ಎಲಾನ್ ಮಸ್ಕ್ 
ವಾಣಿಜ್ಯ

ಕೆಲಸ ಮಾಡುವ ಜವಾಬ್ದಾರಿ ತೆಗೆದುಕೊಳ್ಳುವ ಮೂರ್ಖ ಸಿಕ್ಕ ತಕ್ಷಣ ಟ್ವಿಟ್ಟರ್ ಸಿಇಒ ಹುದ್ದೆಗೆ ರಾಜಿನಾಮೆ: ಎಲಾನ್ ಮಸ್ಕ್

ಆದರೆ ತಾವು ಕೆಳಗಿಳಿಯಲು ಒಂದು ಷರತ್ತನ್ನೂ ನೀಡಿದ್ದಾರೆ. ನನ್ನ ಜವಾಬ್ದಾರಿ ತೆಗೆದುಕೊಳ್ಳಲು ಯಾರಾದರೂ ಮೂರ್ಖ ಸಿಕ್ಕ ತಕ್ಷಣವೇ ಟ್ವಿಟ್ಟರ್ ಸಿಇಒ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಬಳಿಕ ಕಂಪನಿಯ ಸಾಫ್ಟ್‌ವೇರ್ ಹಾಗೂ ಸರ್ವರ್ ತಂಡಗಳನ್ನು ಮುನ್ನಡೆಸುತ್ತೇನೆ ಎಂದು ತಿಳಿಸಿದ್ದಾರೆ.

ವಾಷಿಂಗ್ಟನ್: ಟ್ವಿಟ್ಟರ್ ಸಿಇಒ  ಎಲಾನ್ ಮಸ್ಕ್ ಇತ್ತೀಚೆಗೆ ತಾವು ತಮ್ಮ ಹುದ್ದೆಯನ್ನು ತೊರೆಯಬೇಕೇ ಅಥವಾ ಹೀಗೇ ಮುಂದುವರಿಯಬೇಕೇ ಎಂಬ ಬಗ್ಗೆ ಸಮೀಕ್ಷೆಯೊಂದರ ಮೂಲಕ ಬಳಕೆದಾರರ ಅಭಿಪ್ರಾಯವನ್ನು ಪಡೆದುಕೊಂಡಿದ್ದರು. ಸಮೀಕ್ಷೆಯಲ್ಲಿ ಮಸ್ಕ್‌ಗೆ ಟ್ವಿಟ್ಟರ್ ಸಿಇಒ ಸ್ಥಾನದಿಂದ ಕೆಳಗಿಳಿಯಲು ಹೆಚ್ಚಿನ ಬಳಕೆದಾರರು ಸೂಚಿಸಿದ್ದು, ಇದೀಗ ಮಸ್ಕ್ ತಾವು ಟ್ವಿಟ್ಟರ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುವುದಾಗಿ ತಿಳಿಸಿದ್ದಾರೆ.

ಎಲಾನ್ ಮಸ್ಕ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಆದರೆ ತಾವು ಕೆಳಗಿಳಿಯಲು ಒಂದು ಷರತ್ತನ್ನೂ ನೀಡಿದ್ದಾರೆ. ನನ್ನ ಜವಾಬ್ದಾರಿ ತೆಗೆದುಕೊಳ್ಳಲು ಯಾರಾದರೂ ಮೂರ್ಖ ಸಿಕ್ಕ ತಕ್ಷಣವೇ ಟ್ವಿಟ್ಟರ್ ಸಿಇಒ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಬಳಿಕ ಕಂಪನಿಯ ಸಾಫ್ಟ್‌ವೇರ್ ಹಾಗೂ ಸರ್ವರ್ ತಂಡಗಳನ್ನು ಮುನ್ನಡೆಸುತ್ತೇನೆ ಎಂದು ತಿಳಿಸಿದ್ದಾರೆ.

ಮಸ್ಕ್‌ ಸಿಇಒ ಸ್ಥಾನದಿಂದ ಕೆಳಗಿಳಿಯುವುದು ಸೂಕ್ತವೆಂದು ಹೆಚ್ಚಿನ ಬಳಕೆದಾರರು ಸಮೀಕ್ಷೆಯಲ್ಲಿ ಮತ ಚಲಾಯಿಸಿರುವುದರಿಂದ ಅವರು ಈ ನಿರ್ಧಾರ ಮಾಡಿದ್ದಾರೆ. ಟ್ವಿಟರ್‌ನ ಮಾಲೀಕತ್ವ ಪಡೆದ ‌ಎರಡು ತಿಂಗಳಲ್ಲೇ ಕೋಟ್ಯಧಿಪತಿ ಮಸ್ಕ್‌ ಅವರಿಗೆ ಇದೊಂದು ಭಾರಿ ಹಿನ್ನಡೆ ಎನ್ನಲಾಗುತ್ತಿದೆ.

ಭಾನುವಾರ ಸಂಜೆ ಆರಂಭವಾದ ಈ ಸಮೀಕ್ಷೆಯಲ್ಲಿ 1.75 ಕೋಟಿ ಬಳಕೆದಾರರು ಪಾಲ್ಗೊಂಡು ಮತ ಚಲಾಯಿಸಿದ್ದಾರೆ. ಟ್ವಿಟರ್‌ ಸಿಇಒ ಸ್ಥಾನವನ್ನು ಮಸ್ಕ್‌ ತೊರೆಯಬೇಕೆಂಬುದರ ಪರವಾಗಿ ಶೇ 57.5ರಷ್ಟು ಬಳಕೆದಾರರು ಮತ ಚಲಾಯಿಸಿದರೆ, ಶೇ 42.5ರಷ್ಟು ಬಳಕೆದಾರರು ಸಿಇಒ ಸ್ಥಾನ ತೊರೆಯಬಾರದೆಂದು ಮತ ಚಲಾಯಿಸಿದ್ದರು. 17,502,391 ಬಳಕೆದಾರರು ಮತ ಚಲಾಯಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?