇರ್ ರಫ್ತುದಾರ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸ್ (ಟಿಸಿಎಸ್) 2021-22ರ ಆರ್ಥಿಕ ವರ್ಷದಲ್ಲಿ ದೇಶದ ಕ್ಯಾಂಪಸ್‌ ಸೆಲೆಕ್ಷನ್ ಗಳಿಂದ 40,000 ಕ್ಕೂ ಹೆಚ್ಚು ಹೊಸಬರನ್ನು ನೇಮಿಸಿಕೊಳ್ಳಲಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಈ ಕುರಿತಂತೆ ಸಂಸ್ಥೆಯ ಉನ್ನತ ಕಾರ್ಯನಿರ್ವಾಹಕ ಅಧಿಕಾರಿ ಶುಕ್ರವಾರ ತಿಳಿಸಿದ್ದು, '5 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿರುವ ಖಾಸಗಿ ವಲಯದ ಅತಿದೊಡ್ಡ ಉದ್ಯೋಗದಾತ ಕಂಪನಿ ಟಿಸಿಎಸ್ ಯು ಕಳೆದ ವರ್ಷ ಕ್ಯಾಂಪಸ್‌ಗಳಿಂದ 40,000 ಪದವೀಧರರನ್ನು ನೇಮಕ ಮಾಡಿಕೊಂಡಿತ್ತು. ಹಾಲಿ ವರ್ಷ, ಆ  ಸಂಖ್ಯೆಯಲ್ಲಿ ಉತ್ತಮ ಸಾಧನೆ ಮಾಡಲಿದೆ. ಅದಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳಿಗೆ ಉದ್ಯೋಗ ನೀಡುವ ಉದ್ದೇಶ ಹೊಂದಲಾಗಿದೆ ಎಂದು ಅದರ ಜಾಗತಿಕ ಮಾನವ ಸಂಪನ್ಮೂಲ ಮುಖ್ಯಸ್ಥ ಮಿಲಿಂದ್ ಲಕ್ಕಾಡ್ ಹೇಳಿದ್ದಾರೆ.

ಕೋವಿಡ್ ಸಾಂಕ್ರಾಮಿಕ ಸಂಬಂಧಿತ ನಿರ್ಬಂಧಗಳ ನಡುವೆಯೂ ನೇಮಕಾತಿಲ್ಲಿ ಯಾವುದೇ ತೊಂದರೆ ಅಥವಾ ತಡೆ ಉಂಟಾಗುವುದಿಲ್ಲ ಎಂದು ಅವರು ಹೇಳಿದ್ದು, ಕಳೆದ ವರ್ಷ ಒಟ್ಟು 3.60 ಲಕ್ಷ ಫ್ರೆಷರ್‌ಗಳು ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದರು. ಭಾರತದ ಕ್ಯಾಂಪಸ್‌ನಿಂದ, ನಾವು ಕಳೆದ ವರ್ಷ 40,000  ಜನರನ್ನು ನೇಮಿಸಿಕೊಂಡಿದ್ದೇವೆ. ಈ ವರ್ಷ ಭಾರತದಲ್ಲಿ 40,000 ಅಥವಾ ಅದಕ್ಕಿಂತ ಹೆಚ್ಚಿನವರನ್ನು ನೇಮಕ ಮಾಡಿಕೊಳ್ಳುತ್ತೇವೆ ಮತ್ತು ನೇಮಿಸಿಕೊಳ್ಳುತ್ತೇವೆ ಎಂದು ಲಕ್ಕಾಡ್ ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ