ಭಾರತ್ ಪೇ 
ವಾಣಿಜ್ಯ

ಅಶ್ನೀರ್ ಗ್ರೋವರ್, ಮಾಧುರಿ ಜೈನ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಭಾರತ್‌ಪೇ: 88 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ

ಪ್ರಮುಖ ಫಿನ್‌ಟೆಕ್ ಪ್ಲಾಟ್‌ಫಾರ್ಮ್ ಭಾರತ್‌ಪೇ ತನ್ನ ಮಾಜಿ ಸಹ-ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಶ್ನೀರ್ ಗ್ರೋವರ್ ಅವರ ಪತ್ನಿ ಮಾಧುರಿ ಜೈನ್ ಗ್ರೋವರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ.

ಬೆಂಗಳೂರು: ಪ್ರಮುಖ ಫಿನ್‌ಟೆಕ್ ಪ್ಲಾಟ್‌ಫಾರ್ಮ್ ಭಾರತ್‌ಪೇ ತನ್ನ ಮಾಜಿ ಸಹ-ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಶ್ನೀರ್ ಗ್ರೋವರ್ ಅವರ ಪತ್ನಿ ಮಾಧುರಿ ಜೈನ್ ಗ್ರೋವರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ.

ಸಂಸ್ಥೆಯ ಹಣವನ್ನು ಭಾರೀ ಪ್ರಮಾಣದಲ್ಲಿ ದುರುಪಯೋಗ ಮಾಡಿಕೊಂಡಿದ್ದಕ್ಕಾಗಿ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲಾಗಿದ್ದು ಕಂಪನಿಯು ಸಹ ಸಂಸ್ಥಾಪಕರಿಗೆ 88.6 ಕೋಟಿ ರೂ.ಗಳನ್ನು ಶೇ.18 ಬಡ್ಡಿಯೊಂದಿಗೆ ಪಾವತಿಸಲು ಹೇಳಿದೆ. ನಕಲಿ ಬಿಲ್‌ಗಳು, ಮಾರಾಟಗಾರರ ಪಾವತಿ ಮತ್ತು ವೈಯಕ್ತಿಕ ಬಳಕೆ ಮುಂತಾದ ವಿವಿಧ ವಿಧಾನಗಳ ಮೂಲಕ ವಂಚಿಸಿದ ಆರೋಪ ಅವರ ಮೇಲಿದೆ.

ಸಂಸ್ಥೆಯ ವಕ್ತಾರರು, 'ಭಾರತ್‌ಪೇ ಮಾಜಿ ಸಹ-ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಶ್ನೀರ್ ಗ್ರೋವರ್, ಮಾಜಿ ಕಂಟ್ರೋಲಿಂಗ್ ಹೆಡ್, ಮಾಧುರಿ ಜೈನ್ ಗ್ರೋವರ್ ಮತ್ತು ಅವರ ಕುಟುಂಬದ ಇತರ ಸಂಬಂಧಿತ ಪಕ್ಷಗಳ ವಿರುದ್ಧ ಕಂಪನಿಗೆ ಹಾನಿ ಸೇರಿದಂತೆ ವಿವಿಧ ಹಕ್ಕುಗಳಿಗಾಗಿ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಿದೆ ಎಂದು ಹೇಳಿದರು.

'ನಾವು ನ್ಯಾಯಾಲಯ ಮತ್ತು ಅಧಿಕಾರಿಗಳ ಮೇಲೆ ಸಂಪೂರ್ಣ ನಂಬಿಕೆ ಹೊಂದಿದ್ದೇವೆ. ನ್ಯಾಯ ಸಿಗುವುದು ಖಚಿತ. ವಿಷಯವು ಉಪನ್ಯಾಯಾಲಯವಾಗಿರುವುದರಿಂದ, ಈ ಹಂತದಲ್ಲಿ ನಾವು ಏನನ್ನು ಹೇಳುವುದಿಲ್ಲ ಎಂದು ಹೇಳಿದರು. ಕ್ರಿಮಿನಲ್ ಮೊಕದ್ದಮೆಯನ್ನು ನವದೆಹಲಿಯ ಆರ್ಥಿಕ ಅಪರಾಧಗಳ ವಿಭಾಗ(ಇಒಡಬ್ಲ್ಯು) ನಲ್ಲಿ ದಾಖಲಿಸಲಾಗಿದೆ. ಇನ್ನು ದೆಹಲಿ ಹೈಕೋರ್ಟ್ ಪ್ರಸ್ತುತ ಸಿವಿಲ್ ಪ್ರಕರಣವನ್ನು ವಿಚಾರಣೆ ನಡೆಸುತ್ತಿದೆ. ಅಲ್ಲಿ ಕಂಪನಿಯು ಸಹ-ಸಂಸ್ಥಾಪಕರಿಗೆ ಕಂಪನಿಯ ಹಣವನ್ನು ಮರುಪಾವತಿಸುವಂತೆ ಕೇಳಿದೆ ಎಂದರು.

ಈ ವರ್ಷದ ಫೆಬ್ರವರಿಯಲ್ಲಿ, ದುರುಪಯೋಗದ ಆರೋಪದ ಮೇಲೆ ಮಾಧುರಿ ಜೈನ್ ಗ್ರೋವರ್ ರನ್ನು ಕಂಪನಿಯಿಂದ ವಜಾಗೊಳಿಸಲಾಯಿತು. ಅವರು ಹೊಂದಿದ್ದ ESOP ಅನ್ನು ಸಹ ರದ್ದುಗೊಳಿಸಲಾಯಿತು. ಇದಾದ ಬಳಿಕ ಮಾರ್ಚ್ 1ರಂದು ಅಶ್ನೀರ್ ಗ್ರೋವರ್ ಪತ್ರ ಬರೆದು ಕಂಪನಿಗೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT