ಸಾಂದರ್ಭಿಕ ಚಿತ್ರ 
ವಾಣಿಜ್ಯ

ಖರೀದಿ ವಿಳಂಬದಿಂದಾಗಿ ಬಿಎಸ್ಎನ್ಎಲ್ 4ಜಿ ಸೇವೆ ಮುಂದಿನ ವರ್ಷ ಪ್ರಾರಂಭ ಸಾಧ್ಯತೆ

ಸರಕಾರಿ ಸ್ವಾಮ್ಯದ ಟೆಲಿಕಾಂ ಆಪರೇಟರ್ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್(ಬಿಎಸ್‌ಎನ್‌ಎಲ್) ಮುಂದಿನ ವರ್ಷದ ವೇಳೆಗೆ 4ಜಿ ಸೇವೆಗಳನ್ನು ಆರಂಭಿಸುವ ಸಾಧ್ಯತೆಯಿದೆ ಎಂದು ದೂರಸಂಪರ್ಕ ಇಲಾಖೆಯ(ಡಿಒಟಿ) ಹಿರಿಯ...

ನವದೆಹಲಿ: ಸರಕಾರಿ ಸ್ವಾಮ್ಯದ ಟೆಲಿಕಾಂ ಆಪರೇಟರ್ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್(ಬಿಎಸ್‌ಎನ್‌ಎಲ್) ಮುಂದಿನ ವರ್ಷದ ವೇಳೆಗೆ 4ಜಿ ಸೇವೆಗಳನ್ನು ಆರಂಭಿಸುವ ಸಾಧ್ಯತೆಯಿದೆ ಎಂದು ದೂರಸಂಪರ್ಕ ಇಲಾಖೆಯ(ಡಿಒಟಿ) ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಟೆಲಿಕಾಂ ಸೇವಾ ಪೂರೈಕೆದಾರರು 4G ಸೇವೆಗಳಿಗೆ ಸ್ವದೇಶಿ ಸಾಧನಗಳನ್ನು ಮಾತ್ರ ಬಳಸುತ್ತಿರುವುದರಿಂದ ಉಪಕರಣಗಳ ಖರೀದಿ ಪ್ರಕ್ರಿಯೆ ವಿಳಂಬಕ್ಕೆ ಕಾರಣವಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

"ಬಿಎಸ್ಎನ್ಎಲ್ ಮುಂದಿನ ವರ್ಷದ ವೇಳೆಗೆ ತನ್ನ 4G ಸೇವೆಯನ್ನು ಪ್ರಾರಂಭಿಸಲಿದೆ. ಏಕೆಂದರೆ ಟೆಲ್ಕೊ ಇನ್ನೂ ತನ್ನ ಉಪಕರಣಗಳ ಖರೀದಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಲ್ಲ. "ಅಲ್ಲದೆ, BSNL ತನ್ನ ಸೇವೆಯನ್ನು 4Gಗೆ ಅಪ್‌ಗ್ರೇಡ್ ಮಾಡಲು ಸ್ವದೇಶಿ ಉಪಕರಣಗಳನ್ನು ಮಾತ್ರ ಬಳಸುತ್ತಿದೆ, ಇದು ವಿಳಂಬಕ್ಕೆ ಕಾರಣವಾಗಿದೆ" ಎಂದು ಅವರು ತಿಳಿಸಿದ್ದಾರೆ.

ದೇಶದಲ್ಲಿ ಖಾಸಗಿ ಟೆಲಿಕಾಂ ಆಪರೇಟರ್‌ಗಳು 5G ಸೇವೆಯನ್ನು ಪ್ರಾರಂಭಿಸುವ ಅಂಚಿನಲ್ಲಿದ್ದರೆ, BSNL ತನ್ನ ಸೇವೆಗಳನ್ನು 4G ಗೆ ಅಪ್‌ಗ್ರೇಡ್ ಮಾಡಲು ಇನ್ನೂ ಹೆಣಗಾಡುತ್ತಿದೆ. ಆದಾಗ್ಯೂ, ಸ್ಥಗಿತಗೊಂಡಿರುವ ಟೆಲಿಕಾಂ ಕಂಪನಿಯನ್ನು ಪುನರುಜ್ಜೀವನಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಇದಕ್ಕಾಗಿ ಇತ್ತೀಚೆಗೆ ರೂ 1.64 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್ ಅನ್ನು ಘೋಷಿಸಲಾಗಿದೆ.

ಪ್ಯಾಕೇಜ್ ಅನ್ನು ಘೋಷಿಸಿದ ನಂತರ, ದೂರಸಂಪರ್ಕ ಸಚಿವ ಅಶ್ವನಿ ವೈಷ್ಣವ್ ಅವರು BSNL ಗೆ 4G ಮತ್ತು 5G ಸೇವೆಗಳ ಮೂಲಕ ಮೊಬೈಲ್ ಚಂದಾದಾರರ ಸಂಖ್ಯೆಯನ್ನು 200 ಮಿಲಿಯನ್‌ಗೆ ದ್ವಿಗುಣಗೊಳಿಸುವ ಗುರಿ ಹೊಂದಿರುವುದಾಗಿ ತಿಳಿಸಿದ್ದರು. ಅಲ್ಲದೆ ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ (ಸಿ-ಡಾಟ್) 5G ತಂತ್ರಜ್ಞಾನ ಸಿದ್ಧವಾದ ನಂತರ 4ಜಿ ಜೊತೆಗೆ 5 ಜಿ ಸೇವೆಯನ್ನು ನೀಡುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT