ಇನ್ಫೊಸಿಸ್ 
ವಾಣಿಜ್ಯ

ವಾರದೊಳಗೆ ವ್ಯವಸ್ಥೆ ಸರಿಹೋಗುವ ವಿಶ್ವಾಸವಿದೆ: ಐಟಿ ರಿಟರ್ನ್ಸ್ ವೆಬ್ ಸೈಟ್ ತಾಂತ್ರಿಕ ದೋಷ ಕುರಿತು ಇನ್ಫೋಸಿಸ್ ಹೇಳಿಕೆ

ಸೋಮವಾರವಷ್ಟೇ ಹೊಸದಾಗಿ ಬಿಡುಗಡೆಯಾಗಿದ್ದ ಆದಾಯ ತೆರಿಗೆ ಇಲಾಖೆಯ ಹೊಸ ವೆಬ್‌ಸೈಟ್‌ ಗೊಂದಲ ಮಂಗಳವಾರವೂ ಮುಂದುವರೆದಿದ್ದು, ವಾರದೊಳಗೆ ವ್ಯವಸ್ಥೆ ಸರಿಹೋಗುವ ವಿಶ್ವಾಸವಿದೆ ಎಂದು ವೆಬ್ ಸೈಟ್ ನಿರ್ವಹಿಸುತ್ತಿರುವ ಟೆಕ್ ದೈತ್ಯ ಇನ್ಫೋಸಿಸ್ ಹೇಳಿದೆ.

ನವದೆಹಲಿ: ಸೋಮವಾರವಷ್ಟೇ ಹೊಸದಾಗಿ ಬಿಡುಗಡೆಯಾಗಿದ್ದ ಆದಾಯ ತೆರಿಗೆ ಇಲಾಖೆಯ ಹೊಸ ವೆಬ್‌ಸೈಟ್‌ ಗೊಂದಲ ಮಂಗಳವಾರವೂ ಮುಂದುವರೆದಿದ್ದು, ವಾರದೊಳಗೆ ವ್ಯವಸ್ಥೆ ಸರಿಹೋಗುವ ವಿಶ್ವಾಸವಿದೆ ಎಂದು ವೆಬ್ ಸೈಟ್ ನಿರ್ವಹಿಸುತ್ತಿರುವ ಟೆಕ್ ದೈತ್ಯ ಇನ್ಫೋಸಿಸ್ ಹೇಳಿದೆ.

ಮಂಗಳವಾರ ಕೂಡ ತೆರಿಗೆ ಇಲಾಖೆಯ ನೂತನ ವೆಬ್ ಸೈಟ್ ನ ತಾಂತ್ರಿಕ ದೋಷ ಮುಂದುವರೆದಿದ್ದು, ಪರಿಣಾಮ ಸ್ವತಃ ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್‌ ಅವರೇ ಟ್ವೀಟರ್‌ ಮೂಲಕ, ವೆಬ್‌ಸೈಟ್‌ ಆಧುನೀಕರಿಸಿದ್ದ ಇಸ್ಫೋಸಿಸ್‌ ಮತ್ತು ಅದರ ಮುಖ್ಯಸ್ಥ ನಂದನ್‌ ನಿಲೇಕಣಿ ವಿರುದ್ಧ  ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  

ಈ ಕುರಿತಂತೆ ಟ್ವೀಟ್ ಮಾಡಿದ್ದ ನಿರ್ಮಲಾ ಸೀತಾರಾಮನ್, 'ಹಲವು ಬಳಕೆದಾರರು ಪೋರ್ಟಲ್‌ ಬಗ್ಗೆ ಟ್ವೀಟರ್‌ನಲ್ಲಿ ಸಾಲು ಸಾಲು ದೂರು ದಾಖಲಿಸುತ್ತಿದ್ದಾರೆ. ನನ್ನ ಟ್ವೀಟರ್‌ ಟೈಮ್‌ಲೈನ್‌ನಲ್ಲಿ ವೆಬ್‌ಪೋರ್ಟಲ್‌ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಸೇವೆಯ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಇನ್ಪೋಸಿಸ್‌ ಮತ್ತು  ನಂದನ್‌ ನಿಕಲೇಣಿ ತೆರಿಗೆದಾರರನ್ನು ನಿರಾಸೆ ಮಾಡುವುದಿಲ್ಲ ಎಂದು ಭಾವಿಸುತ್ತೇನೆ. ತೆರಿಗೆದಾರರಿಗೆ ಗುಣಮಟ್ಟದ ಸೇವೆ ನೀಡುವುದು ನಮ್ಮ ಆದ್ಯತೆಯಾಗಿರಬೇಕು ಎಂದು ಹೇಳಿದ್ದಾರೆ.

ಅತ್ತ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡುತ್ತಲೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಇನ್ಫೋಸಿಸ್ ಸಂಸ್ಥೆ, 'ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ನಮ್ಮ ತಂಡಗಳು ಪ್ರಗತಿ ಸಾಧಿಸುತ್ತಿವೆ. ವಾರದ ಅವಧಿಯಲ್ಲಿ ವ್ಯವಸ್ಥೆಯು ಸ್ಥಿರಗೊಳ್ಳುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಟ್ವೀಟ್ ಮಾಡಿದೆ.

ಇನ್ನು ಮುಂದಿನ ಪೀಳಿಗೆಯ ಆದಾಯ ತೆರಿಗೆ ಸಲ್ಲಿಕೆ ವ್ಯವಸ್ಥೆಯನ್ನು 63 ದಿನಗಳಿಂದ ಒಂದು ದಿನಕ್ಕೆ ಇಳಿಸಲು ಮತ್ತು ಮರುಪಾವತಿಯನ್ನು ತ್ವರಿತಗೊಳಿಸಲು ಇನ್ಫೋಸಿಸ್ ನೊಂದಿಗೆ ಕೇಂದ್ರ ಆದಾಯ ತೆರಿಗೆ ಇಲಾಖೆ 2019 ರಲ್ಲಿಸ ವೆಬ್ ಸೈಟ್ ನಿರ್ವಹಣೆ ಸಂಬಂಧ ಒಪ್ಪಂದ ಮಾಡಿಕೊಂಡಿತ್ತು. ಅದರಂತೆ  ನೂತನ ವೆಬ್ ಸೈಟ್ ಗೆ ಸೋಮವಾರ ಚಾಲನೆ ನೀಡಲಾಗಿತ್ತು. ಆದರೆ ಆರಂಭವಾದ ಮೊದಲ ದಿನವೇ ಪೋರ್ಟಲ್ ನಲ್ಲಿ ಹಲವು ತಾಂತ್ರಿಕ ದೋಷಗಳು ಕಂಡಬಂದಿತ್ತು. ಈ ಬಗ್ಗೆ ನಂದನ್ ನೀಲೇಕಣಿ ಅವರು ತಾಂತ್ರಿಕ ದೋಷ ಸರಿಪಡಿಸಲು ನಮ್ಮ ತಂಡಗಳು ಕಾರ್ಯಪ್ರವೃತ್ತವಾಗಿವೆ ಎಂದು ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT