ಸಾಂದರ್ಭಿಕ ಚಿತ್ರ 
ವಾಣಿಜ್ಯ

ಷೇರುಮಾರುಕಟ್ಟೆ ಕುಸಿತ: ಹೂಡಿಕೆದಾರರಿಗೆ 5.47 ಲಕ್ಷ ಕೋಟಿ ರೂ. ನಷ್ಟ

ಹಣದುಬ್ಬರ ಹಿನ್ನಲೆಯಲ್ಲಿ ಕಳೆದೊಂದು ವಾರದಿಂದ ಭಾರತೀಯ ಷೇರುಮಾರುಕಟ್ಟೆ ಕುಸಿತದತ್ತ ಮುಖ ಮಾಡಿದ್ದು, ಸೆನ್ಸೆಕ್ಸ್ ಬರೊಬ್ಬರಿ 1500ಕ್ಕೂ ಹೆಚ್ಚು ಅಂಕಗಳನ್ನು ಕಳೆದುಕೊಂಡು ಹೂಡಿಕೆದಾರರ 5.47 ಲಕ್ಷ ಕೋಟಿ ರೂ ನಷ್ಟವಾಗಿದೆ.

ಮುಂಬೈ: ಹಣದುಬ್ಬರ ಹಿನ್ನಲೆಯಲ್ಲಿ ಕಳೆದೊಂದು ವಾರದಿಂದ ಭಾರತೀಯ ಷೇರುಮಾರುಕಟ್ಟೆ ಕುಸಿತದತ್ತ ಮುಖ ಮಾಡಿದ್ದು, ಸೆನ್ಸೆಕ್ಸ್ ಬರೊಬ್ಬರಿ 1500ಕ್ಕೂ ಹೆಚ್ಚು ಅಂಕಗಳನ್ನು ಕಳೆದುಕೊಂಡು ಹೂಡಿಕೆದಾರರ 5.47 ಲಕ್ಷ ಕೋಟಿ ರೂ ನಷ್ಟವಾಗಿದೆ.

ಜಾಗತಿಕ ಷೇರುಮಾರುಕಟ್ಟೆಯಲ್ಲಿ ನೀರಸ ವಹಿವಾಟಿನ ಪರಿಣಾಮ ಸೋಮವಾರ (ಜೂನ್ 13) ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ 1,500ಕ್ಕೂ ಅಧಿಕ ಅಂಕಗಳಷ್ಟು ಕುಸಿತ ಕಂಡಿದೆ. ಇದರಿಂದಾಗಿ ಹೂಡಿಕೆದಾರರ 5.47 ಲಕ್ಷ ಕೋಟಿ ರೂಪಾಯಿ ನಷ್ಟ ಕಂಡಿದೆ.

ಇಂದು ಆರಂಭಿಕ ವಹಿವಾಟಿನಲ್ಲಿ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 1,568.46 ಅಂಕಗಳಷ್ಟು ಇಳಿಕೆಯಾಗಿದ್ದು, 52,734.98 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡ 451.9 ಅಂಕಗಳಷ್ಟು ಕುಸಿತಗೊಂಡಿದ್ದು, 15,749.90 ಅಂಕಗಳಲ್ಲಿ ವಹಿವಾಟು ನಡೆಸುತ್ತಿದೆ. ಸಿಯೋಲ್, ಟೋಕಿಯೊ, ಹಾಂಗ್ ಕಾಂಗ್, ಶಾಂಘೈ ಷೇರು ಮಾರುಕಟ್ಟೆ ಸೆನ್ಸೆಕ್ಸ್ ಭಾರೀ ಇಳಿಕೆ ಕಂಡಿದೆ. ಅಮೆರಿಕದ ಷೇರು ಮಾರುಕಟ್ಟೆ ಶುಕ್ರವಾರ ಭಾರೀ ಇಳಿಕೆಯೊಂದಿಗೆ ವಹಿವಾಟು ಕೊನೆಗೊಳಿಸಿತ್ತು.

ಭಾರೀ ಪ್ರಮಾಣದಲ್ಲಿ ಸೆನ್ಸೆಕ್ಸ್, ನಿಫ್ಟಿ ಕುಸಿತ ಪರಿಣಾಮ ಹೂಡಿಕೆದಾರರು 5.47 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸುವಂತಾಗಿದೆ. ಈಕ್ವಿಟಿಗಳಲ್ಲಿನ ದುರ್ಬಲ ಪ್ರವೃತ್ತಿಗೆ ಅನುಗುಣವಾಗಿ, ಬಿಎಸ್‌ಇ-ಲಿಸ್ಟೆಡ್ ಸಂಸ್ಥೆಗಳ ಮಾರುಕಟ್ಟೆ ಬಂಡವಾಳೀಕರಣವು ಬೆಳಗಿನ ವಹಿವಾಟಿನಲ್ಲಿ ರೂ 5,47,410.81 ಕೋಟಿಯಿಂದ ರೂ 2,46,36,948.05 ಕೋಟಿಗೆ ಕುಸಿದಿದೆ.

ಇಂದಿನ ವಹಿವಾಟಿನಲ್ಲಿ ಬಜಾಜ್ ಫಿನ್ ಸರ್ವ್, ಬಜಾಜ್ ಫೈನಾನ್ಸ್, ಐಸಿಐಸಿಐ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್ ಮತ್ತು ಎಚ್ ಡಿಎಫ್ ಸಿ ಬ್ಯಾಂಕ್ ಷೇರುಗಳ ಮೌಲ್ಯ ಭಾರೀ ಕುಸಿತ ಕಂಡಿದೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಐಐ) ಬಂಡವಾಳ ಮಾರುಕಟ್ಟೆಯಲ್ಲಿ ನಿವ್ವಳ ಮಾರಾಟಗಾರರಾಗಿ ಉಳಿದಿದ್ದು, ವಿನಿಮಯ ಮಾಹಿತಿಯ ಪ್ರಕಾರ ಶುಕ್ರವಾರ ರೂ 3,973.95 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT