ಸಂಗ್ರಹ ಚಿತ್ರ 
ವಾಣಿಜ್ಯ

ಜೂನ್ 1 ರಿಂದ ದೇಶೀ ವಿಮಾನಯಾನ ದುಬಾರಿ: ಎಲ್ಲಿಂದೆಲ್ಲಿಗೆ ಎಷ್ಟು ದರ ಇಲ್ಲಿದೆ ಮಾಹಿತಿ...

ದೇಶೀಯ ವಿಮಾನಗಳ ಮೇಲಿನ ಕಡಿಮೆ ಅಂತರದ ಪ್ರಯಾಣ ದರದ ಮಿತಿಯನ್ನು ಶೇಕಡ 13 ರಿಂದ 16 ಕ್ಕೆ ಏರಿಸಲು ನಾಗರಿಕ ವಿಮಾನಯಾನ ಸಚಿವಾಲಯ (MoCA ) ನಿರ್ಧರಿಸಿದ ಕಾರಣ ದೇಶದೊಳಗಿನ ವಿಮಾನಯಾನ ದುಬಾರಿಯಾಗಲಿದೆ. ನೂತನ ನೀತಿ ಜೂನ್ 1 ರಿಂದ ಜಾರಿಗೆ ಬರಲಿದೆ.

ನವದೆಹಲಿ:  ದೇಶೀಯ ವಿಮಾನಗಳ ಮೇಲಿನ ಕಡಿಮೆ ಅಂತರದ ಪ್ರಯಾಣ ದರದ ಮಿತಿಯನ್ನು ಶೇಕಡ 13 ರಿಂದ 16 ಕ್ಕೆ ಏರಿಸಲು ನಾಗರಿಕ ವಿಮಾನಯಾನ ಸಚಿವಾಲಯ (MoCA ) ನಿರ್ಧರಿಸಿದ ಕಾರಣ ದೇಶದೊಳಗಿನ ವಿಮಾನಯಾನ ದುಬಾರಿಯಾಗಲಿದೆ. ನೂತನ ನೀತಿ ಜೂನ್ 1 ರಿಂದ ಜಾರಿಗೆ ಬರಲಿದೆ.

ಶುಕ್ರವಾರ ಸಚಿವಾಲಯದ ಆದೇಶದಂತೆ, "40 ನಿಮಿಷಗಳಿಗಿಂತ ಕಡಿಮೆ ಅವಧಿಯ ದೇಶೀಯ ಪ್ರಯಾಣದ ದರವನ್ನು 2,300 ರೂ.ಗಳಿಂದ 2,600 ರೂ.ಗೆ ಹೆಚ್ಚಿಸಲಾಗುವುದು, ಇದು ಪ್ರಸ್ತುತ ದರದ ಶೇಕಡಾ 13 ರಷ್ಟು ಹೆಚ್ಚಾಗಿದೆ." 

40 ನಿಮಿಷದಿಂದ ಒಂದು ಗಂಟೆಯ ನಡುವಿನ ಅವಧಿಯನ್ನು ಹೊಂದಿರುವ ವಿಮಾನಗಳು 3,300 ರೂ.ಗಳ ದರ ಹೊಂದಿರಲಿದೆ. ಇದಕ್ಕೆ ಹಿಂದೆ ಇವುಗಳಿಗೆ 2,900 ರೂ. ದರವಿತ್ತು.

ಅಂತೆಯೇ, 60-90 ನಿಮಿಷಗಳ ನಡುವಿನ ವಿಮಾನಯಾನಕ್ಕೆ 4,000 ರೂ, 90-120 ನಿಮಿಷ 4,700 ರೂ, 150-180 ನಿಮಿಷ 6,100 ಮತ್ತು 180-210 ನಿಮಿಷಗಳಿಗೆ 7,400 ರೂ. ನಿಗದಿಪಡಿಸಲಾಗುವುದು. ಉದಾಹರಣೆಗೆ ದೆಹಲಿ-ಮುಂಬೈ ವಿಮಾನವು ಪ್ರಸ್ತುತ ದರಕ್ಕಿಂತ 700 ರೂ. ಹೆಚ್ಚಳವಾಗಲಿದೆ.

ಪ್ರಯಾಣಿಕರ ಸಂಖ್ಯೆ ವಿಮಾನಯಾನ ದರದ ಹೆಚ್ಚಳಕ್ಕೆ ಕಾರಣವಾಗಿದೆ. ಕೊರೋನಾ ಸಾಂಕ್ರಾಮಿಕದ ಎರಡನೇ ಅಲೆಯಲ್ಲಿ ಸೋಂಕಿನ ಹೆಚ್ಚಳ  ದೇಶೀಯ ವಾಯುಯಾನದಲ್ಲಿ ಇಳಿಕೆಯನ್ನು ತಂದಿದೆ."ದೇಶಾದ್ಯಂತ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿನ ಹಠಾತ್ ಉಲ್ಬಣ, ಪ್ರಯಾಣಿಕರ ದಟ್ಟಣೆ ಇಳಿಕೆ  ಗಮನದಲ್ಲಿಟ್ಟುಕೊಂಡು, ಈಗಿರುವ ಶೇ .80 ರಷ್ಟು ಸಾಮರ್ಥ್ಯದ ಕ್ಯಾಪ್ ಅನ್ನು ಶೇಕಡಾ 50 ರಷ್ಟು ಸಾಮರ್ಥ್ಯ ಎಂದು ಪರಿಗಣಿಸಬಹುದು " ಎಂದು ಸಚಿವಾಲಯದ ಆದೇಶ ಹೇಳಿದೆ.

ದೇಶೀಯ ಶುಲ್ಕ ಬೆಲೆ ಮಿತಿಯಲ್ಲಿ ತೆರಿಗೆಗಳು ಮತ್ತು ವಿಮಾನ ನಿಲ್ದಾಣ ಅಭಿವೃದ್ಧಿ ಶುಲ್ಕಗಳು (ಎಡಿಎಫ್) ಇರುವುದಿಲ್ಲ, ಇದನ್ನು ಪ್ರಯಾಣಿಕರು ಪಾವತಿಸಬೇಕಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT