ಪೇಟಿಎಂ 
ವಾಣಿಜ್ಯ

ಪೇಟಿಎಂ ಈಕ್ವಿಟಿ ಷೇರು ಮರುಖರೀದಿಗೆ ಆಡಳಿತ ಮಂಡಳಿ ನಿರ್ಧಾರ!

ಪ್ರಮುಖ ಬೆಳವಣಿಗೆಯಲ್ಲಿ ಖ್ಯಾತ ಪಾವತಿ ಸೇವಾ ಸಂಸ್ಥೆ ಪೇಟಿಎಂ ತನ್ನ ಈಕ್ವಿಟಿ ಷೇರುಗಳನ್ನು ಮರುಖರೀದಿ ಮಾಡಲು ನಿರ್ಧರಿಸಿದ್ದು, ಈ ಸಂಬಂಧ ನಡೆದ ಸಭೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಮತ್ತು ನಿರ್ದೇಶಕರು ಸರ್ವಾನುಮತದಿಂದ ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈ: ಪ್ರಮುಖ ಬೆಳವಣಿಗೆಯಲ್ಲಿ ಖ್ಯಾತ ಪಾವತಿ ಸೇವಾ ಸಂಸ್ಥೆ ಪೇಟಿಎಂ ತನ್ನ ಈಕ್ವಿಟಿ ಷೇರುಗಳನ್ನು ಮರುಖರೀದಿ ಮಾಡಲು ನಿರ್ಧರಿಸಿದ್ದು, ಈ ಸಂಬಂಧ ನಡೆದ ಸಭೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಮತ್ತು ನಿರ್ದೇಶಕರು ಸರ್ವಾನುಮತದಿಂದ ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪೇಟಿಎಂ ಬ್ರ್ಯಾಂಡ್‌ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಒನ್‌97 ಕಮ್ಯುನಿಕೇಷನ್ಸ್ ಕಂಪನಿಯು 850 ಕೋಟಿ ಮೌಲ್ಯದ ಷೇರುಗಳನ್ನು ಮರುಖರೀದಿ ಮಾಡುವುದಾಗಿ ಹೇಳಿದೆ. ಕಂಪನಿಯು ಪ್ರತಿ ಷೇರಿಗೆ 810 ಬೆಲೆ ನಿಗದಿ ಮಾಡಿದೆ ಎಂದು ತಿಳಿದುಬಂದಿದೆ. ಅಂತೆಯೇ ಷೇರು ಮರುಖರೀದಿಯನ್ನು ಕಂಪನಿಯು ಆರು ತಿಂಗಳಲ್ಲಿ ಪೂರ್ಣಗೊಳಿಸುವ ಉದ್ದೇಶ ಹೊಂದಿದೆ. ಮಂಗಳವಾರ ನಡೆದ ಕಂಪನಿಯ ಆಡಳಿತ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.

‘ಸ್ವತಂತ್ರ ನಿರ್ದೇಶಕರು ಸೇರಿದಂತೆ ಸಭೆಯಲ್ಲಿ ಪಾಲ್ಗೊಂಡಿದ್ದ ಕಂಪನಿಯ ಎಲ್ಲ ನಿರ್ದೇಶಕರು ಷೇರು ಮರುಖರೀದಿಗೆ ಒಕ್ಕೊರಲಿನಿಂದ ಸಮ್ಮತಿ ನೀಡಿದ್ದಾರೆ.. ಇದಕ್ಕಾಗಿ ಸ್ಟಾಕ್ ಎಕ್ಸ್ಚೇಂಜ್ ವಿಧಾನದ ಮೂಲಕ ಮುಕ್ತ ಮಾರುಕಟ್ಟೆ ಮಾರ್ಗವನ್ನು ಆರಿಸಿಕೊಂಡಿದೆ, ಇದು ಗರಿಷ್ಠ ಆರು ತಿಂಗಳ ಅವಧಿಯಲ್ಲಿ ಪೂರ್ಣಗೊಳ್ಳಲಿದೆ’ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

Paytm ನ ಆರ್ಥಿಕ ಕಾರ್ಯಕ್ಷಮತೆಯ ಆವೇಗ, ನಗದು ಹರಿವಿನ ಉತ್ಪಾದನೆಗೆ ಸ್ಪಷ್ಟವಾದ ಮಾರ್ಗ ಮತ್ತು ಹೆಚ್ಚುವರಿ ನಗದು ಪರಿಣಾಮವಾಗಿ, ಕಂಪನಿಯ ಷೇರುಗಳ ಮರುಖರೀದಿಯು ಅದರ ಷೇರುದಾರರಿಗೆ ಸಂಗ್ರಹವಾಗಿದೆ ಎಂದು ಮಂಡಳಿಯು ನಿರ್ಧರಿಸಿದೆ ಎಂದು ಪ್ರಕಟಣೆ ತಿಳಿಸಿದೆ. ಅದಾಗ್ಯೂ ತಂತ್ರಜ್ಞಾನ, ಮಾರಾಟ, ಮಾರ್ಕೆಟಿಂಗ್ ಮತ್ತು ಇತರ ಕ್ಷೇತ್ರಗಳಲ್ಲಿ ದೀರ್ಘಾವಧಿಯ ಮೌಲ್ಯ ರಚನೆಯನ್ನು ಹೆಚ್ಚಿಸಲು Paytm ಶಿಸ್ತುಬದ್ಧ ಹೂಡಿಕೆಗಳನ್ನು ಮುಂದುವರಿಸುತ್ತದೆ ಎಂದು ಸಂಸ್ಥೆ ಹೇಳಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT