ಸಂಗ್ರಹ ಚಿತ್ರ 
ವಾಣಿಜ್ಯ

ಡಿಸೆಂಬರ್ ಮೊದಲ ದಿನವೇ ಗ್ರಾಹಕರಿಗೆ ಶಾಕ್: ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 21 ರೂಪಾಯಿ ಹೆಚ್ಚಳ!

2023ರ ವರ್ಷಾಂತ್ಯದಲ್ಲಿ ಕೇಂದ್ರ ಸರ್ಕಾರ ಗ್ರಾಹಕರಿಗೆ ಶಾಕ್ ನೀಡಿದ್ದು, ಡಿಸೆಂಬರ್‌ನ ಮೊದಲ ದಿನವೇ ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 21 ರೂಪಾಯಿ ಹೆಚ್ಚಳ ಮಾಡಿದೆ.

ನವದೆಹಲಿ: 2023ರ ವರ್ಷಾಂತ್ಯದಲ್ಲಿ ಕೇಂದ್ರ ಸರ್ಕಾರ ಗ್ರಾಹಕರಿಗೆ ಶಾಕ್ ನೀಡಿದ್ದು, ಡಿಸೆಂಬರ್‌ನ ಮೊದಲ ದಿನವೇ ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 21 ರೂಪಾಯಿ ಹೆಚ್ಚಳ ಮಾಡಿದೆ.

ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಳ ಮಾಡಿದ್ದು, ಇಂದಿನಿಂದಲೇ (ಡಿಸೆಂಬರ್ 1, ಶುಕ್ರವಾರ) ಹೊಸ ದರ ಅನ್ವಯವಾಗಲಿದೆ.

ದರ ಹೆಚ್ಚಳದ ಬಳಿಕ 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಚಿಲ್ಲರೆ ಮಾರಾಟದ ಬೆಲೆ  1796.50 ರೂಪಾಯಿಗೆ ಏರಿಕೆಯಾಗಿದೆ. ಇದು ರಾಷ್ಟ್ರ ರಾಜಧಾನಿ ದೆಹಲಿಯ ಬೆಲೆಯಾಗಿದ್ದು, ಇದೇ ಬೆಲೆ ವಾಣಿಜ್ಯ ನಗರಿ ಮುಂಬೈನಲ್ಲಿ 1,749 ರೂಪಾಯಿಗೆ ಜಿಗಿತವಾಗಿದೆ.

ಕರ್ನಾಕಟ ರಾಜಧಾನಿ ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,904 ರೂಪಾಯಿಗೆ ಏರಿಕೆಯಾಗಿದೆ. ಹೊಸದಾಗಿ ಬೆಲೆ ಪರಿಷ್ಕರಣೆ ಬಳಿಕ ಚೆನ್ನೈನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,968.5 ರೂಪಾಯಿ ಹಾಗೂ ಕೋಲ್ಕತ್ತದಲ್ಲಿ 1,908 ರೂಪಾಯಿ ಇದೆ.

14.2 ಕೆಜಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕಂಪನಿಗಳು ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಸರ್ಕಾರ ಈ ಸಿಲಿಂಡರ್‌ನ ಬೆಲೆಯನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡಿತ್ತು.

ಇಂಡಿಯನ್ ಆಯಿಲ್‌ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಈ ಸಿಲಿಂಡರ್ ದೆಹಲಿಯಲ್ಲಿ 903 ರೂ.ಗೆ ಲಭ್ಯವಿದೆ. ಈ ಸಿಲಿಂಡರ್ ನೋಯ್ಡಾದಲ್ಲಿ 900.50 ರೂ.ಗೆ ಲಭ್ಯವಿದೆ. ಅದೇ ರೀತಿ, ಪ್ರತಿ ಸಿಲಿಂಡರ್ ಕೋಲ್ಕತ್ತಾದಲ್ಲಿ ರೂ 929, ಮುಂಬೈನಲ್ಲಿ ರೂ 902.50 ಮತ್ತು ಚೆನ್ನೈನಲ್ಲಿ ರೂ 918.50 ಕ್ಕೆ ಲಭ್ಯವಿದೆ.

ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 1 ರಂದು ಏವಿಯೇಷನ್ ​​ಟರ್ಬೈನ್ ಇಂಧನದ (ಎಟಿಎಫ್) ಬೆಲೆಯನ್ನು ಕಡಿಮೆ ಮಾಡಿದೆ. ದೇಶೀಯ ವಿಮಾನಯಾನ ಸಂಸ್ಥೆಗಳಿಗೆ ಈಗ ರಾಜಧಾನಿ ದೆಹಲಿಯಲ್ಲಿ 1,06,155.67 ರೂ., ಕೋಲ್ಕತ್ತಾದಲ್ಲಿ 1,44,639.70 ರೂ., ಮುಂಬೈನಲ್ಲಿ 99,223.44 ರೂ. ಮತ್ತು ಚೆನ್ನೈನಲ್ಲಿ ಪ್ರತಿ ಕಿಲೋ ಲೀಟರ್‌ಗೆ 1,09,966.39 ರೂ.ಗೆ ಸಿಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT