ಸಾಂದರ್ಭಿಕ ಚಿತ್ರ 
ವಾಣಿಜ್ಯ

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ, ಪರಿಷ್ಕೃತ ದರ ಇಂದಿನಿಂದ ಜಾರಿ, ನೂತನ ದರ ಹೀಗಿದೆ...

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಜುಲೈ 1 ಶುಕ್ರವಾರ 198 ರೂಪಾಯಿ ಇಳಿಕೆಯಾಗಿದೆ. ಇದೀಗ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 2021 ರೂಪಾಯಿಗೆ ಇಳಿಕೆಯಾಗಿದೆ. ಈ ಹಿಂದೆ ಇದರ ಬೆಲೆ 2,219 ರೂಪಾಯಿಯಾಗಿತ್ತು.

ನವದೆಹಲಿ: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಜುಲೈ 1 ಶುಕ್ರವಾರ 198 ರೂಪಾಯಿ ಇಳಿಕೆಯಾಗಿದೆ. ಇದೀಗ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 2021 ರೂಪಾಯಿಗೆ ಇಳಿಕೆಯಾಗಿದೆ. ಈ ಹಿಂದೆ ಇದರ ಬೆಲೆ 2,219 ರೂಪಾಯಿಯಾಗಿತ್ತು.

ಕೋಲ್ಕತ್ತಾದಲ್ಲಿ ಕಮರ್ಷಿಯಲ್ ಸಿಲಿಂಡರ್ ಬೆಲೆ 182 ರೂಪಾಯಿ ಇಳಿಕೆಯಾಗಿದೆ. ಮತ್ತೊಂದೆಡೆ ಮುಂಬೈನಲ್ಲಿ 190 ರೂಪಾಯಿ 50 ಪೈಸೆ ಮತ್ತು ಚೆನ್ನೈನಲ್ಲಿ 187 ರೂಪಾಯಿ ಇಳಿಕೆಯಾಗಿದೆ. ಪೆಟ್ರೋಲಿಯಂ ಕಂಪನಿ ಇಂಡಿಯನ್ ಆಯಿಲ್ ಸಹ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿದೆ. 

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಕಡಿಮೆಯಾದರೆ ರೆಸ್ಟೋರೆಂಟ್, ತಿನಿಸು ತಯಾರಿಕೆ ಕೇಂದ್ರಗಳು, ಟೀ ಸ್ಟಾಲ್ ಗಳು ಮತ್ತು ಇತರ ವಾಣಿಜ್ಯ ತಿನಿಸು ಮಾರಾಟ ಮಾಡುವ ಕೇಂದ್ರಗಳಿಗೆ ಖರ್ಚುವೆಚ್ಚಗಳು ಕೊಂಚ ಇಳಿಕೆಯಾಗಬಹುದು. 

ಕಳೆದ ತಿಂಗಳು ಜೂನ್ 1ರಂದು 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 2,219 ರೂಪಾಯಿಗಳಾಗಿದ್ದವು. ಮೇ ಮೊದಲ ವಾರದಲ್ಲಿ, 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 50 ರೂಪಾಯಿಗಳಷ್ಟು ಹೆಚ್ಚಿಸಲಾಯಿತು. ಮೇ 1 ರಂದು, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 102.50 ರೂಪಾಯಿಗಳಿಂದ 2,355.50 ರೂಪಾಯಿಗಳಿಗೆ ಹೆಚ್ಚಿಸಲಾಯಿತು.

ಕಳೆದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಸಹ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು ಕ್ರಮವಾಗಿ 250 ರೂಪಾಯಿ ಹಾಗೂ 105 ರೂಪಾಯಿಗಳಷ್ಟು ಹೆಚ್ಚಳ ಮಾಡಲಾಗಿತ್ತು. 

ಪ್ರತಿ ತಿಂಗಳ ಆರಂಭದಲ್ಲಿ ದೇಶದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಪರಿಷ್ಕರಣೆ ಮಾಡಲಾಗುತ್ತದೆ. 

ಗೃಹ ಬಳಕೆ ಸಿಲಿಂಡರ್ : ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಕಡಿಮೆಯಾಗಿಲ್ಲ. 14.2 ಕೆಜಿ ದೇಶೀಯ ಸಿಲಿಂಡರ್ ಬೆಲೆ ಅಗ್ಗವಾಗಿಲ್ಲ. ಕಳೆದ ಮೇ 19ರ ದರ ಹಾಗೆಯೇ ಮುಂದುವರಿದಿದೆ.

ಮೇ 7 ರಂದು ಮೊದಲ ಬಾರಿಗೆ ಗೃಹಬಳಕೆಯ ಸಿಲಿಂಡರ್‌ಗಳ ಬೆಲೆಯನ್ನು ಲೀಟರ್‌ಗೆ 50 ರೂಪಾಯಿಗಳಷ್ಟು ಹೆಚ್ಚಿಸಲಾಗಿತ್ತು, ಮೇ 19 ರಂದು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಯಾಗಿತ್ತು.

ಕಳೆದ ತಿಂಗಳು ದೆಹಲಿಯಲ್ಲಿ ದೇಶೀಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 1,003 ರೂ.ಗೆ ಹೆಚ್ಚಿಸಲಾಯಿತು - ಇದು ಒಂದು ತಿಂಗಳಲ್ಲಿ ಸತತ ಎರಡನೇ ಹೆಚ್ಚಳವಾಗಿದೆ. ಜಾಗತಿಕವಾಗಿ ಹೆಚ್ಚುತ್ತಿರುವ ಕಚ್ಚಾ ತೈಲ ದರಗಳು LPG ಬೆಲೆಗಳನ್ನು ಹೆಚ್ಚಿಸಲು ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳನ್ನು ಪ್ರೇರೇಪಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT