ವಿಜಯ್ ಮಲ್ಯ 
ವಾಣಿಜ್ಯ

ವಿಜಯ್ ಮಲ್ಯ ಆಸ್ತಿ ಮಾರಾಟಕ್ಕೆ ಬ್ಯಾಂಕುಗಳಿಗೆ ಪಿಎಂಎಲ್‌ಎ ಕೋರ್ಟ್ ನಿಂದ ಗ್ರೀನ್ ಸಿಗ್ನಲ್

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ನ್ಯಾಯಾಲಯವು ಬ್ಯಾಂಕುಗಳಿಗೆ ವಿಜಯ್ ಮಲ್ಯಗೆ ಸೇರಿದ ಕೆಲವು ರಿಯಲ್ ಎಸ್ಟೇಟ್ ಆಸ್ತಿಗಳು ಮತ್ತು ಸೆಕ್ಯೂರಿಟಿಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟಿದೆ. 

ನವದೆಹಲಿ: ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ನ್ಯಾಯಾಲಯವು ಬ್ಯಾಂಕುಗಳಿಗೆ ವಿಜಯ್ ಮಲ್ಯಗೆ ಸೇರಿದ ಕೆಲವು ರಿಯಲ್ ಎಸ್ಟೇಟ್ ಆಸ್ತಿಗಳು ಮತ್ತು ಸೆಕ್ಯೂರಿಟಿಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟಿದೆ. 

ಆ ಮುಖೇನ ಪರಾರಿಯಾದ ಉದ್ಯಮಿಯ ಸಾಲವನ್ನು ವಸೂಲಿ ಮಾಡಲು ಅವಕಾಶ ಮಾಡಿಕೊಟ್ಟಿದೆ.

ಪಿಎಂಎಲ್‌ಎ ನ್ಯಾಯಾಲಯ 5,600 ಕೋಟಿ ರೂ. ಬಾಕಿ ಸಾಲದ ಮೊತ್ತವನ್ನು ಹಿಂಪಡೆಯಲು ವಿಜಯ್ ಮಲ್ಯ ಅವರಿಗೆ ಸೇರಿದ ಕೆಲ ರಿಯಲ್ ಎಸ್ಟೇಟ್ ಆಸ್ತಿಗಳನ್ನು  ಮತ್ತು ಸೆಕ್ಯೂರಿಟಿಯನ್ನು ಮಾರಾಟ ಮಾಡಲು ಬ್ಯಾಂಕುಗಳಿಗೆ ಅನುಮತಿ ನೀಡಿದೆ. ಇದು ಹಿಂದೆ ಜಾರಿ ನಿರ್ದೇಶನಾಲಯ ಅಡಿಯಲ್ಲಿತ್ತು ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ವಸ್ಥಾಪಕ ನಿರ್ದೇಶಕ, ಮಲ್ಲಿಕಾರ್ಜುನ ರಾವ್ ಹೇಳಿದರು.

"ಈಗ ಪ್ರಮುಖ ಬ್ಯಾಂಕ್ ಆ ಆಸ್ತಿಗಳನ್ನು ಮಾರಾಟ ಮಾಡುತ್ತದೆ. ಕಿಂಗ್‌ಫಿಶರ್‌ನಲ್ಲಿ ಪಿಎನ್‌ಬಿಗೆ ಹೆಚ್ಚಿನ ಸಾಲದ ಮಾನ್ಯತೆ ಇಲ್ಲ, ಆದರೆ ಒಮ್ಮೆ ಪ್ರಮುಖ ಬ್ಯಾಂಕ್ ಕಾರ್ಯತತ್ಪರವಾದರೆ ನಮ್ಮ ಪಾಲನ್ನು ನಾವು ಪಡೆಯುತ್ತೇವೆ" ಎಂದು ರಾವ್ ಹೇಳಿದರು.

ಮಲ್ಯ ತನ್ನ ಕಿಂಗ್‌ಫಿಶರ್ ಏರ್‌ಲೈನ್ಸ್ ಸಾಲವನ್ನು ಒಳಗೊಂಡು  9,000 ಕೋಟಿಗೂ ಅಧಿಕ ಬ್ಯಾಂಕ್ ಸಾಲ ಬಾಕಿ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಅವರೀಗ ಪ್ರಸ್ತುತ ಯುನೈಟೆಡ್ ಕಿಂಗ್‌ಡಂನಲ್ಲಿದ್ದಾರೆ. ಮಲ್ಯ ಅವರನ್ನು ಪರಾರಿಯಾದ ಆರ್ಥಿಕ ಅಪರಾಧಿ ಎಂದು 2019 ರ ಜನವರಿಯಲ್ಲಿ ಮುಂಬೈನ ವಿಶೇಷ ನ್ಯಾಯಾಲಯ ಘೋಷಿಸಿದೆ.

2013 ರಲ್ಲಿ ಕಿಂಗ್‌ಫಿಶರ್‌ನ ನಷ್ಟಕ್ಕೆ ಸಂಬಂಧಿಸಿ ಬ್ಯಾಂಕುಗಳ ಒಕ್ಕೂಟಕ್ಕೆ ಒಂದು ಶತಕೋಟಿ ಡಾಲರ್‌ಗಿಂತ ಹೆಚ್ಚಿನ ವಂಚನೆ ಮಾಡಲಾಗಿದೆ ಎಂದು ಆರೋಪವನ್ನು ಎದುರಿಸಲು ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಸರ್ಕಾರದ ಪ್ರಯತ್ನದ ವಿರುದ್ಧ ಹೋರಾಡಲು 65 ವರ್ಷ ವಯಸ್ಸಿನ ಮಲ್ಯ ಲಭ್ಯವಿರುವ ಸಂಪೂರ್ಣ ಕಾನೂನು ಕಾರ್ಯವಿಧಾನಗಳನ್ನು ಬಳಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!