ಸಾಂದರ್ಭಿಕ ಚಿತ್ರ 
ವಾಣಿಜ್ಯ

ಸ್ಥಿರ ದೂರವಾಣಿ ಸೇವೆಯಲ್ಲಿ ಬಿಎಸ್​ಎನ್​ಎಲ್​ ಹಿಂದಿಕ್ಕಿದ ಜಿಯೋಗೆ ಅಗ್ರಸ್ಥಾನ

ಖ್ಯಾತ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋ ಸ್ಥಿರ ದೂರವಾಣಿ ಸೇವೆಯಲ್ಲಿ ಕಳೆದ ಆಗಸ್ಟ್‌ನಲ್ಲಿ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್​ನ್ನು ಹಿಂದಿಕ್ಕಿದೆ.

ನವದೆಹಲಿ: ಖ್ಯಾತ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋ ಸ್ಥಿರ ದೂರವಾಣಿ ಸೇವೆಯಲ್ಲಿ ಕಳೆದ ಆಗಸ್ಟ್‌ನಲ್ಲಿ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್​ನ್ನು ಹಿಂದಿಕ್ಕಿದೆ. ಈ ಮೂಲಕ ದೇಶದ ಅತಿದೊಡ್ಡ ಸ್ಥಿರ ದೂರವಾಣಿ ಸೇವೆಯ ಪೂರೈಕೆದಾರರಾನಾಗಿ ಹೊರಹೊಮ್ಮಿದೆ. ದೇಶದಲ್ಲಿ ಟೆಲಿಕಾಂ ಸೇವೆಗಳನ್ನು ಪ್ರಾರಂಭಿಸಿದ ನಂತರ ಮೊದಲ ಬಾರಿಗೆ ಖಾಸಗಿ ಕಂಪನಿಯೊಂದು ವೈರ್‌ಲೈನ್ ವಿಭಾಗದಲ್ಲಿ ಅಗ್ರಸ್ಥಾನ ಪಡೆದಿದೆ.

ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಜಿಯೋದ ವೈರ್‌ಲೈನ್ ಚಂದಾದಾರರ ಸಂಖ್ಯೆ ಆಗಸ್ಟ್‌ನಲ್ಲಿ 73.52 ಲಕ್ಷಕ್ಕೆ ತಲುಪಿದ್ದರೆ, BSNLನ ಚಂದಾದಾರರ ಸಂಖ್ಯೆ 71.32 ಲಕ್ಷಕ್ಕೆ ತಲುಪಿದೆ. BSNL ಕಳೆದ 22 ವರ್ಷಗಳಿಂದ ದೇಶದಲ್ಲಿ ವೈರ್‌ಲೈನ್ ಸೇವೆಗಳನ್ನು ಒದಗಿಸುತ್ತಿದೆ, ಆದರೆ Jio ತನ್ನ ವೈರ್‌ಲೈನ್ ಸೇವೆಯನ್ನು ಮೂರು ವರ್ಷಗಳ ಹಿಂದೆಯಷ್ಟೇ ಪ್ರಾರಂಭಿಸಿದೆ. ಹೀಗಿದ್ದರೂ ದೇಶದಲ್ಲಿ ವೈರ್‌ಲೈನ್ ಚಂದಾದಾರರ ಸಂಖ್ಯೆ ಜುಲೈನಲ್ಲಿ 2.56 ಕೋಟಿಯಿಂದ ಆಗಸ್ಟ್‌ನಲ್ಲಿ 2.59 ಕೋಟಿಗೆ ಏರಿದೆ. ಕರ್ನಾಟಕದಲ್ಲೇ ಇದು 4 ಲಕ್ಷಕ್ಕೂ ಹೆಚ್ಚು ಜಿಯೋ ಸ್ಥಿರ ದೂರವಾಣಿ ಚಂದಾದಾರರನ್ನು ಹೊಂದಿದೆ.

ವೈರ್‌ಲೈನ್ ಸೇವೆಗಳನ್ನು ಬಳಸುವ ಗ್ರಾಹಕರ ಸಂಖ್ಯೆಯಲ್ಲಿನ ಈ ಹೆಚ್ಚಳಕ್ಕೆ ಖಾಸಗಿ ವಲಯದ ಕೊಡುಗೆ ಬಹಳಷ್ಟಿದೆ. TRAI ಅಂಕಿಅಂಶಗಳ ಪ್ರಕಾರ, ಈ ಅವಧಿಯಲ್ಲಿ ಜಿಯೋಗೆ 2.62 ಲಕ್ಷ ಹೊಸ ಗ್ರಾಹಕರು ಸೇರ್ಪಡೆಗೊಂಡಿದ್ದಾರೆ. ಭಾರ್ತಿ ಏರ್‌ಟೆಲ್ 1.19 ಲಕ್ಷವಾದರೆ, ವೊಡಾಫೋನ್ ಐಡಿಯಾ ಮತ್ತು ಟಾಟಾ ಟೆಲಿಸರ್ವಿಸಸ್ ಕ್ರಮವಾಗಿ 4,202 ಮತ್ತು 3,769 ಹೊಸ ಗ್ರಾಹಕರನ್ನು ತನ್ನ ತೆಕ್ಕೆಗೆ ಸೆಳೆದಿದೆ. ಇದಕ್ಕೆ ವ್ಯತಿರಿಕ್ತವಾಗಿ, ರಾಜ್ಯ-ಚಾಲಿತ ಟೆಲಿಕಾಂಗಳು BSNL ಮತ್ತು MTNL ಆಗಸ್ಟ್ ತಿಂಗಳಲ್ಲಿ ಕ್ರಮವಾಗಿ 15,734 ಮತ್ತು 13,395 ವೈರ್‌ಲೈನ್ ಚಂದಾದಾರರನ್ನು ಕಳೆದುಕೊಂಡಿವೆ.

ಇದಲ್ಲದೇ ಆಗಸ್ಟ್‌ನಲ್ಲಿ ರಿಲಯನ್ಸ್ ಜಿಯೋ ನೆಟ್‌ವರ್ಕ್‌ಗೆ 32.81 ಲಕ್ಷ ಹೊಸ ಮೊಬೈಲ್ ಗ್ರಾಹಕರು ಸೇರ್ಪಡೆಗೊಂಡಿದ್ದರೆ, ಭಾರ್ತಿ ಏರ್‌ಟೆಲ್ ಕೇವಲ 3.26 ಲಕ್ಷ ಹೊಸ ಮೊಬೈಲ್ ಗ್ರಾಹಕರನ್ನು ಪಡೆಯುವ ಮೂಲಕ ಈ ರೇಸ್‌ನಲ್ಲಿ ಹಿಂದುಳಿದಿದೆ. ಸಾಲದ ಸುಳಿಯಲ್ಲಿ ಸಿಲುಕಿರುವ ವಿಐ ಈ ತಿಂಗಳಲ್ಲಿ 19.58 ಲಕ್ಷ ಮೊಬೈಲ್ ಗ್ರಾಹಕರನ್ನು ಕಳೆದುಕೊಂಡಿದೆ. ಈ ಅವಧಿಯಲ್ಲಿ BSNL 5.67 ಲಕ್ಷ, MTNL 470 ಮತ್ತು ರಿಲಯನ್ಸ್ ಕಮ್ಯುನಿಕೇಷನ್ಸ್ 32 ಮೊಬೈಲ್ ಗ್ರಾಹಕರನ್ನು ಕಳೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT