ಸಾಂದರ್ಭಿಕ ಚಿತ್ರ 
ವಾಣಿಜ್ಯ

ಟೊಮೊಟೊ ದರ ಇಳಿಕೆಯಿಂದ ರೈತ ಕಂಗಾಲು; ಸಗಟು ದರ ಶೇ.30% ಕ್ಕಿಂತ ಹೆಚ್ಚು ಕುಸಿತ

ತರಕಾರಿಗಳ ಬೆಲೆಯಲ್ಲಿ ಏರಿಳಿತ ಆರಂಭವಾಗಿದ್ದು, ಈ ಹಿಂದೆ 100 ರೂ ಗಡಿ ದಾಟಿದ್ದ ಟೊಮೆಟೊ ಬೆಲೆ ಕೆಜಿಗೆ 20 ರಿಂದ 30ರೂಗೆ ಕುಸಿತವಾಗಿರುವುದರಿಂದ ರೈತ ಕಂಗಾಲಾಗಿದ್ದಾನೆ.

ಬೆಂಗಳೂರು: ತರಕಾರಿಗಳ ಬೆಲೆಯಲ್ಲಿ ಏರಿಳಿತ ಆರಂಭವಾಗಿದ್ದು, ಈ ಹಿಂದೆ 100 ರೂ ಗಡಿ ದಾಟಿದ್ದ ಟೊಮೆಟೊ ಬೆಲೆ ಕೆಜಿಗೆ 20 ರಿಂದ 30ರೂಗೆ ಕುಸಿತವಾಗಿರುವುದರಿಂದ ರೈತ ಕಂಗಾಲಾಗಿದ್ದಾನೆ.

ಟೊಮೇಟೊ ಬೆಳೆದ ನೂರಾರು ರೈತರು ರಾತ್ರೋರಾತ್ರಿ ಲಕ್ಷಾಧಿಪತಿಗಳಾದರೆ, ಗ್ರಾಹಕರು ಮಾತ್ರ ಟೊಮೆಟೊ ಸಹವಾಸವೇ ಬೇಡ ಎಂದು ದೂರ ಉಳಿದಿದ್ದರು. ಕಳೆದ ತಿಂಗಳು ದೇಶದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಗಗನಕ್ಕೇರಿದ್ದ ಟೊಮೆಟೊ ಬೆಲೆ ಕಳೆದ ಒಂದು ವಾರದಿಂದ ಕಡಿಮೆಯಾಗ ತೊಡಗಿದ್ದು, ಬೆಲೆ ಇಳಿಕೆಯಿಂದ ಜನರಿಗೆ ಅನುಕೂಲವಾದರೆ ರೈತರು ನಷ್ಟದ ಭೀತಿ ಎದುರಿಸುತ್ತಿದ್ದಾರೆ. ಸದ್ಯ ದೇಶಾದ್ಯಂತ ಟೊಮೆಟೊ ಬೆಲೆ ಇಳಿಕೆಯಾಗುತ್ತಿದೆ. ಟೊಮೆಟೊ ಬೆಲೆ ಕುಸಿತದಿಂದ ಗ್ರಾಹಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಪ್ರಸ್ತುತ ಮಧ್ಯಪ್ರದೇಶ, ಆಂಧ್ರಪ್ರದೇಶ, ಕರ್ನಾಟಕ, ಉತ್ತರ ಪ್ರದೇಶ ಮತ್ತು ಹರಿಯಾಣದಿಂದ ದೇಶದ ವಿವಿಧ ಮಾರುಕಟ್ಟೆಗಳಿಗೆ ಟೊಮೆಟೊ ಆಗಮನ ಪ್ರಾರಂಭವಾಗಿದ್ದು, ಸೆಪ್ಟೆಂಬರ್ ಆರಂಭದಲ್ಲಿ ಪ್ರಸ್ತುತ ಟೊಮೆಟೊ ಬೆಲೆಯಲ್ಲಿ ತೀವ್ರ ಕುಸಿತದ ಸಾಧ್ಯತೆಯಿದೆ. ರಾಷ್ಟ್ರೀಯ ಸರಕು ನಿರ್ವಹಣಾ ಸೇವೆಗಳ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ್ ಗುಪ್ತಾ ಮಾತನಾಡಿ, ಈ ತಿಂಗಳ ಅಂತ್ಯದ ವೇಳೆಗೆ ಪೂರೈಕೆಯ ಒತ್ತಡಗಳು ಹೆಚ್ಚಾಗುವುದರಿಂದ ಬೆಲೆಗಳು ಗಣನೀಯವಾಗಿ ಕಡಿಮೆಯಾಗುವ ನಿರೀಕ್ಷೆಯಿದೆ ಮತ್ತು ಸೆಪ್ಟೆಂಬರ್ ಮಧ್ಯದ ವೇಳೆಗೆ ಬೆಲೆಗಳು 30 ರೂ. ಪ್ರತಿ ಕೆಜಿಗೆ ತಲುಪುತ್ತದೆ ಎಂದಿದ್ದಾರೆ.

ಗ್ರಾಹಕ ವ್ಯವಹಾರಗಳ ಸಚಿವಾಲಯವು ನಿರ್ವಹಿಸುವ ಅಂಕಿಅಂಶಗಳ ಪ್ರಕಾರ, ಜುಲೈ 14 ರಂದು ದೇಶಾದ್ಯಂತ ಟೊಮೆಟೊ ಸರಾಸರಿ ಬೆಲೆ ಕ್ವಿಂಟಾಲ್‌ಗೆ 9,671 ರೂ.ಗಳಷ್ಟಿತ್ತು. ಇದು ಆಗಸ್ಟ್ 14 ರಂದು ಕ್ವಿಂಟಲ್‌ಗೆ 9,195 ರೂ.ಗೆ ಇಳಿದಿದೆ. ಜುಲೈ ಮಧ್ಯದಲ್ಲಿ, ಟೊಮೆಟೊ ಚಿಲ್ಲರೆ ಬೆಲೆ ದೇಶದ ಹಲವೆಡೆ ಕೆಜಿಗೆ 250 ರೂ. ಆದರೆ, ಮಹಾರಾಷ್ಟ್ರ ಮತ್ತು ಕರ್ನಾಟಕದಿಂದ ಟೊಮೆಟೊ ಬೆಳೆ ಮಾರುಕಟ್ಟೆಗೆ ಬಂದಿರುವುದರಿಂದ ಬಹುತೇಕ ನಗರಗಳಲ್ಲಿ ಅದರ ಬೆಲೆ ಕೆಜಿಗೆ 80-120 ರೂ.ಗೆ ಇಳಿದಿದೆ.

ಏರುತ್ತಿರುವ ಟೊಮೆಟೊ ಬೆಲೆಯನ್ನು ತಗ್ಗಿಸಲು ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಮತ್ತು ರೈತರ ಸಹಕಾರ ಒಕ್ಕೂಟ ದೆಹಲಿ-ಎನ್ ಸಿಆರ್, ಬಿಹಾರ, ಉತ್ತರ ಪ್ರದೇಶ ಸೇರಿದಂತೆ ಹಲವು ಸ್ಥಳಗಳಲ್ಲಿ ಜುಲೈನಿಂದ ಪ್ರತಿ ಕೆಜಿಗೆ 70 ರಿಂದ 90 ರೂ.ವರೆಗೆ ಚಿಲ್ಲರೆ ಬೆಲೆಯಲ್ಲಿ ಟೊಮೆಟೊವನ್ನು ಮಾರಾಟ ಮಾಡುತ್ತಿದೆ. ಹೆಚ್ಚುವರಿ ಬೆಳೆಯಿಂದಾಗಿ ಅಕ್ಟೋಬರ್ ವೇಳೆಗೆ ಟೊಮೆಟೊ ಬೆಲೆ ತೀವ್ರವಾಗಿ ಕುಸಿಯುವ ನಿರೀಕ್ಷೆಯಿದೆ. ಅಕ್ಟೋಬರ್ ಮಧ್ಯದ ವೇಳೆಗೆ ಸಗಟು ಮಾರುಕಟ್ಟೆಗಳಲ್ಲಿ ಪ್ರತಿ ಕೆಜಿಗೆ 5-10 ರೂ.ಗೆ ಇಳಿಕೆಯಾಗುವ ಸಾಧ್ಯತೆಯಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT