ಸಾಂದರ್ಭಿಕ ಚಿತ್ರ 
ವಾಣಿಜ್ಯ

ಸೆಪ್ಟೆಂಬರ್ 1ಕ್ಕೆ 'ಮೇರಾ ಬಿಲ್ ಮೇರಾ ಅಧಿಕಾರ್' ಜಿಎಸ್‌ಟಿ ಬಹುಮಾನ ಯೋಜನೆ ಜಾರಿ; ಯಾವ್ಯಾವ ರಾಜ್ಯಗಳಲ್ಲಿ ಇಲ್ಲಿದೆ ಮಾಹಿತಿ...

ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡು 10,000 ರೂಪಾಯಿಗಳಿಂದ 1 ಕೋಟಿ ರೂಪಾಯಿಯವರೆಗೆ ನಗದು ಬಹುಮಾನವನ್ನು ನೀಡುವ 'ಮೇರಾ ಬಿಲ್ ಮೇರಾ ಅಧಿಕಾರ್' ಇನ್‌ವಾಯ್ಸ್ ಪ್ರೋತ್ಸಾಹಕ ಯೋಜನೆಯನ್ನು ಸರ್ಕಾರವು ಸೆಪ್ಟೆಂಬರ್ 1 ರಿಂದ ಪ್ರಾರಂಭಿಸಲಿದೆ.

ನವದೆಹಲಿ: ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡು 10,000 ರೂಪಾಯಿಗಳಿಂದ 1 ಕೋಟಿ ರೂಪಾಯಿಯವರೆಗೆ ನಗದು ಬಹುಮಾನವನ್ನು ನೀಡುವ 'ಮೇರಾ ಬಿಲ್ ಮೇರಾ ಅಧಿಕಾರ್' ಇನ್‌ವಾಯ್ಸ್ ಪ್ರೋತ್ಸಾಹಕ ಯೋಜನೆಯನ್ನು ಸರ್ಕಾರವು ಸೆಪ್ಟೆಂಬರ್ 1 ರಿಂದ ಪ್ರಾರಂಭಿಸಲಿದೆ.

ಗ್ರಾಹಕರು ವಸ್ತುಗಳನ್ನು ಮಾರುಕಟ್ಟೆಯಲ್ಲಿ ಖರೀದಿಸುವಾಗ ಪ್ರತಿ ಬಾರಿ ಕಡ್ಡಾಯವಾಗಿ ರಸೀದಿ ಕೇಳುವಂತೆ ಮಾಡುವ ಗುರಿಯನ್ನು ಹೊಂದಿರುವ ಈ ಯೋಜನೆಯನ್ನು ಅಸ್ಸಾಂ, ಗುಜರಾತ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಪ್ರಾರಂಭಿಸಲಾಗುವುದು; ಪುದುಚೇರಿ, ದಮನ್ ಮತ್ತು ದಿಯು ಮತ್ತು ದಾದ್ರಾ ಮತ್ತು ನಗರ ಹವೇಲಿಯ ಕೇಂದ್ರೀಯ ಆಡಳಿತ ಪ್ರದೇಶಗಳಲ್ಲಿ ಸಹ ಜಾರಿಗೆ ತರಲಾಗುತ್ತಿದೆ ಎಂದು ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (CBIC) ತಿಳಿಸಿದೆ. 

ಜಿಎಸ್‌ಟಿ ಇನ್‌ವಾಯ್ಸ್‌ಗಳ ಅಪ್‌ಲೋಡ್‌ನಲ್ಲಿ ನಗದು ಬಹುಮಾನಗಳನ್ನು ಗಳಿಸಲು ಇನ್‌ವಾಯ್ಸ್ ಇನ್ಸೆಂಟಿವ್ ಸ್ಕೀಮ್ ನ್ನು ಜಾರಿಗೆ ತರಲಾಗುತ್ತಿದೆ ಎಂದು ಸಿಬಿಐಸಿ ಟ್ವೀಟ್ ಮಾಡಿದೆ.

ಗ್ರಾಹಕರಿಗೆ ಸರಕು ಮತ್ತು ಸೇವಾ ತೆರಿಗೆ (GST) ನೋಂದಾಯಿತ ಪೂರೈಕೆದಾರರು ನೀಡಿದ ಎಲ್ಲಾ ಇನ್‌ವಾಯ್ಸ್‌ಗಳು 'ಮೇರಾ ಬಿಲ್ ಮೇರಾ ಅಧಿಕಾರ್' ಯೋಜನೆಗೆ ಅರ್ಹವಾಗಿರುತ್ತವೆ, ಇದರ ಅಡಿಯಲ್ಲಿ ಮಾಸಿಕ ಮತ್ತು ತ್ರೈಮಾಸಿಕ ಡ್ರಾಗಳನ್ನು ಮಾಡಲಾಗುತ್ತದೆ. ವಿಜೇತರು ನಗದು ಬಹುಮಾನಗಳಿಗೆ ಅರ್ಹರಾಗುತ್ತಾರೆ.

ಅದೃಷ್ಟದ ಡ್ರಾಗಾಗಿ ಪರಿಗಣಿಸಬೇಕಾದ ಇನ್‌ವಾಯ್ಸ್‌ನ ಕನಿಷ್ಠ ಖರೀದಿ ಮೌಲ್ಯವು 200 ರೂಪಾಯಿ ಆಗಿದೆ. ವ್ಯಕ್ತಿಗಳು ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗುವ ತಿಂಗಳಲ್ಲಿ ಗರಿಷ್ಠ 25 ಇನ್‌ವಾಯ್ಸ್‌ಗಳನ್ನು ಅಪ್‌ಲೋಡ್ ಮಾಡಬಹುದು.

'ಮೇರಾ ಬಿಲ್ ಮೇರಾ ಅಧಿಕಾರ್' ಮೊಬೈಲ್ ಅಪ್ಲಿಕೇಶನ್ ಐಒಎಸ್ ಮತ್ತು ಆಂಡ್ರಾಯ್ಡ್ ಪ್ಲಾಟ್‌ಫಾರ್ಮ್‌ಗಳಲ್ಲಿ ಲಭ್ಯವಾಗಲಿದೆ. ಅಪ್ಲಿಕೇಶನ್‌ನಲ್ಲಿ ಅಪ್‌ಲೋಡ್ ಮಾಡಿದ ಇನ್‌ವಾಯ್ಸ್ ಮಾರಾಟಗಾರರ GSTIN, ಇನ್‌ವಾಯ್ಸ್ ಸಂಖ್ಯೆ, ಪಾವತಿಸಿದ ಮೊತ್ತ ಮತ್ತು ತೆರಿಗೆ ಮೊತ್ತವನ್ನು ಹೊಂದಿರಬೇಕು.

ವ್ಯಾಪಾರದಿಂದ ಗ್ರಾಹಕನಿಗೆ (B2C) ಸರಕುಗಳು ಅಥವಾ ಸೇವೆಗಳ ಖರೀದಿಗಳನ್ನು ಮಾಡುವಾಗ ಮಾರಾಟಗಾರರಿಂದ ನಿಜವಾದ ಇನ್‌ವಾಯ್ಸ್‌ಗಳನ್ನು ಕೇಳಲು ನಾಗರಿಕರು ಮತ್ತು ಗ್ರಾಹಕರನ್ನು ಉತ್ತೇಜಿಸುವ ರೀತಿಯಲ್ಲಿ ಈ ಯೋಜನೆಯನ್ನು ಪರಿಕಲ್ಪನೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT