ಸ್ಪುಟ್ನಿಕ್ ವಿ ಲಸಿಕೆ 
ವಾಣಿಜ್ಯ

ಆರ್ ಡಿಐಎಫ್, ಪ್ಯಾನೇಶಿಯಾ ಬಯೋಟೆಕ್ ಸಹಭಾಗಿತ್ವದಲ್ಲಿ ದೇಶದಲ್ಲಿ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆ ಆರಂಭ!

ರಷ್ಯಾದ ಸಾರ್ವಭೌಮತ್ವ ಸಂಪತ್ತು ನಿಧಿ ಸಹಭಾಗಿತ್ವದಲ್ಲಿ ದೇಶದ ಪ್ರಮುಖ ಔಷಧೀಯ ಕಂಪನಿ ಪ್ಯಾನೇಶಿಯಾ ಬಯೋಟೆಕ್ ಭಾರತದಲ್ಲಿ ಸ್ಪುಟ್ನಿಕ್ ವಿ ಕೋವಿಡ್-19 ಲಸಿಕೆಯನ್ನು ಉತ್ಪಾದನೆಯನ್ನು ಆರಂಭಿಸಿದೆ ಎಂದು ಜಂಟಿ ಹೇಳಿಕೆಯೊಂದರಲ್ಲಿ ಸೋಮವಾರ ತಿಳಿಸಲಾಗಿದೆ.

ನವದೆಹಲಿ: ರಷ್ಯಾದ ಸಾರ್ವಭೌಮತ್ವ ಸಂಪತ್ತು ನಿಧಿ ಸಹಭಾಗಿತ್ವದಲ್ಲಿ ದೇಶದ ಪ್ರಮುಖ ಔಷಧೀಯ ಕಂಪನಿ ಪ್ಯಾನೇಶಿಯಾ ಬಯೋಟೆಕ್ ಭಾರತದಲ್ಲಿ ಸ್ಪುಟ್ನಿಕ್ ವಿ ಕೋವಿಡ್-19 ಲಸಿಕೆಯನ್ನು ಉತ್ಪಾದನೆಯನ್ನು ಆರಂಭಿಸಿದೆ ಎಂದು ಜಂಟಿ ಹೇಳಿಕೆಯೊಂದರಲ್ಲಿ ಸೋಮವಾರ ತಿಳಿಸಲಾಗಿದೆ.

ರಷ್ಯಾ ನೇರ ಹೂಡಿಕೆ ನಿಧಿ ( ಆರ್ ಡಿಐಎಫ್ ) ಲಸಿಕೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರಾಟ ಮಾಡಲು ಮತ್ತು ಪ್ಯಾನೇಶಿಯಾ ಬಯೋಟೆಕ್ ಭಾರತದಲ್ಲಿ ಪ್ರತಿ ವರ್ಷ 100 ಮಿಲಿಯನ್ ಡೋಸ್ ಸ್ಪುಟ್ನಿಕ್ ವಿ ಲಸಿಕೆ ತಯಾರಿಸಲು ಒಪ್ಪಿಕೊಂಡಿರುವುದಾಗಿ ಏಪ್ರಿಲ್ ನಲ್ಲಿ ಘೋಷಿಸಲಾಗಿತ್ತು.

ಹಿಮಾಚಲ ಪ್ರದೇಶದ ಬಾಡ್ಡಿಯಲ್ಲಿ ಪ್ಯಾನೇಶಿಯಾ ಬಯೋಟೆಕ್ ಉತ್ಪಾದಿಸುವ ಮೊದಲ ಹಂತದ ಕೋವಿಡ್-19 ಲಸಿಕೆಯ ಗುಣಮಟ್ಟ ನಿಯಂತ್ರಣಕ್ಕಾಗಿ ರಷ್ಯಾದ ಗಾಮೆಲೆಯಾ ಸೆಂಟರ್ ಗೆ ಕಳುಹಿಸಲಾಗುವುದು, ಪೂರ್ಣ ಪ್ರಮಾಣದ ಲಸಿಕೆ ಉತ್ಪಾದನೆ ಈ ವರ್ಷದ ಬೇಸಿಗೆಯಲ್ಲಿ ಆರಂಭವಾಗುವ ಸಾಧ್ಯತೆಯಿರುವುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ. 

ಪ್ಯಾನೇಶಿಯಾ ಬಯೋಟೆಕ್ ಸಹಭಾಗಿತ್ವದಲ್ಲಿ ಲಸಿಕೆ ಉತ್ಪಾದನೆ ಆರಂಭಿಸುತ್ತಿರುವುದು ಕೋವಿಡ್ ಸಾಂಕ್ರಾಮಿಕ ವಿರುದ್ಧದ ದೇಶದ
ಹೋರಾಟದಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಆರ್ ಡಿಐಎಫ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಿರಿಲ್ ಡೆಮಿಟ್ರಿವ್ ಹೇಳಿದ್ದಾರೆ.

ಆರ್ ಡಿಐಎಫ್ ಸಹಭಾಗಿತ್ವದಲ್ಲಿ ಸ್ಪುಟ್ನಿಕ್ ವಿ ಲಸಿಕೆ ಆರಂಭಿಸುತ್ತಿರುವುದು ಮಹತ್ವದ ಹೆಜ್ಜೆಯಾಗಿದೆ. ದೇಶ ಹಾಗೂ ವಿಶ್ವದಾದ್ಯಂತ
 ಸಹಜ ಪರಿಸ್ಥಿತಿಯನ್ನು ಮರಳಿ ತರಲು ನೆರವಾಗಲಿದೆ ಎಂಬ ಭರವಸೆಯಿದೆ ಎಂದು ಪ್ಯಾನೇಶಿಯಾ ಬಯೋಟೆಕ್ ವ್ಯವಸ್ಥಾಪಕ
ನಿರ್ದೇಶಕ ರಾಜೇಶ್ ಜೈನ್ ಹೇಳಿದ್ದಾರೆ.

ಕೊರೋನಾ ವಿರುದ್ಧ ರಷ್ಯಾ ನಿರ್ಮಿತ ಸ್ಪುಟ್ನಿಕ್ ವಿ ಲಸಿಕೆಯನ್ನು ಮೇ 14ರಿಂದ ಬಳಸಲಾಗುತ್ತಿದ್ದು, ದೇಶದಲ್ಲಿ  ತುರ್ತು ಸಂದರ್ಭಗಳಲ್ಲಿ ಬಳಸಲು ಈ ಲಸಿಕೆ ನೋಂದಣಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT