ಕಿರಣ್‍ ಮಜುಂದಾರ್ ಶಾ 
ವಾಣಿಜ್ಯ

ದೇಶದ ಕೋವಿಡ್ ವ್ಯಾಕ್ಸಿನೇಷನ್ ಪರಿಸ್ಥಿತಿಯನ್ನು ಅರೆಂಜ್ ಮದುವೆಗೆ ಹೋಲಿಸಿದ ಕಿರಣ್ ಮಜುಂದರಾ ಶಾ

ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ದೇಶದ ಕೋವಿಡ್ -19 ವ್ಯಾಕ್ಸಿನೇಷನ್ ಪರಿಸ್ಥಿತಿಯನ್ನು ಅರೆಂಜ್ ಮದುವೆಗೆ ಹೋಲಿಸಿದ್ದಾರೆ.

ನವದೆಹಲಿ: ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ದೇಶದ ಕೋವಿಡ್ -19 ವ್ಯಾಕ್ಸಿನೇಷನ್ ಪರಿಸ್ಥಿತಿಯನ್ನು ಅರೆಂಜ್ ಮದುವೆಗೆ ಹೋಲಿಸಿದ್ದಾರೆ.

"ಭಾರತದಲ್ಲಿ ಲಸಿಕೆ ಪರಿಸ್ಥಿತಿಯು ಅರೆಂಜ್ ಮದುವೆಯಂತಿದೆ. ಮೊದಲು ಲಸಿಕೆ ಪಡೆಯಲು ಯಾರೂ ಸಿದ್ಧರಿರಲಿಲ್ಲ, ನಂತರ  ಯಾವುದನ್ನೂ ಇಷ್ಟಪಡುವುದಿಲ್ಲ ಎಂದರು. ಬಳಿಕ ಯಾವುದನ್ನೂ ಪಡೆಯುವುದಿಲ್ಲ ಎಂದರು!! ಲಸಿಕೆ ಪಡೆದರೂ ತೃಪ್ತಿಕರವಾಗಿರದೇ ಮತ್ತೊಂದು ಉತ್ತಮವಾಗಿರಬಹುದು ಎಂದು ಯೋಜಿಸಲು ಆರಂಭ. ಈಗ ಯಾವ ಲಸಿಕೆಯನ್ನು ಪಡೆಯದವರು ಯಾವುದಾದರೂ ಒಂದು ಸಿಕ್ಕರೆ ಸಾಕು ಎನ್ನುತ್ತಿದ್ದಾರೆ" ಎಂದು ಮಜುಂದಾರ್ ಶಾ ಟ್ವೀಟ್ ಮಾಡಿದ್ದಾರೆ.

ಈ ವಾರದ ಆರಂಭದಲ್ಲಿ, ಕೊರೋನಾ ಲಸಿಕೆ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಮಜುಂದಾರ್ ಶಾ ಅವರು, ನಾಗರಿಕರು ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಬೇಕು ಮತ್ತು ಕೇಂದ್ರ ಸರ್ಕಾರ ಸಹ ಲಸಿಕೆ ಲಭ್ಯತೆಯ ಬಗ್ಗೆ ಉತ್ತಮ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದಿದ್ದರು.

ಲಸಿಕೆಗಳ ಪೂರೈಕೆ ಏಕೆ ಕಡಿಮೆಯಾಗಿದೆ? ಪ್ರತಿ ತಿಂಗಳು 70 ಮಿಲಿಯನ್ ಡೋಸ್‌ಗಳನ್ನು ಎಲ್ಲಿ ನಿಯೋಜಿಸಲಾಗುತ್ತಿದೆ ಎಂದು ನಾವು ತಿಳಿಯಬಹುದೇ? ಈ ಸಸ್ಪೆನ್ಸ್ ತಪ್ಪಿಸಲು ನಮಗೆ ಉತ್ತಮ ಪಾರದರ್ಶಕತೆ ಬೇಕು. ಸರಬರಾಜಿನ ವೇಳಾಪಟ್ಟಿಯನ್ನು ಪ್ರಕಟಿಸಿದರೆ ಸಾರ್ವಜನಿಕರು ತಮ್ಮ ಸರದಿ ಬರುವವರೆಗೆ ತಾಳ್ಮೆಯಿಂದ ಕಾಯಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯವನ್ನು ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT