ಸಾಂದರ್ಭಿಕ ಚಿತ್ರ 
ವಾಣಿಜ್ಯ

ಗ್ರಾಹಕರಿಗೆ ಬಿಗ್ ಶಾಕ್: ಕರ್ನಾಟಕದ ಹಲವು ಜಿಲ್ಲೆಗಳಲ್ಲೂ 100 ರೂ. ತಲುಪಿದ ಪೆಟ್ರೋಲ್ ದರ!

ಕರ್ನಾಟಕ ರಾಜ್ಯ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಸೋಮವಾರ (ಜೂನ್ 7ರಂದು) ಕೂಡ ಪೆಟ್ರೋಲ್ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿ ಕೊರೋನಾ ಸಂಕಷ್ಟ ಕಾಲದಲ್ಲಿ ಗ್ರಾಹಕರಿಗೆ ಬಿಗ್ ಶಾಕ್ ನೀಡಲಾಗಿದೆ. ಹಲವು ನಗರಗಳಲ್ಲಿ ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿ ದಾಟಿದೆ.

ಬೆಂಗಳೂರು/ನವದೆಹಲಿ: ಕರ್ನಾಟಕ ರಾಜ್ಯ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಸೋಮವಾರ(ಜೂನ್ 7ರಂದು) ಕೂಡ ಪೆಟ್ರೋಲ್ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿ ಕೊರೋನಾ ಸಂಕಷ್ಟ ಕಾಲದಲ್ಲಿ ಗ್ರಾಹಕರಿಗೆ ಬಿಗ್ ಶಾಕ್ ನೀಡಲಾಗಿದೆ. ಹಲವು ನಗರಗಳಲ್ಲಿ ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿ ದಾಟಿದೆ.

ಈ ಮೂಲಕ ಜೂನ್ ತಿಂಗಳ ಮೊದಲ ವಾರದಲ್ಲಿಯೇ ನಾಲ್ಕನೇ ಬಾರಿ ಇಂಧನ ಬೆಲೆ ಏರಿಕೆಯಾಗಿದೆ. ಕಳೆದ ಮೇ 4ರ ನಂತರ ಪೆಟ್ರೋಲ್ ಬೆಲೆ ಲೀಟರ್ ಗೆ 5 ರೂಪಾಯಿಗಳಷ್ಟು ಮತ್ತು ಡೀಸೆಲ್ ಬೆಲೆ ಲೀಟರ್ ಗೆ 6 ರೂಪಾಯಿಗಳಷ್ಟು ದೇಶಾದ್ಯಂತ ಏರಿಕೆಯಾಗಿದೆ.

ದೇಶದ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 95 ರೂಪಾಯಿ 31 ಪೈಸೆಗೆ ತಲುಪಿದೆ. ಡೀಸೆಲ್ ದರ ಲೀಟರ್ ಗೆ 86 ರೂಪಾಯಿ 22 ಪೈಸೆಯಷ್ಟಾಗಿದೆ.

ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಇಂಧನ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದ್ದಂತೆ ಭಾರತದಲ್ಲಿ ಕೇಂದ್ರ ಸರ್ಕಾರ ಸ್ವಾಮ್ಯದ ತೈಲ ಕಂಪೆನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಪರಿಷ್ಕರಿಸುತ್ತಿರುತ್ತವೆ.

ಕೋಲ್ಕತ್ತಾದಲ್ಲಿ ಪೆಟ್ರೋಲ್ ಗೆ 95 ರೂಪಾಯಿ 28 ಪೈಸೆ, ಡೀಸೆಲ್ ಬೆಲೆ ಲೀಟರ್ ಗೆ 89 ರೂಪಾಯಿ 07 ಪೈಸೆಯಷ್ಟಿದೆ. ಚೆನ್ನೈಯಲ್ಲಿ ಪೆಟ್ರೋಲ್ ಲೀಟರ್ ಗೆ 96 ರೂಪಾಯಿ 71 ಪೈಸೆಯಷ್ಟಿದ್ದರೆ, ಡೀಸೆಲ್ ಬೆಲೆ 90 ರೂಪಾಯಿ 92 ಪೈಸೆಯಷ್ಟಾಗಿದೆ.

ಮುಂಬೈಯಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿ ದಾಟಿ 101 ರೂಪಾಯಿ 52 ಪೈಸೆಯಷ್ಟಾಗಿದ್ದರೆ, ಡೀಸೆಲ್ ಬೆಲೆ 93 ರೂಪಾಯಿ 58 ಪೈಸೆಯಷ್ಟಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ 100 ರೂಗೆ ತಲುಪಿದ ಪೆಟ್ರೋಲ್ ದರ: ಇನ್ನು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕೂಡ ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿಗೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಇಂದು ಪೆಟ್ರೋಲ್ ದರ 97 ರೂಪಾಯಿ 92 ಪೈಸೆಯಾಗಿದ್ದರೆ, ಡೀಸೆಲ್ ಬೆಲೆ 90 ರೂಪಾಯಿ 81 ಪೈಸೆಯಾಗಿದೆ.

ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ದರ 92 ರೂಪಾಯಿ 81 ಪೈಸೆಯಷ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT