ನುಚ್ಟಕ್ಕಿ ರಫ್ತು ನಿಷೇಧ 
ವಾಣಿಜ್ಯ

ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ನುಚ್ಚಕ್ಕಿ ರಫ್ತು ನಿಷೇಧಿಸಿದ ಕೇಂದ್ರ ಸರ್ಕಾರ!

ಮಹತ್ವದ ಬೆಳಣಿಗೆಯಲ್ಲಿ ಕೇಂದ್ರ ಸರ್ಕಾರ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ನುಚ್ಚಕ್ಕಿ ರಫ್ತನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ನವದೆಹಲಿ: ಮಹತ್ವದ ಬೆಳಣಿಗೆಯಲ್ಲಿ ಕೇಂದ್ರ ಸರ್ಕಾರ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ನುಚ್ಚಕ್ಕಿ ರಫ್ತನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಈ ಹಿಂದೆ ನುಚ್ಚಕ್ಕಿ ರಫ್ತು ದೇಶದಲ್ಲಿ ಮುಕ್ತವಾಗಿತ್ತು. ಆದರೆ ಇದೀಗ  ರಫ್ತು ನೀತಿಯನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದ್ದು, ನುಚ್ಚಕ್ಕಿಯನ್ನು 'ಮುಕ್ತ' ಪಟ್ಟಿಯಿಂದ ತೆಗೆದು "ನಿಷೇಧಿತ" ವಸ್ತುಗಳ ಪಟ್ಟಿಗೆ ಸೇರಿಸಿದೆ.

ಆದಾಗ್ಯೂ, ಕೆಲವು ರಫ್ತುಗಳಿಗೆ ಸೆಪ್ಟೆಂಬರ್ 15 ರವರೆಗೆ ಅವಕಾಶವಿರುತ್ತದೆ, ಈ ನಿಷೇಧದ ಆದೇಶದ ಮೊದಲು ಹಡಗಿನಲ್ಲಿ ನುಚ್ಚಕ್ಕಿಯನ್ನು ಲೋಡ್ ಮಾಡುವ ಸ್ಥಳ, ಶಿಪ್ಪಿಂಗ್ ಬಿಲ್ ಸಲ್ಲಿಸಿದ ಸ್ಥಳ ಮತ್ತು ಹಡಗುಗಳು ಈಗಾಗಲೇ ಭಾರತೀಯ ಬಂದರುಗಳಲ್ಲಿ ಆಗಮಿಸಿ ಲಂಗರು ಹಾಕಿದೆ. ಅವುಗಳ ಓಡಾಟದ ಸಂಖ್ಯೆಯನ್ನು ನಿಗದಿಪಡಿಸಿ ನುಚ್ಚಕ್ಕಿ ರವಾನೆಯನ್ನು ಸುಂಕದವರಿಗೆ ಹಸ್ತಾಂತರಿಸಲಾಗಿದೆ ಮತ್ತು ಅವರ ವ್ಯವಸ್ಥೆಯಲ್ಲಿ ನೋಂದಾಯಿಸಲಾಗಿದೆ ಎಂದು ಹೇಳಲಾಗಿದೆ.

ಈ ಖಾರಿಫ್ ಋತುವಿನಲ್ಲಿ ಒಟ್ಟಾರೆ ಭತ್ತದ ಬಿತ್ತನೆ ಪ್ರದೇಶವು ಕಳೆದ ವರ್ಷಕ್ಕಿಂತ ಕಡಿಮೆಯಿರಬಹುದು ಎಂದು ತೋರುತ್ತಿರುವುದರಿಂದ ರಫ್ತು ನಿಷೇಧವು ಮಹತ್ವವನ್ನು ಪಡೆದುಕೊಳ್ಳುತ್ತಿದೆ. ಇದು ಬೆಳೆ ನಿರೀಕ್ಷೆಗಳು ಹಾಗೂ ಮುಂದೆ ಹೋಗುವ ಬೆಲೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಭಾರತದ ನುಚ್ಚಕ್ಕಿಗೆ ಸೌದಿ, ಯುಎಇ ಸೇರಿದಂತೆ  ಹಲವು ಅರಬ್ ರಾಷ್ಟ್ರಗಳು, ಯೂರೋಪಿನ ಹಲವು ರಾಷ್ಟ್ರಗಳಲ್ಲಿ ಬೇಡಿಕೆ ಇದೆ ಎನ್ನಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾಚಿಕೆಗೇಡಿನ ಸಂಗತಿ'; ಎಲ್ಲಾ ಪಕ್ಷಗಳ ದೊಡ್ಡ ಕುಳಗಳು 'ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿ': ಪರಮೇಶ್ವರ್

MP: ಗಣರಾಜ್ಯೋತ್ಸವದಂದು ತಟ್ಟೆಗಳ ಬದಲಿಗೆ ಹಾಳೆಗಳ ಮೇಲೆ ಮಕ್ಕಳಿಗೆ ಉಪಹಾರ, ಶಿಕ್ಷಣ ವ್ಯವಸ್ಥೆಗೆ ನಾಚಿಕೆಗೇಡು!

U19 ವಿಶ್ವಕಪ್: ಜಿಂಬಾಬ್ವೆ ತಂಡವನ್ನು 204 ರನ್ ಗಳಿಂದ ಮಣಿಸಿದ ಭಾರತ; ಸೂಪರ್ ಸಿಕ್ಸ್‌ನಲ್ಲಿ ನಂಬರ್ 1 ಸ್ಥಾನ!

ಉಡುಪಿ: ದೋಣಿ ಮುಳುಗಿ ಮೂವರು ಪ್ರವಾಸಿಗರು ಸಾವು; ಜಿಲ್ಲಾಡಳಿತದಿಂದ ಸುರಕ್ಷತಾ ಕ್ರಮ

FTA ಗೆ ಸಹಿ ಬೆನ್ನಲ್ಲೇ ಮಹತ್ವದ ಘೋಷಣೆ: ಭಾರತದಲ್ಲಿ ಮೊದಲ ಲೀಗಲ್ ಗೇಟ್‌ವೇ ಕಚೇರಿ ತೆರೆಯಲಿರುವ EU

SCROLL FOR NEXT