ವಿಪ್ರೋ 
ವಾಣಿಜ್ಯ

Work From Home ಅಂತ್ಯ: ಅಕ್ಟೋಬರ್ 10 ರಿಂದ ಕಚೇರಿಗೆ ಬರುವಂತೆ ತಮ್ಮ ಸಿಬ್ಬಂದಿಗೆ ವಿಪ್ರೋ ಸೂಚನೆ!

ಇತ್ತೀಚೆಗೆ 300 ಉದ್ಯೋಗಿಗಳನ್ನು ವಜಾಗೊಳಿಸಿದ ನಂತರ ಐಟಿ ಮೇಜರ್ ವಿಪ್ರೋ ಇದೀಗ ಅಕ್ಟೋಬರ್ 10ರಿಂದ ಉದ್ಯೋಗಿಗಳನ್ನು ಕಚೇರಿಗೆ ಬರುವಂತೆ ಸೂಚಿಸಿದೆ.

ಬೆಂಗಳೂರು: ಇತ್ತೀಚೆಗೆ 300 ಉದ್ಯೋಗಿಗಳನ್ನು ವಜಾಗೊಳಿಸಿದ ನಂತರ ಐಟಿ ಮೇಜರ್ ವಿಪ್ರೋ ಇದೀಗ ಅಕ್ಟೋಬರ್ 10ರಿಂದ ಉದ್ಯೋಗಿಗಳನ್ನು ಕಚೇರಿಗೆ ಬರುವಂತೆ ಸೂಚಿಸಿದೆ. 

ವಿಪ್ರೋ ತಮ್ಮ ಉದ್ಯೋಗಿಗಳಿಗೆ, 'ಅಕ್ಟೋಬರ್ 10ರಿಂದ ಕಚೇರಿಗಳಿಗೆ ಬರುವಂತೆ ಸೂಚಿಸಿದೆ. ಇದೇ ವೇಳೆ ಸೋಮವಾರ, ಮಂಗಳವಾರ, ಗುರುವಾರ ಮತ್ತು ಶುಕ್ರವಾರ ಕಚೇರಿ ತೆರೆದಿರುತ್ತದೆ. ಇನ್ನು ಬುಧವಾರ ಒಂದು ದಿನ ಮುಚ್ಚಿರುತ್ತದೆ. ಈ ನಾಲ್ಕು ದಿನಗಳಲ್ಲಿ ಕನಿಷ್ಠ ಮೂರು ದಿನಗಳಲ್ಲಿ ಕಚೇರಿಯಿಂದ ಕೆಲಸ ಮಾಡಲು ನೌಕರರಿಗೆ ಸೂಚಿಸಿದೆ. 

ಐಟಿ ಕಂಪನಿಗಳು ವರ್ಕ್ ಫ್ರಮ್ ಹೋಮ್ ಮಾಡೆಲ್​ನ್ನು ಕೊನೆಗೊಳಿಸಲು ಮತ್ತು ಹೈಬ್ರಿಡ್ ಮಾದರಿಗೆ ಬದಲಾಗುತ್ತಿರುವ ಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ವಿಪ್ರೋ ಹೇಳಿದೆ.

ಏತನ್ಮಧ್ಯೆ, ಹೊಸದಾಗಿ ಆಯ್ಕೆಯಾಗಿರುವ ವಿದ್ಯಾರ್ಥಿಗಳ ನೇಮಕ ಪ್ರಕ್ರಿಯೆ ವಿಳಂಬದ ವಿಷಯದ ಕುರಿತು ವಿಪ್ರೋ ತನ್ನ ಹೇಳಿಕೆಯಲ್ಲಿ, ಅರ್ಹ ಅಭ್ಯರ್ಥಿಗಳಿಗೆ ಮಾಡಿದ ಎಲ್ಲಾ ಆಫರ್ ಲೆಟರ್‌ಗಳನ್ನು ಹಂತ ಹಂತವಾಗಿ ನೀಡುವುದಾಗಿ ಹೇಳಿದೆ. ಏತನ್ಮಧ್ಯೆ, Nascent Information Technology Employees Senate (NITES) ಅವರು 2021ರ ಸೆಪ್ಟೆಂಬರ್ ಮತ್ತು 2022ರ ಜನವರಿ ನಡುವೆ ವಿಪ್ರೋ ಆಫರ್ ಲೆಟರ್‌ಗಳನ್ನು ನೀಡಿದ ವಿದ್ಯಾರ್ಥಿಗಳಿಂದ ಮಾಹಿತಿಯನ್ನು ಸ್ವೀಕರಿಸಿದ್ದೇವೆ ಎಂದಿದೆ.

ಈ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ವಿಪ್ರೋದ ಮೇಲೆ ನಂಬಿಕೆ ಇಟ್ಟುಕೊಂಡು ಇತರ ಕಂಪನಿಗಳ ಕೊಡುಗೆಗಳನ್ನು ತಿರಸ್ಕರಿಸಿದ್ದಾರೆ. ಕಂಪನಿಯು ಒಂದು ದಿನ ಅವರನ್ನು ನೇಮಿಸಿಕೊಳ್ಳುತ್ತದೆ ಎಂದು NITES ಅಧ್ಯಕ್ಷ ಹರ್‌ಪ್ರೀತ್ ಸಿಂಗ್ ಸಲೂಜಾ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT