ನಿರ್ಮಲಾ ಸೀತಾರಾಮನ್ 
ವಾಣಿಜ್ಯ

ಕರ್ನಾಟಕ ಸೇರಿ 17 ರಾಜ್ಯಗಳಿಗೆ 9,871 ಕೋಟಿ ರೂ. ಅನುದಾನ ಬಿಡುಗಡೆ: ಕೇಂದ್ರ ಹಣಕಾಸು ಸಚಿವಾಲಯ

ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ 9,871 ಕೋಟಿ ರೂ.ಗಳ ನಂತರದ ವಿತರಣಾ ಆದಾಯ ಕೊರತೆಯ(ಪಿಡಿಆರ್‌ಡಿ) ಅನುದಾನದ ಆರನೇ ಮಾಸಿಕ ಕಂತನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ನವದೆಹಲಿ: ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ 9,871 ಕೋಟಿ ರೂ.ಗಳ ನಂತರದ ವಿತರಣಾ ಆದಾಯ ಕೊರತೆಯ(ಪಿಡಿಆರ್‌ಡಿ) ಅನುದಾನದ ಆರನೇ ಮಾಸಿಕ ಕಂತನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಈ ಕಂತಿನ ಬಿಡುಗಡೆಯೊಂದಿಗೆ, ಪ್ರಸ್ತುತ ಹಣಕಾಸು ವರ್ಷದಲ್ಲಿ ಪಿಡಿಆರ್‌ಡಿ ಅನುದಾನವಾಗಿ ಅರ್ಹ ರಾಜ್ಯಗಳಿಗೆ ಒಟ್ಟು 59,226 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಸಂವಿಧಾನದ ಪರಿಚ್ಛೇದ 275ರ ಅಡಿಯಲ್ಲಿ ರಾಜ್ಯಗಳಿಗೆ ಈ ಅನುದಾನವನ್ನು ಒದಗಿಸಲಾಗಿದೆ.

2021-22ರ ಅವಧಿಯಲ್ಲಿ 17 ರಾಜ್ಯಗಳ ಕಂದಾಯ ಖಾತೆಗಳಲ್ಲಿನ ಅಂತರವನ್ನು ಪೂರೈಸಲು ಹದಿನೈದನೇ ಹಣಕಾಸು ಆಯೋಗದ ಶಿಫಾರಸಿನಂತೆ ಮಾಸಿಕ ಕಂತುಗಳಲ್ಲಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ.
ಈ ಅನುದಾನವನ್ನು ಪಡೆಯಲು ರಾಜ್ಯಗಳ ಅರ್ಹತೆ ಮತ್ತು ಅನುದಾನದ ಪ್ರಮಾಣವನ್ನು ಆಯೋಗವು 2021-22ರ ಆರ್ಥಿಕ ವರ್ಷದ ಮೌಲ್ಯಮಾಪನ ಮಾಡಿದ ನಂತರ ರಾಜ್ಯಗಳ ಆದಾಯ ಮತ್ತು ವೆಚ್ಚದ ಮೌಲ್ಯಮಾಪನದ ನಡುವಿನ ಅಂತರವನ್ನು ಆಧಾರದ ಮೇಲೆ ನಿರ್ಧರಿಸಲಾಗುತ್ತದೆ.

ಹದಿನೈದನೆಯ ಹಣಕಾಸು ಆಯೋಗವು 2021-22 ರ ಆರ್ಥಿಕ ವರ್ಷದಲ್ಲಿ 17 ರಾಜ್ಯಗಳಿಗೆ ಒಟ್ಟು 1,18,452 ಕೋಟಿ ರೂ.ಗಳ ನಂತರದ ಹಂಚಿಕೆ ಕಂದಾಯ ಕೊರತೆಯ ಅನುದಾನವನ್ನು ಶಿಫಾರಸು ಮಾಡಿದೆ. ಈ ಪೈಕಿ ರೂ. 59,226 ಕೋಟಿ (ಶೇ.50) ಮೊತ್ತವನ್ನು ಬಿಡುಗಡೆ ಮಾಡಲಾಗಿದೆ 'ಎಂದು ಹಣಕಾಸು ಸಚಿವಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಹದಿನೈದನೆಯ ಹಣಕಾಸು ಆಯೋಗವು ಪಿಡಿಆರ್‌ಡಿ ಅನುದಾನಕ್ಕೆ ಶಿಫಾರಸು ಮಾಡಿದ ರಾಜ್ಯಗಳಲ್ಲಿ ಆಂಧ್ರಪ್ರದೇಶ, ಅಸ್ಸಾಂ, ಹರಿಯಾಣ, ಹಿಮಾಚಲ ಪ್ರದೇಶ, ಕರ್ನಾಟಕ, ಕೇರಳ, ಮಣಿಪುರ, ಪಶ್ಚಿಮ ಬಂಗಾಳ ಮತ್ತು ಮೇಘಾಲಯ ಸೇರಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT