ಆಕಾಶ ಏರ್ ಲೈನ್ 
ವಾಣಿಜ್ಯ

ಆಗಸ್ಟ್ 7ರಿಂದ ಆಕಾಶ ಏರ್ ಲೈನ್ಸ್ ವಾಣಿಜ್ಯ ಹಾರಾಟ ಆರಂಭ; ಬುಕಿಂಗ್ ಶುರು

ರಾಕೇಶ್ ಜುಂಜುನ್‌ವಾಲಾರ ಆಕಾಶ ಏರ್ ವಿಮಾನಯಾನ ಸಂಸ್ಥೆ ತನ್ನ ಮೊದಲ ವಾಣಿಜ್ಯ ಹಾರಾಟವನ್ನು ಆಗಸ್ಟ್ 7 ರಂದು ಆರಂಭಿಸಲಿದೆ. ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ ಬೋಯಿಂಗ್ 737 ಮ್ಯಾಕ್ಸ್ ವಿಮಾನ ತನ್ನ ಮೊದಲ ಸೇವೆಯನ್ನು...

ನವದೆಹಲಿ: ರಾಕೇಶ್ ಜುಂಜುನ್‌ವಾಲಾರ ಆಕಾಶ ಏರ್ ವಿಮಾನಯಾನ ಸಂಸ್ಥೆ ತನ್ನ ಮೊದಲ ವಾಣಿಜ್ಯ ಹಾರಾಟವನ್ನು ಆಗಸ್ಟ್ 7 ರಂದು ಆರಂಭಿಸಲಿದೆ. ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ ಬೋಯಿಂಗ್ 737 ಮ್ಯಾಕ್ಸ್ ವಿಮಾನ ತನ್ನ ಮೊದಲ ಸೇವೆಯನ್ನು ಪ್ರಾರಂಭಿಸಲಿದೆ.

ಆಗಸ್ಟ್ 7 ರಿಂದ ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ ವಾರಕ್ಕೊಮ್ಮೆ 28 ವಿಮಾನಗಳು ಕಾರ್ಯನಿರ್ವಹಿಸಲಿವೆ ಮತ್ತು ಆಗಸ್ಟ್ 13 ರಿಂದ ಬೆಂಗಳೂರು-ಕೊಚ್ಚಿ ಮಾರ್ಗದಲ್ಲಿ 28 ವಿಮಾನಗಳ ಟಿಕೆಟ್ ಬುಕಿಂಗ್ ಪ್ರಾರಂಭವಾಗಿದೆ ಎಂದು ಆಕಾಶ ಏರ್ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ. ಎರಡು ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳಲ್ಲಿ ಹಾರಾಟ ನಡೆಸಲಿವೆ  ಎಂದು ಹೇಳಿದೆ.

ಬೋಯಿಂಗ್ ಈಗಾಗಲೇ  ಒಂದು ವಿಮಾನವನ್ನು ವಿತರಿಸಿದ್ದು, ಎರಡನೆ ವಿಮಾನವನ್ನು ಈ ತಿಂಗಳ ಕೊನೆಯಲ್ಲಿ ವಿತರಿಸಲಿದೆ ಎಂದಿದೆ. “ನಾವು ಮುಂಬೈ ಮತ್ತು ಅಹಮದಾಬಾದ್ ನಡುವೆ ಹೊಚ್ಚಹೊಸ ಬೋಯಿಂಗ್ 737 ಮ್ಯಾಕ್ಸ್ ವಿಮಾನದೊಂದಿಗೆ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತೇವೆ” ಎಂದು ಆಕಾಶ ಏರ್‌ನ ಸಹ-ಸಂಸ್ಥಾಪಕ ಮತ್ತು ಮುಖ್ಯ ವಾಣಿಜ್ಯ ಅಧಿಕಾರಿ ಪ್ರವೀಣ್ ಅಯ್ಯರ್ ಅವರು ಹೇಳಿದ್ದಾರೆ.

ನಮ್ಮ ನೆಟ್‌ವರ್ಕ್ ವಿಸ್ತರಣೆ ಯೋಜನೆಗಳನ್ನು ಬೆಂಬಲಿಸಲು ನಾವು ಹಂತಹಂತವಾದ ವಿಧಾನವನ್ನು ಅಳವಡಿಸಿಕೊಳ್ಳುತ್ತೇವೆ, ಹಂತಹಂತವಾಗಿ ಹೆಚ್ಚಿನ ನಗರಗಳನ್ನು ಸಂಪರ್ಕಿಸುತ್ತೇವೆ, ನಮ್ಮ ಮೊದಲ ವರ್ಷದಲ್ಲಿ ನಾವು ಪ್ರತಿ ತಿಂಗಳು ನಮ್ಮ ಫ್ಲೀಟ್‌ಗೆ ಎರಡು ವಿಮಾನಗಳನ್ನು ಸೇರಿಸುತ್ತೇವೆ” ಎಂದು ಅಯ್ಯರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT