ಎಂ ಆರ್ ಕುಮಾರ್ 
ವಾಣಿಜ್ಯ

ಶೀಘ್ರದಲ್ಲೇ ಅದಾನಿ ಸಂಸ್ಥೆಯ ಉನ್ನತ ಅಧಿಕಾರಿಗಳ ಭೇಟಿ: ಎಲ್ಐಸಿ ಅಧ್ಯಕ್ಷ

ಸಾರ್ವಜನಿಕ ವಲಯದ ವಿಮಾ ಸಂಸ್ಥೆಯ ಅಧಿಕಾರಿಗಳು ಶೀಘ್ರದಲ್ಲೇ ಅದಾನಿ ಗ್ರೂಪ್‌ನ ಉನ್ನತ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಮತ್ತು ಸಂಸ್ಥೆಯು ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಸ್ಪಷ್ಟೀಕರಣ ಪಡೆಯಲಿದ್ದಾರೆ...

ಮುಂಬೈ: ಸಾರ್ವಜನಿಕ ವಲಯದ ವಿಮಾ ಸಂಸ್ಥೆಯ ಅಧಿಕಾರಿಗಳು ಶೀಘ್ರದಲ್ಲೇ ಅದಾನಿ ಗ್ರೂಪ್‌ನ ಉನ್ನತ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಮತ್ತು ಸಂಸ್ಥೆಯು ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಸ್ಪಷ್ಟೀಕರಣ ಪಡೆಯಲಿದ್ದಾರೆ ಎಂದು ಎಲ್‌ಐಸಿ ಅಧ್ಯಕ್ಷ ಎಂ ಆರ್ ಕುಮಾರ್ ಅವರು ಗುರುವಾರ ಹೇಳಿದ್ದಾರೆ.

ಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ ವರದಿಯ ಬಳಿಕ ಅದಾನಿ ಕಂಪನಿಯ ಷೇರುಗಳ ಬೆಲೆಯಲ್ಲಿ ಭಾರಿ ಕುಸಿತವಾಗಿದ್ದು, ಅದಾನಿ ಸಮೂಹ ಸಂಸ್ಥೆಗಳಲ್ಲಿ ಎಲ್‌ಐಸಿ ಸಹ ಹೂಡಿಕೆ ಮಾಡಿದೆ. 

"ನಮ್ಮ ಹೂಡಿಕೆದಾರರ ತಂಡವು ಈಗಾಗಲೇ ಅದಾನಿ ಸಂಸ್ಥೆಯಿಂದ ಸ್ಪಷ್ಟೀಕರಣವನ್ನು ಕೇಳಿದೆ. ಆದರೆ ನಾವು ಫಲಿತಾಂಶಗಳ ತಯಾರಿಯಲ್ಲಿ ನಿರತರಾಗಿರುವ ಕಾರಣ ನಮ್ಮ ಉನ್ನತ ಅಧಿಕಾರಿಗಳು ಅವರನ್ನು ಇನ್ನೂ ಭೇಟಿ ಮಾಡಿಲ್ಲ. ಶೀಘ್ರದಲ್ಲೇ ಅವರನ್ನು ಭೇಟಿ ಮಾಡಿ ಸ್ಪಷ್ಟನೆ ಪಡೆಯಲಾಗುವುದು ಎಂದು ಕುಮಾರ್ ತಿಳಿಸಿದ್ದಾರೆ.

"ಅದಾನಿ ಸಂಸ್ಥೆಯಲ್ಲಿ ಏನಾಗುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾವು ಬಯಸುತ್ತೇವೆ. ಇಡೀ ಬಿಕ್ಕಟ್ಟನ್ನು ಅವರು ಹೇಗೆ ನಿರ್ವಹಿಸುತ್ತಿದ್ದಾರೆಂದು ತಿಳಿಯಲು ನಾವು ಶೀಘ್ರದಲ್ಲೇ ಅವರನ್ನು ಭೇಟಿ ಮಾಡುತ್ತೇವೆ" ಎಂದು ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT