ವಿಪ್ರೋ 
ವಾಣಿಜ್ಯ

Work From Home ಅಂತ್ಯ: ಅಕ್ಟೋಬರ್ 10 ರಿಂದ ಕಚೇರಿಗೆ ಬರುವಂತೆ ತಮ್ಮ ಸಿಬ್ಬಂದಿಗೆ ವಿಪ್ರೋ ಸೂಚನೆ!

ಇತ್ತೀಚೆಗೆ 300 ಉದ್ಯೋಗಿಗಳನ್ನು ವಜಾಗೊಳಿಸಿದ ನಂತರ ಐಟಿ ಮೇಜರ್ ವಿಪ್ರೋ ಇದೀಗ ಅಕ್ಟೋಬರ್ 10ರಿಂದ ಉದ್ಯೋಗಿಗಳನ್ನು ಕಚೇರಿಗೆ ಬರುವಂತೆ ಸೂಚಿಸಿದೆ.

ಬೆಂಗಳೂರು: ಇತ್ತೀಚೆಗೆ 300 ಉದ್ಯೋಗಿಗಳನ್ನು ವಜಾಗೊಳಿಸಿದ ನಂತರ ಐಟಿ ಮೇಜರ್ ವಿಪ್ರೋ ಇದೀಗ ಅಕ್ಟೋಬರ್ 10ರಿಂದ ಉದ್ಯೋಗಿಗಳನ್ನು ಕಚೇರಿಗೆ ಬರುವಂತೆ ಸೂಚಿಸಿದೆ. 

ವಿಪ್ರೋ ತಮ್ಮ ಉದ್ಯೋಗಿಗಳಿಗೆ, 'ಅಕ್ಟೋಬರ್ 10ರಿಂದ ಕಚೇರಿಗಳಿಗೆ ಬರುವಂತೆ ಸೂಚಿಸಿದೆ. ಇದೇ ವೇಳೆ ಸೋಮವಾರ, ಮಂಗಳವಾರ, ಗುರುವಾರ ಮತ್ತು ಶುಕ್ರವಾರ ಕಚೇರಿ ತೆರೆದಿರುತ್ತದೆ. ಇನ್ನು ಬುಧವಾರ ಒಂದು ದಿನ ಮುಚ್ಚಿರುತ್ತದೆ. ಈ ನಾಲ್ಕು ದಿನಗಳಲ್ಲಿ ಕನಿಷ್ಠ ಮೂರು ದಿನಗಳಲ್ಲಿ ಕಚೇರಿಯಿಂದ ಕೆಲಸ ಮಾಡಲು ನೌಕರರಿಗೆ ಸೂಚಿಸಿದೆ. 

ಐಟಿ ಕಂಪನಿಗಳು ವರ್ಕ್ ಫ್ರಮ್ ಹೋಮ್ ಮಾಡೆಲ್​ನ್ನು ಕೊನೆಗೊಳಿಸಲು ಮತ್ತು ಹೈಬ್ರಿಡ್ ಮಾದರಿಗೆ ಬದಲಾಗುತ್ತಿರುವ ಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ವಿಪ್ರೋ ಹೇಳಿದೆ.

ಏತನ್ಮಧ್ಯೆ, ಹೊಸದಾಗಿ ಆಯ್ಕೆಯಾಗಿರುವ ವಿದ್ಯಾರ್ಥಿಗಳ ನೇಮಕ ಪ್ರಕ್ರಿಯೆ ವಿಳಂಬದ ವಿಷಯದ ಕುರಿತು ವಿಪ್ರೋ ತನ್ನ ಹೇಳಿಕೆಯಲ್ಲಿ, ಅರ್ಹ ಅಭ್ಯರ್ಥಿಗಳಿಗೆ ಮಾಡಿದ ಎಲ್ಲಾ ಆಫರ್ ಲೆಟರ್‌ಗಳನ್ನು ಹಂತ ಹಂತವಾಗಿ ನೀಡುವುದಾಗಿ ಹೇಳಿದೆ. ಏತನ್ಮಧ್ಯೆ, Nascent Information Technology Employees Senate (NITES) ಅವರು 2021ರ ಸೆಪ್ಟೆಂಬರ್ ಮತ್ತು 2022ರ ಜನವರಿ ನಡುವೆ ವಿಪ್ರೋ ಆಫರ್ ಲೆಟರ್‌ಗಳನ್ನು ನೀಡಿದ ವಿದ್ಯಾರ್ಥಿಗಳಿಂದ ಮಾಹಿತಿಯನ್ನು ಸ್ವೀಕರಿಸಿದ್ದೇವೆ ಎಂದಿದೆ.

ಈ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ವಿಪ್ರೋದ ಮೇಲೆ ನಂಬಿಕೆ ಇಟ್ಟುಕೊಂಡು ಇತರ ಕಂಪನಿಗಳ ಕೊಡುಗೆಗಳನ್ನು ತಿರಸ್ಕರಿಸಿದ್ದಾರೆ. ಕಂಪನಿಯು ಒಂದು ದಿನ ಅವರನ್ನು ನೇಮಿಸಿಕೊಳ್ಳುತ್ತದೆ ಎಂದು NITES ಅಧ್ಯಕ್ಷ ಹರ್‌ಪ್ರೀತ್ ಸಿಂಗ್ ಸಲೂಜಾ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT