ಸಾಂದರ್ಭಿಕ ಚಿತ್ರ 
ವಾಣಿಜ್ಯ

ಲ್ಯಾಪ್‌ಟಾಪ್ ತಯಾರಕರಿಗೆ ಹಿನ್ನಡೆ, ನವೆಂಬರ್ 1 ರಿಂದ ಆಮದು ನಿರ್ಬಂಧ ಮುಂದೂಡಲು ಕೇಂದ್ರ ನಕಾರ

ಲ್ಯಾಪ್‌ಟಾಪ್ ತಯಾರಕರಿಗೆ ತೀವ್ರ ಹಿನ್ನಡೆಯಾಗಿದ್ದು, ನವೆಂಬರ್ 1 ರ ನಂತರ ದೇಶದಲ್ಲಿ ಲ್ಯಾಪ್‌ಟಾಪ್, ಆಲ್ ಇನ್ ಒನ್ ಪರ್ಸನಲ್ ಕಂಪ್ಯೂಟರ್ ಮತ್ತು ಟ್ಯಾಬ್ಲೆಟ್‌ಗಳ ಆಮದು ನಿರ್ಬಂಧಿಸುವ ತನ್ನ ನಿರ್ದೇಶನವನ್ನು ಮುಂದೂಡಲು...

ನವದೆಹಲಿ: ಲ್ಯಾಪ್‌ಟಾಪ್ ತಯಾರಕರಿಗೆ ತೀವ್ರ ಹಿನ್ನಡೆಯಾಗಿದ್ದು, ನವೆಂಬರ್ 1 ರ ನಂತರ ದೇಶದಲ್ಲಿ ಲ್ಯಾಪ್‌ಟಾಪ್, ಆಲ್ ಇನ್ ಒನ್ ಪರ್ಸನಲ್ ಕಂಪ್ಯೂಟರ್ ಮತ್ತು ಟ್ಯಾಬ್ಲೆಟ್‌ಗಳ ಆಮದು ನಿರ್ಬಂಧಿಸುವ ತನ್ನ ನಿರ್ದೇಶನವನ್ನು ಮುಂದೂಡಲು ಕೇಂದ್ರ ಸರ್ಕಾರ ಸೋಮವಾರ ನಿರಾಕರಿಸಿದೆ.

ಕೇಂದ್ರ ಸರ್ಕಾರ ಆಗಸ್ಟ್ 4 ರಂದು ಸ್ಥಳೀಯ ಉತ್ಪಾದನೆಯನ್ನು ಉತ್ತೇಜಿಸುವ ಉದ್ದೇಶದಿಂದ ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು ಮತ್ತು ಪರ್ಸನಲ್ ಕಂಪ್ಯೂಟರ್‌ಗಳ ಆಮದನ್ನು ನಿರ್ಬಂಧಿಸಿತ್ತು ಮತ್ತು ನಂತರ ಈ ಆದೇಶವನ್ನು ನವೆಂಬರ್ 1, 2023 ರವರೆಗೆ ಮುಂದೂಡಲು ನಿರ್ಧರಿಸಿತು. ಆದರೆ ಈಗ ಅದನ್ನು ಮತ್ತೆ ಮುಂದೂಡಲು ನಿರಾಕರಿಸಿದೆ.

ದೊಡ್ಡ ಪ್ರಮಾಣದ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳನ್ನು ಉತ್ಪಾದಿಸಲು ಆರಂಭಿಸಿದ ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್(ಪಿಎಲ್‌ಐ) ಯೋಜನೆಗೆ ದೊರೆತ ಪ್ರತಿಕ್ರಿಯೆಯಿಂದ ಸರ್ಕಾರ ಸಂತಸಗೊಂಡಿದೆ. ಆದ್ದರಿಂದ ಉತ್ತೇಜನಕ್ಕೆ ಹೆಚ್ಚಿನ ಸಮಯ ನೀಡುವ ಅಗತ್ಯವಿಲ್ಲ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ(MeitY) ಕಾರ್ಯದರ್ಶಿ ಅಲ್ಕೇಶ್ ಕುಮಾರ್ ಶರ್ಮಾ ಅವರು ಹೇಳಿದ್ದಾರೆ.

ಭಾರತದಲ್ಲಿ ಉತ್ಪಾದನೆಯನ್ನು ಪ್ರಾರಂಭಿಸಲು ಹಲವು ಕಂಪನಿಗಳು ಮುಂದೆ ಬಂದಿವೆ. ಇದುವರೆಗೆ, ನಾವು ಯೋಜನೆಗಾಗಿ 58 ನೋಂದಣಿಗಳನ್ನು ಸ್ವೀಕರಿಸಿದ್ದೇವೆ. ಅವು ದೊಡ್ಡ ಮತ್ತು ಸಣ್ಣ ಘಟಕಗಳನ್ನು ಒಳಗೊಂಡಿವೆ. ಯೋಜನೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 30, 2023 ಕೊನೆ ದಿನ ಆಗಿರುವುದರಿಂದ, ಇನ್ನೂ ಹೆಚ್ಚಿನ ನೋಂದಣಿಗಳನ್ನು ನಾವು ನಿರೀಕ್ಷಿಸುತ್ತಿದ್ದೇವೆ ಎಂದು ಶರ್ಮಾ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT