ಸಂಗ್ರಹ ಚಿತ್ರ 
ವಾಣಿಜ್ಯ

ಓಲಾ-ಉಬರ್ ಜೊತೆಗೂಡುವುದಿಲ್ಲ: ವಿಲೀನ ಕುರಿತ ಊಹಾಪೋಹಕ್ಕೆ ಓಲಾ ಸಿಇಒ ತೆರೆ

ಖ್ಯಾತ ಟ್ಯಾಕ್ಸಿ ಸೇವಾ ಪೂರೈಕೆದಾರ ಸಂಸ್ಥೆಗಳಾದ ಓಲಾ ಮತ್ತು ಉಬರ್ ಸಂಸ್ಥೆಗಳು ವಿಲೀನಗೊಳ್ಳುತ್ತವೆ ಎಂಬ ಊಹಾಪೋಹಗಳಿಗೆ ಓಲಾ ಸಿಇಒ ಭವೀಷ್ ಅಗರ್ವಾಲ್ ಅವರು ತೆರೆ ಎಳೆದಿದ್ದು, ಅಂತಹ ಯಾವುದೇ ಪ್ರಸ್ತಾಪ ತಮ್ಮ ಮುಂದಿಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ಖ್ಯಾತ ಟ್ಯಾಕ್ಸಿ ಸೇವಾ ಪೂರೈಕೆದಾರ ಸಂಸ್ಥೆಗಳಾದ ಓಲಾ ಮತ್ತು ಉಬರ್ ಸಂಸ್ಥೆಗಳು ವಿಲೀನಗೊಳ್ಳುತ್ತವೆ ಎಂಬ ಊಹಾಪೋಹಗಳಿಗೆ ಓಲಾ ಸಿಇಒ ಭವೀಷ್ ಅಗರ್ವಾಲ್ ಅವರು ತೆರೆ ಎಳೆದಿದ್ದು, ಅಂತಹ ಯಾವುದೇ ಪ್ರಸ್ತಾಪ ತಮ್ಮ ಮುಂದಿಲ್ಲ ಎಂದು ಹೇಳಿದ್ದಾರೆ.

ಕ್ಯಾಬ್ ಸೇವೆ ನೀಡುವ ಕಂಪನಿಗಳಾದ ಓಲಾ ಹಾಗೂ ಉಬರ್ ಟೆಕ್ನಾಲಜೀಸ್ ವಿಲೀನವಾಗುವ ಸಾಧ್ಯತೆ ಇದ್ದು, ಮಾತುಕತೆ ನಡೆಯುತ್ತಿದೆ. ಓಲಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಿಷ್ ಅಗರ್‌ವಾಲ್ ಇತ್ತೀಚೆಗೆ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಉಬರ್‌ನ ಉನ್ನತ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ವಿಲೀನ ಒಪ್ಪಂದ ಸಾಧ್ಯತೆಗೆ ಸಂಬಂಧಿಸಿದ ಹಣಕಾಸು ವಿವರಗಳನ್ನು ವರದಿ ಉಲ್ಲೇಖಿಸಿಲ್ಲ ಎಂದು ವರದಿಯಾಗಿತ್ತು. 

ಈ ವರದಿ ವೈರಲ್ ಆಗುತ್ತಲೇ ಈ ಕುರಿತು ಸ್ಪಷ್ಟನೆ ನೀಡಿರುವ ಓಲಾ ಸಿಇಒ ಭವೀಶ್ ಅಗರ್ವಾಲ್ ಅವರು, ಓಲಾ ಸಂಸ್ಥೆ "ಅತ್ಯಂತ ಲಾಭದಾಯಕ'' ಮತ್ತು ''ಉತ್ತಮವಾಗಿ ಬೆಳೆಯುತ್ತಿದೆ" ಮತ್ತು ಅಮೇರಿಕನ್ ರೈಡ್-ಹೇಲಿಂಗ್ ಸಂಸ್ಥೆಯೊಂದಿಗೆ ವಿಲೀನ ಮಾತುಕತೆಗಳ ವರದಿಗಳು "ಸಂಪೂರ್ಣ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಸಂಪೂರ್ಣ ಉಪಯೋಗಕ್ಕೆ ಬಾರದ್ದು, ನಾವು ತುಂಬಾ ಲಾಭದಾಯಕವಾಗಿದ್ದೇವೆ ಮತ್ತು ಉತ್ತಮವಾಗಿ ಬೆಳೆಯುತ್ತಿದ್ದೇವೆ. ಕೆಲವು ಇತರ ಕಂಪನಿಗಳು ತಮ್ಮ ವ್ಯವಹಾರವನ್ನು ಭಾರತದಿಂದ ನಿರ್ಗಮಿಸಲು ಬಯಸಿದರೆ ಅವರಿಗೆ ಸ್ವಾಗತ! ನಾವು ಎಂದಿಗೂ ವಿಲೀನಗೊಳ್ಳುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಉಭಯ ಕಂಪನಿಗಳು ಭಾರತದ ಮಾರುಕಟ್ಟೆಯಲ್ಲಿ ತೀವ್ರ ಸ್ಪರ್ಧೆ ಎದುರಿಸುತ್ತಿದ್ದು, ಪ್ರಯಾಣಿಕರಿಗೆ ರಿಯಾಯಿತಿ ದರದ ಕೊಡುಗೆಗಳನ್ನು ನೀಡುವುದಕ್ಕಾಗಿಯೇ ನೂರಾರು ಕೋಟಿ ಖರ್ಚು ಮಾಡಿವೆ. ಆಹಾರೋತ್ಪನ್ನ ಮತ್ತು ದಿನಸಿ ವಸ್ತುಗಳ ವಿತರಣೆ ಸೇವೆಯನ್ನೂ ಉಭಯ ಕಂಪನಿಗಳು ಇತ್ತೀಚೆಗೆ ಆರಂಭಿಸಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT