ಸಂಗ್ರಹ ಚಿತ್ರ 
ವಾಣಿಜ್ಯ

ಜೂನ್ 1 ರಿಂದ ದೇಶೀ ವಿಮಾನಯಾನ ದುಬಾರಿ: ಎಲ್ಲಿಂದೆಲ್ಲಿಗೆ ಎಷ್ಟು ದರ ಇಲ್ಲಿದೆ ಮಾಹಿತಿ...

ದೇಶೀಯ ವಿಮಾನಗಳ ಮೇಲಿನ ಕಡಿಮೆ ಅಂತರದ ಪ್ರಯಾಣ ದರದ ಮಿತಿಯನ್ನು ಶೇಕಡ 13 ರಿಂದ 16 ಕ್ಕೆ ಏರಿಸಲು ನಾಗರಿಕ ವಿಮಾನಯಾನ ಸಚಿವಾಲಯ (MoCA ) ನಿರ್ಧರಿಸಿದ ಕಾರಣ ದೇಶದೊಳಗಿನ ವಿಮಾನಯಾನ ದುಬಾರಿಯಾಗಲಿದೆ. ನೂತನ ನೀತಿ ಜೂನ್ 1 ರಿಂದ ಜಾರಿಗೆ ಬರಲಿದೆ.

ನವದೆಹಲಿ:  ದೇಶೀಯ ವಿಮಾನಗಳ ಮೇಲಿನ ಕಡಿಮೆ ಅಂತರದ ಪ್ರಯಾಣ ದರದ ಮಿತಿಯನ್ನು ಶೇಕಡ 13 ರಿಂದ 16 ಕ್ಕೆ ಏರಿಸಲು ನಾಗರಿಕ ವಿಮಾನಯಾನ ಸಚಿವಾಲಯ (MoCA ) ನಿರ್ಧರಿಸಿದ ಕಾರಣ ದೇಶದೊಳಗಿನ ವಿಮಾನಯಾನ ದುಬಾರಿಯಾಗಲಿದೆ. ನೂತನ ನೀತಿ ಜೂನ್ 1 ರಿಂದ ಜಾರಿಗೆ ಬರಲಿದೆ.

ಶುಕ್ರವಾರ ಸಚಿವಾಲಯದ ಆದೇಶದಂತೆ, "40 ನಿಮಿಷಗಳಿಗಿಂತ ಕಡಿಮೆ ಅವಧಿಯ ದೇಶೀಯ ಪ್ರಯಾಣದ ದರವನ್ನು 2,300 ರೂ.ಗಳಿಂದ 2,600 ರೂ.ಗೆ ಹೆಚ್ಚಿಸಲಾಗುವುದು, ಇದು ಪ್ರಸ್ತುತ ದರದ ಶೇಕಡಾ 13 ರಷ್ಟು ಹೆಚ್ಚಾಗಿದೆ." 

40 ನಿಮಿಷದಿಂದ ಒಂದು ಗಂಟೆಯ ನಡುವಿನ ಅವಧಿಯನ್ನು ಹೊಂದಿರುವ ವಿಮಾನಗಳು 3,300 ರೂ.ಗಳ ದರ ಹೊಂದಿರಲಿದೆ. ಇದಕ್ಕೆ ಹಿಂದೆ ಇವುಗಳಿಗೆ 2,900 ರೂ. ದರವಿತ್ತು.

ಅಂತೆಯೇ, 60-90 ನಿಮಿಷಗಳ ನಡುವಿನ ವಿಮಾನಯಾನಕ್ಕೆ 4,000 ರೂ, 90-120 ನಿಮಿಷ 4,700 ರೂ, 150-180 ನಿಮಿಷ 6,100 ಮತ್ತು 180-210 ನಿಮಿಷಗಳಿಗೆ 7,400 ರೂ. ನಿಗದಿಪಡಿಸಲಾಗುವುದು. ಉದಾಹರಣೆಗೆ ದೆಹಲಿ-ಮುಂಬೈ ವಿಮಾನವು ಪ್ರಸ್ತುತ ದರಕ್ಕಿಂತ 700 ರೂ. ಹೆಚ್ಚಳವಾಗಲಿದೆ.

ಪ್ರಯಾಣಿಕರ ಸಂಖ್ಯೆ ವಿಮಾನಯಾನ ದರದ ಹೆಚ್ಚಳಕ್ಕೆ ಕಾರಣವಾಗಿದೆ. ಕೊರೋನಾ ಸಾಂಕ್ರಾಮಿಕದ ಎರಡನೇ ಅಲೆಯಲ್ಲಿ ಸೋಂಕಿನ ಹೆಚ್ಚಳ  ದೇಶೀಯ ವಾಯುಯಾನದಲ್ಲಿ ಇಳಿಕೆಯನ್ನು ತಂದಿದೆ."ದೇಶಾದ್ಯಂತ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿನ ಹಠಾತ್ ಉಲ್ಬಣ, ಪ್ರಯಾಣಿಕರ ದಟ್ಟಣೆ ಇಳಿಕೆ  ಗಮನದಲ್ಲಿಟ್ಟುಕೊಂಡು, ಈಗಿರುವ ಶೇ .80 ರಷ್ಟು ಸಾಮರ್ಥ್ಯದ ಕ್ಯಾಪ್ ಅನ್ನು ಶೇಕಡಾ 50 ರಷ್ಟು ಸಾಮರ್ಥ್ಯ ಎಂದು ಪರಿಗಣಿಸಬಹುದು " ಎಂದು ಸಚಿವಾಲಯದ ಆದೇಶ ಹೇಳಿದೆ.

ದೇಶೀಯ ಶುಲ್ಕ ಬೆಲೆ ಮಿತಿಯಲ್ಲಿ ತೆರಿಗೆಗಳು ಮತ್ತು ವಿಮಾನ ನಿಲ್ದಾಣ ಅಭಿವೃದ್ಧಿ ಶುಲ್ಕಗಳು (ಎಡಿಎಫ್) ಇರುವುದಿಲ್ಲ, ಇದನ್ನು ಪ್ರಯಾಣಿಕರು ಪಾವತಿಸಬೇಕಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?