ಸಾಂದರ್ಭಿಕ ಚಿತ್ರ 
ವಾಣಿಜ್ಯ

ಗ್ರಾಹಕರಿಗೆ ಬಿಗ್ ಶಾಕ್: ಕರ್ನಾಟಕದ ಹಲವು ಜಿಲ್ಲೆಗಳಲ್ಲೂ 100 ರೂ. ತಲುಪಿದ ಪೆಟ್ರೋಲ್ ದರ!

ಕರ್ನಾಟಕ ರಾಜ್ಯ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಸೋಮವಾರ (ಜೂನ್ 7ರಂದು) ಕೂಡ ಪೆಟ್ರೋಲ್ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿ ಕೊರೋನಾ ಸಂಕಷ್ಟ ಕಾಲದಲ್ಲಿ ಗ್ರಾಹಕರಿಗೆ ಬಿಗ್ ಶಾಕ್ ನೀಡಲಾಗಿದೆ. ಹಲವು ನಗರಗಳಲ್ಲಿ ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿ ದಾಟಿದೆ.

ಬೆಂಗಳೂರು/ನವದೆಹಲಿ: ಕರ್ನಾಟಕ ರಾಜ್ಯ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಸೋಮವಾರ(ಜೂನ್ 7ರಂದು) ಕೂಡ ಪೆಟ್ರೋಲ್ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿ ಕೊರೋನಾ ಸಂಕಷ್ಟ ಕಾಲದಲ್ಲಿ ಗ್ರಾಹಕರಿಗೆ ಬಿಗ್ ಶಾಕ್ ನೀಡಲಾಗಿದೆ. ಹಲವು ನಗರಗಳಲ್ಲಿ ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿ ದಾಟಿದೆ.

ಈ ಮೂಲಕ ಜೂನ್ ತಿಂಗಳ ಮೊದಲ ವಾರದಲ್ಲಿಯೇ ನಾಲ್ಕನೇ ಬಾರಿ ಇಂಧನ ಬೆಲೆ ಏರಿಕೆಯಾಗಿದೆ. ಕಳೆದ ಮೇ 4ರ ನಂತರ ಪೆಟ್ರೋಲ್ ಬೆಲೆ ಲೀಟರ್ ಗೆ 5 ರೂಪಾಯಿಗಳಷ್ಟು ಮತ್ತು ಡೀಸೆಲ್ ಬೆಲೆ ಲೀಟರ್ ಗೆ 6 ರೂಪಾಯಿಗಳಷ್ಟು ದೇಶಾದ್ಯಂತ ಏರಿಕೆಯಾಗಿದೆ.

ದೇಶದ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 95 ರೂಪಾಯಿ 31 ಪೈಸೆಗೆ ತಲುಪಿದೆ. ಡೀಸೆಲ್ ದರ ಲೀಟರ್ ಗೆ 86 ರೂಪಾಯಿ 22 ಪೈಸೆಯಷ್ಟಾಗಿದೆ.

ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಇಂಧನ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದ್ದಂತೆ ಭಾರತದಲ್ಲಿ ಕೇಂದ್ರ ಸರ್ಕಾರ ಸ್ವಾಮ್ಯದ ತೈಲ ಕಂಪೆನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಪರಿಷ್ಕರಿಸುತ್ತಿರುತ್ತವೆ.

ಕೋಲ್ಕತ್ತಾದಲ್ಲಿ ಪೆಟ್ರೋಲ್ ಗೆ 95 ರೂಪಾಯಿ 28 ಪೈಸೆ, ಡೀಸೆಲ್ ಬೆಲೆ ಲೀಟರ್ ಗೆ 89 ರೂಪಾಯಿ 07 ಪೈಸೆಯಷ್ಟಿದೆ. ಚೆನ್ನೈಯಲ್ಲಿ ಪೆಟ್ರೋಲ್ ಲೀಟರ್ ಗೆ 96 ರೂಪಾಯಿ 71 ಪೈಸೆಯಷ್ಟಿದ್ದರೆ, ಡೀಸೆಲ್ ಬೆಲೆ 90 ರೂಪಾಯಿ 92 ಪೈಸೆಯಷ್ಟಾಗಿದೆ.

ಮುಂಬೈಯಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿ ದಾಟಿ 101 ರೂಪಾಯಿ 52 ಪೈಸೆಯಷ್ಟಾಗಿದ್ದರೆ, ಡೀಸೆಲ್ ಬೆಲೆ 93 ರೂಪಾಯಿ 58 ಪೈಸೆಯಷ್ಟಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ 100 ರೂಗೆ ತಲುಪಿದ ಪೆಟ್ರೋಲ್ ದರ: ಇನ್ನು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕೂಡ ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿಗೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಇಂದು ಪೆಟ್ರೋಲ್ ದರ 97 ರೂಪಾಯಿ 92 ಪೈಸೆಯಾಗಿದ್ದರೆ, ಡೀಸೆಲ್ ಬೆಲೆ 90 ರೂಪಾಯಿ 81 ಪೈಸೆಯಾಗಿದೆ.

ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ದರ 92 ರೂಪಾಯಿ 81 ಪೈಸೆಯಷ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT