ಏರ್ ಇಂಡಿಯಾ 
ವಾಣಿಜ್ಯ

ಏರ್ ಇಂಡಿಯಾ ಮೇಲೆ ಬೃಹತ್ ಸೈಬರ್ ದಾಳಿ: 45 ಲಕ್ಷ ಪ್ರಯಾಣಿಕರ ಕ್ರೆಡಿಟ್ ಕಾರ್ಡ್, ಪಾಸ್‌ ಪೋರ್ಟ್ ವಿವರ ಸೋರಿಕೆ

ಭಾರತ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಮೇಲೆ ಶುಕ್ರವಾರ ಬೃಹತ್ ಪ್ರಮಾಣದ ಸೈಬರ್ ದಾಳಿ ನಡೆದಿದೆ. ಇದರಲ್ಲಿ ಲಕ್ಷಾಂತರ ಪ್ರಯಾಣಿಕರ ವೈಯಕ್ತಿಕ ವಿವರಗಳನ್ನು ಕಳವು ಮಾಡಲಾಗಿದೆ. ಕದ್ದ ದತ್ತಾಂಶವು ಪಾಸ್‌ಪೋರ್ಟ್ ಮತ್ತು ಪ್ರಯಾಣಿಕರ ಕ್ರೆಡಿಟ್ ಕಾರ್ಡ್ ವಿವರಗಳಂತಹ ಸೂಕ್ಷ್ಮ ಮಾಹಿತಿಯನ್ನು ಒಳಗೊಂಡಿದೆ ಎಂದು ಸಂಸ್ಥೆ ಖಚಿತಪಡಿಸಿದೆ.

ಚೆನ್ನೈ: ಭಾರತ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಮೇಲೆ ಶುಕ್ರವಾರ ಬೃಹತ್ ಪ್ರಮಾಣದ ಸೈಬರ್ ದಾಳಿ ನಡೆದಿದೆ. ಇದರಲ್ಲಿ ಲಕ್ಷಾಂತರ ಪ್ರಯಾಣಿಕರ ವೈಯಕ್ತಿಕ ವಿವರಗಳನ್ನು ಕಳವು ಮಾಡಲಾಗಿದೆ. ಕದ್ದ ದತ್ತಾಂಶವು ಪಾಸ್‌ಪೋರ್ಟ್ ಮತ್ತು ಪ್ರಯಾಣಿಕರ ಕ್ರೆಡಿಟ್ ಕಾರ್ಡ್ ವಿವರಗಳಂತಹ ಸೂಕ್ಷ್ಮ ಮಾಹಿತಿಯನ್ನು ಒಳಗೊಂಡಿದೆ ಎಂದು ಸಂಸ್ಥೆ ಖಚಿತಪಡಿಸಿದೆ.

ಈ ಘಟನೆಯು ವಿಶ್ವದ ಸುಮಾರು 4,500,000 ದತ್ತಾಂಶದ ಮೇಲೆ ಪರಿಣಾಮ ಬೀರಿದೆ ಮತ್ತು ಆಗಸ್ಟ್ 26, 2011 ಮತ್ತು ಫೆಬ್ರವರಿ 3, 2021 ರ ನಡುವೆ ನೋಂದಾಯಿಸಲಾದ ವೈಯಕ್ತಿಕ ಡೇಟಾವನ್ನು ಒಳಗೊಂಡಿರುತ್ತದೆ ಎಂದು ಏರ್ ಇಂಡಿಯಾ ಕಮ್ಯೂನ್ ನಲ್ಲಿ ತಿಳಿಸಿದೆ.

"ಪ್ರಯಾಣಿಕರ ಸೇವಾ ವ್ಯವಸ್ಥೆಯ ನಮ್ಮ ಡೇಟಾ ಪ್ರೊಸೆಸರ್ (ಪ್ರಯಾಣಿಕರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುವ ಮತ್ತು ಸಂಸ್ಕರಿಸುವ ಜವಾಬ್ದಾರಿಯನ್ನು ಹೊಂದಿರುವ) ಸಿಟಾ ಪಿಎಸ್ಎಸ್ ಮೇಲೆ ಸೈಬರ್ ಕಳ್ಳರು ದಾಳಿ ಮಾಡಿದ್ದಾರೆ.ಇದು ಕೆಲವು ಪ್ರಯಾಣಿಕರ ವೈಯಕ್ತಿಕ ಡೇಟಾ ಸೋರಿಕೆಗೆ ಕಾರಣವಾಗುತ್ತದೆ. ಈ ಘಟನೆಯು ವಿಶ್ವದ ಸುಮಾರು 4,500,000 ದತ್ತಾಂಶದ  ಮೇಲೆ ಪರಿಣಾಮ ಬೀರಿದೆ "ಎಂದು ಸಂಸ್ಥೆಯ ಹೇಳಿಕೆಯಲ್ಲಿ ತಿಳಿಸಿದೆ.

"ಇದರಲ್ಲಿ ಹೆಸರು, ಹುಟ್ಟಿದ ದಿನಾಂಕ, ಸಂಪರ್ಕ ಮಾಹಿತಿ, ಪಾಸ್ ಪೋರ್ಟ್ ಮಾಹಿತಿ, ಟಿಕೆಟ್ ಮಾಹಿತಿ, ಸ್ಟಾರ್ ಅಲೈಯನ್ಸ್ ಮತ್ತು ಏರ್ ಇಂಡಿಯಾಫ್ಲೈಯರ್ ಡೇಟಾ (ಪಾಸ್ ವರ್ಡ್ ಹೊರತು), ಕ್ರೆಡಿಟ್ ಕಾರ್ಡ್‌ಗಳ ಡೇಟಾ ಸೇರಿದೆ."

ಇನ್ನು ಸಂಸ್ಥೆ "ನಾವು ಮತ್ತು ನಮ್ಮ ಡೇಟಾ ಪ್ರೊಸೆಸರ್ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುತ್ತಲೇ ಇದ್ದೇವೆ. ಪ್ರಯಾಣಿಕರು ತಮ್ಮ ವೈಯಕ್ತಿಕ ಡೇಟಾದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾದಾಗಲೆಲ್ಲಾ ಪಾಸ್‌ವರ್ಡ್‌ಗಳನ್ನು ಬದಲಾಯಿಸುವಂತೆ ನಾವು ಕೇಳುತ್ತೇವೆ" ಎಂದು ಹೇಳಿದೆ.

ಆದರೆ, ಕ್ರೆಡಿಟ್ ಕಾರ್ಡ್ ಹೊಂದಿರುವವರ ಸಿವಿವಿ / ಸಿವಿಸಿ ಡೇಟಾವನ್ನು ಸಂಗ್ರಹಿಸಲಾಗಿಲ್ಲ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಏರ್ ಇಂಡಿಯಾದ ಮೂಲಗಳ ಪ್ರಕಾರ, ಈ ದಾಳಿಗೆ ಒಳಗಾದ  ಪ್ರಯಾಣಿಕರಿಗೆ ಸಹಾಯ ಮಾಡಲು ಸಂಸ್ಥೆ ಕಾಲ್ ಸೆಂಟರ್ ಅನ್ನು ಸ್ಥಾಪಿಸಿದೆ. "ಏರ್ ಇಂಡಿಯಾ ಏತನ್ಮಧ್ಯೆ ಭಾರತ ಮತ್ತು ವಿದೇಶಗಳಲ್ಲಿನ ವಿವಿಧ ನಿಯಂತ್ರಕ ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿದೆ, ಮತ್ತು ಈ ಘಟನೆಯ ಬಗ್ಗೆ ಅದರ ಜವಾಬ್ದಾರಿಗಳಿಗೆ ಅನುಗುಣವಾಗಿ ಅವರಿಗೆ ತಿಳಿಸಿದೆ" ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT