ಸಾಂದರ್ಭಿಕ ಚಿತ್ರ 
ವಾಣಿಜ್ಯ

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಕೇಂದ್ರದಿಂದ 17,000 ಕೋಟಿ ರೂ. ಬಾಕಿ ಜಿಎಸ್ ಟಿ ಪರಿಹಾರ ಬಿಡುಗಡೆ

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 17,000 ಕೋಟಿ ರೂ. ಬಾಕಿ ಜಿಎಸ್ ಟಿ ಪರಿಹಾರವನ್ನು ಕೇಂದ್ರ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ.

ನವದೆಹಲಿ: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 17,000 ಕೋಟಿ ರೂ. ಬಾಕಿ ಜಿಎಸ್ ಟಿ ಪರಿಹಾರವನ್ನು ಕೇಂದ್ರ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ.

ಇದರೊಂದಿಗೆ ಈ ಆರ್ಥಿಕ ವರ್ಷದಲ್ಲಿ ಇದುವರೆಗೆ ಬಿಡುಗಡೆಯಾದ ಒಟ್ಟು ಮೊತ್ತವು 1.15 ಲಕ್ಷ ಕೋಟಿ ರೂಪಾಯಿಗಳಿಗೆ ತಲುಪಿದೆ ಎಂದು ಹಣಕಾಸು ಸಚಿವಾಲಯ ಶುಕ್ರವಾರ ತಿಳಿಸಿದೆ. ಈ ಪರಿಹಾರ ಬಿಡುಗಡೆಯೊಂದಿಗೆ ಕೇಂದ್ರ ಸರ್ಕಾರ ಈ ವರ್ಷ ಮಾರ್ಚ್ ಅಂತ್ಯದವರೆಗೆ ಸಂಗ್ರಹಿಸಬಹುದಾದ ಸಂಪೂರ್ಣ ಸೆಸ್ ಮೊತ್ತವನ್ನು ಮುಂಚಿತವಾಗಿ ಬಿಡುಗಡೆ ಮಾಡಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಜುಲೈ 1, 2017 ರಿಂದ ಜಾರಿಗೆ ಬರುವಂತೆ ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)  ಪರಿಚಯಿಸಲಾಯಿತು ಮತ್ತು ಐದು ವರ್ಷಗಳ ಅವಧಿಗೆ ಜಿಎಸ್‌ಟಿ ಅನುಷ್ಠಾನದ ಖಾತೆಯಲ್ಲಿ ಉಂಟಾಗುವ ಯಾವುದೇ ಆದಾಯದ ನಷ್ಟಕ್ಕೆ ಪರಿಹಾರದ ಭರವಸೆಯನ್ನು ರಾಜ್ಯಗಳಿಗೆ ಭರವಸೆ ನೀಡಲಾಗಿತ್ತು. ರಾಜ್ಯಗಳಿಗೆ ಪರಿಹಾರವನ್ನು ಒದಗಿಸಲು ಕೆಲವು ಸರಕುಗಳ ಮೇಲೆ ಸೆಸ್ ವಿಧಿಸಲಾಗುತ್ತದೆ ಮತ್ತು ಸಂಗ್ರಹಿಸಿದ ಸೆಸ್ ಮೊತ್ತವನ್ನು ಪರಿಹಾರ ನಿಧಿಗೆ ಜಮಾ ಮಾಡಲಾಗುತ್ತದೆ.

2022 ಅಕ್ಟೋಬರ್ ವರೆಗಿನ ಒಟ್ಟು ಸೆಸ್ ಸಂಗ್ರಹವು ಕೇವಲ 72,147 ಕೋಟಿ ರೂಪಾಯಿಗಳಾಗಿದ್ದು, ಉಳಿದ 43,515 ಕೋಟಿ ರೂಪಾಯಿಗಳನ್ನು ಕೇಂದ್ರವು ತನ್ನದೇ ಆದ ಸಂಪನ್ಮೂಲಗಳಿಂದ ಬಿಡುಗಡೆ ಮಾಡುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ರಾಜ್ಯಗಳು ತಮ್ಮ ಸಂಪನ್ಮೂಲಗಳನ್ನು ನಿರ್ವಹಿಸುವಲ್ಲಿ ಸಹಾಯ ಮಾಡಲು ಮತ್ತು  ಹಣಕಾಸು ವರ್ಷದಲ್ಲಿ  ತಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಬಂಡವಾಳದ ಮೇಲಿನ ವೆಚ್ಚವನ್ನುಯಶಸ್ವಿಯಾಗಿ ನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT