ಭಾರತ್ ಪೇ 
ವಾಣಿಜ್ಯ

ಅಶ್ನೀರ್ ಗ್ರೋವರ್, ಮಾಧುರಿ ಜೈನ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಭಾರತ್‌ಪೇ: 88 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ

ಪ್ರಮುಖ ಫಿನ್‌ಟೆಕ್ ಪ್ಲಾಟ್‌ಫಾರ್ಮ್ ಭಾರತ್‌ಪೇ ತನ್ನ ಮಾಜಿ ಸಹ-ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಶ್ನೀರ್ ಗ್ರೋವರ್ ಅವರ ಪತ್ನಿ ಮಾಧುರಿ ಜೈನ್ ಗ್ರೋವರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ.

ಬೆಂಗಳೂರು: ಪ್ರಮುಖ ಫಿನ್‌ಟೆಕ್ ಪ್ಲಾಟ್‌ಫಾರ್ಮ್ ಭಾರತ್‌ಪೇ ತನ್ನ ಮಾಜಿ ಸಹ-ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಶ್ನೀರ್ ಗ್ರೋವರ್ ಅವರ ಪತ್ನಿ ಮಾಧುರಿ ಜೈನ್ ಗ್ರೋವರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ.

ಸಂಸ್ಥೆಯ ಹಣವನ್ನು ಭಾರೀ ಪ್ರಮಾಣದಲ್ಲಿ ದುರುಪಯೋಗ ಮಾಡಿಕೊಂಡಿದ್ದಕ್ಕಾಗಿ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲಾಗಿದ್ದು ಕಂಪನಿಯು ಸಹ ಸಂಸ್ಥಾಪಕರಿಗೆ 88.6 ಕೋಟಿ ರೂ.ಗಳನ್ನು ಶೇ.18 ಬಡ್ಡಿಯೊಂದಿಗೆ ಪಾವತಿಸಲು ಹೇಳಿದೆ. ನಕಲಿ ಬಿಲ್‌ಗಳು, ಮಾರಾಟಗಾರರ ಪಾವತಿ ಮತ್ತು ವೈಯಕ್ತಿಕ ಬಳಕೆ ಮುಂತಾದ ವಿವಿಧ ವಿಧಾನಗಳ ಮೂಲಕ ವಂಚಿಸಿದ ಆರೋಪ ಅವರ ಮೇಲಿದೆ.

ಸಂಸ್ಥೆಯ ವಕ್ತಾರರು, 'ಭಾರತ್‌ಪೇ ಮಾಜಿ ಸಹ-ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಶ್ನೀರ್ ಗ್ರೋವರ್, ಮಾಜಿ ಕಂಟ್ರೋಲಿಂಗ್ ಹೆಡ್, ಮಾಧುರಿ ಜೈನ್ ಗ್ರೋವರ್ ಮತ್ತು ಅವರ ಕುಟುಂಬದ ಇತರ ಸಂಬಂಧಿತ ಪಕ್ಷಗಳ ವಿರುದ್ಧ ಕಂಪನಿಗೆ ಹಾನಿ ಸೇರಿದಂತೆ ವಿವಿಧ ಹಕ್ಕುಗಳಿಗಾಗಿ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಿದೆ ಎಂದು ಹೇಳಿದರು.

'ನಾವು ನ್ಯಾಯಾಲಯ ಮತ್ತು ಅಧಿಕಾರಿಗಳ ಮೇಲೆ ಸಂಪೂರ್ಣ ನಂಬಿಕೆ ಹೊಂದಿದ್ದೇವೆ. ನ್ಯಾಯ ಸಿಗುವುದು ಖಚಿತ. ವಿಷಯವು ಉಪನ್ಯಾಯಾಲಯವಾಗಿರುವುದರಿಂದ, ಈ ಹಂತದಲ್ಲಿ ನಾವು ಏನನ್ನು ಹೇಳುವುದಿಲ್ಲ ಎಂದು ಹೇಳಿದರು. ಕ್ರಿಮಿನಲ್ ಮೊಕದ್ದಮೆಯನ್ನು ನವದೆಹಲಿಯ ಆರ್ಥಿಕ ಅಪರಾಧಗಳ ವಿಭಾಗ(ಇಒಡಬ್ಲ್ಯು) ನಲ್ಲಿ ದಾಖಲಿಸಲಾಗಿದೆ. ಇನ್ನು ದೆಹಲಿ ಹೈಕೋರ್ಟ್ ಪ್ರಸ್ತುತ ಸಿವಿಲ್ ಪ್ರಕರಣವನ್ನು ವಿಚಾರಣೆ ನಡೆಸುತ್ತಿದೆ. ಅಲ್ಲಿ ಕಂಪನಿಯು ಸಹ-ಸಂಸ್ಥಾಪಕರಿಗೆ ಕಂಪನಿಯ ಹಣವನ್ನು ಮರುಪಾವತಿಸುವಂತೆ ಕೇಳಿದೆ ಎಂದರು.

ಈ ವರ್ಷದ ಫೆಬ್ರವರಿಯಲ್ಲಿ, ದುರುಪಯೋಗದ ಆರೋಪದ ಮೇಲೆ ಮಾಧುರಿ ಜೈನ್ ಗ್ರೋವರ್ ರನ್ನು ಕಂಪನಿಯಿಂದ ವಜಾಗೊಳಿಸಲಾಯಿತು. ಅವರು ಹೊಂದಿದ್ದ ESOP ಅನ್ನು ಸಹ ರದ್ದುಗೊಳಿಸಲಾಯಿತು. ಇದಾದ ಬಳಿಕ ಮಾರ್ಚ್ 1ರಂದು ಅಶ್ನೀರ್ ಗ್ರೋವರ್ ಪತ್ರ ಬರೆದು ಕಂಪನಿಗೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ