ಸಾಂದರ್ಭಿಕ ಚಿತ್ರ 
ವಾಣಿಜ್ಯ

ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಸೆ.15ರಿಂದ ಮೂರು ದಿನ 'ಭಾರತೀಯ ಉತ್ಪಾದನಾ ವಲಯ ಪ್ರದರ್ಶನ ಮೇಳ'

ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಇದೇ 15 ರಿಂದ ಮೂರು ದಿನಗಳ ಭಾರತೀಯ ಉತ್ಪಾದನಾ ವಲಯ ಕುರಿತ ಪ್ರದರ್ಶನ ಮೇಳ ನಡೆಯಲಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಲಿದ್ದಾರೆ. 

ಬೆಂಗಳೂರು: ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಇದೇ 15 ರಿಂದ ಮೂರು ದಿನಗಳ ಭಾರತೀಯ ಉತ್ಪಾದನಾ ವಲಯ ಕುರಿತ ಪ್ರದರ್ಶನ ಮೇಳ ನಡೆಯಲಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಲಿದ್ದಾರೆ. 

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಉಪಸ್ಥಿತರಿರುತ್ತಾರೆ. ಎಂಎಸ್‌ಎಂಇ, ಏರೋಸ್ಪೇಸ್ ಮತ್ತು ರಕ್ಷಣಾ ವಿಭಾಗಕ್ಕೆ ಸಂಬಂಧಪಟ್ಟ ವಸ್ತುಗಳ ಪ್ರದರ್ಶನ ಇದಾಗಿದೆ. 

ಭಾರತ ಉತ್ಪಾದನಾ ಕೇಂದ್ರವಾಗಿ ಪರಿವರ್ತನೆ ಮಾಡುವ ಗುರಿಯತ್ತ ಕೆಲಸ ಮಾಡುವ ಮೂಲಕ ಕರ್ನಾಟಕದ ಲಘು ಉದ್ಯೋಗ ಭಾರತಿ ಮತ್ತು ಐಎಂಎಸ್ ಫೌಂಡೇಶನ್ ಜಂಟಿಯಾಗಿ ಬೃಹತ್ ಸಮಾವೇಶವನ್ನು ಆಯೋಜಿಸಿದೆ.

ಇದು ಅಂತರಿಕ್ಷ, ರಕ್ಷಣಾ ವಲಯ, ಆಟೋಮೇಷನ್, ರೊಬೊಟಿಕ್ಸ್ ಮತ್ತು ಡ್ರೋನ್ಸ್; ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್; ಸಾಮಾನ್ಯ ಎಂಜಿನಿಯರಿಂಗ್, ಶಕ್ತಿ ಪರಿಸರ ಮತ್ತು ವಿದ್ಯುನ್ಮಾನ ಸಾರಿಗೆ ವಲಯಗಳಲ್ಲಿ ದೊಡ್ಡ ಮತ್ತು ಸಣ್ಣ ವಲಯಗಳಿಗೆ ವೇದಿಕೆ ಒದಗಿಸುತ್ತದೆ. ರಕ್ಷಣಾ ಸಚಿವಾಲಯ ಮತ್ತು ಕರ್ನಾಟಕ ಸರ್ಕಾರವು ಈ ಸಮಾವೇಶಕ್ಕೆ ತಮ್ಮ ಬೆಂಬಲವನ್ನು ನೀಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT