ಸಾಂದರ್ಭಿಕ ಚಿತ್ರ 
ವಾಣಿಜ್ಯ

ದೆಹಲಿ, ಮುಂಬೈನಲ್ಲಿ ಕಚೇರಿಗಳನ್ನು ಮುಚ್ಚಿದ ಟ್ವಿಟರ್; ಮನೆಯಿಂದಲೇ ಕೆಲಸ ಮಾಡುವಂತೆ ಸಿಬ್ಬಂದಿಗೆ ಸೂಚನೆ

ಕೆಲಸದಿಂದ ಉದ್ಯೋಗಿಗಳ ವಜಾ ಮತ್ತು ಮತ್ತು ತೀವ್ರ ವೆಚ್ಚ ಕಡಿತದ ಮಧ್ಯೆ, ಟ್ವಿಟರ್ ತನ್ನ ದೆಹಲಿ ಮತ್ತು ಮುಂಬೈನಲ್ಲಿ ಕಚೇರಿಗಳನ್ನು ಮುಚ್ಚಿದೆ ಮತ್ತು ಸಿಬ್ಬಂದಿಯನ್ನು ಮನೆಯಿಂದಲೇ ಕೆಲಸ ಮಾಡಲು ಕೇಳಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಕೆಲಸದಿಂದ ಉದ್ಯೋಗಿಗಳ ವಜಾ ಮತ್ತು ಮತ್ತು ತೀವ್ರ ವೆಚ್ಚ ಕಡಿತದ ಮಧ್ಯೆ, ಟ್ವಿಟರ್ ತನ್ನ ದೆಹಲಿ ಮತ್ತು ಮುಂಬೈನಲ್ಲಿ ಕಚೇರಿಗಳನ್ನು ಮುಚ್ಚಿದೆ ಮತ್ತು ಸಿಬ್ಬಂದಿಯನ್ನು ಮನೆಯಿಂದಲೇ ಕೆಲಸ ಮಾಡಲು ಕೇಳಿದೆ ಎಂದು ಮೂಲಗಳು ತಿಳಿಸಿವೆ.

ಬಹುಪಾಲು ಇಂಜಿನಿಯರಿಂಗ್ ಸಿಬ್ಬಂದಿಯನ್ನು ಹೊಂದಿರುವ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನ ಬೆಂಗಳೂರು ಕಚೇರಿಯು ಸದ್ಯ ಕಾರ್ಯನಿರ್ವಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಮತ್ತು ಮುಂಬೈ ಕಚೇರಿಗಳನ್ನು ಕೆಲವು ವಾರಗಳ ಹಿಂದೆ ಮುಚ್ಚಲಾಗಿದೆ. ಉಳಿದ ಸಿಬ್ಬಂದಿ ಈಗ ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ ಎಂದು ಗೌಪ್ಯ ಮೂಲಗಳು ತಿಳಿಸಿವೆ.

ಆದಾಗ್ಯೂ, ಈ ಕ್ರಮದಿಂದ ಪರಿಣಾಮ ಬೀರುವ ನೌಕರರ ಸಂಖ್ಯೆಯನ್ನು ತಕ್ಷಣವೇ ಕಂಡುಹಿಡಿಯಲು ಸಾಧ್ಯವಿಲ್ಲ. ಈ ವಿಷಯದ ಕುರಿತು ಟ್ವಿಟರ್‌ಗೆ ಕಳುಹಿಸಲಾದ ಮೇಲ್‌ಗೆ ಪ್ರತಿಕ್ರಿಯೆ ಲಭ್ಯವಾಗಿಲ್ಲ. 

ಕಳೆದ ವರ್ಷ ಬಿಲಿಯನೇರ್ ಎಲಾನ್ ಮಸ್ಕ್ ಅವರು ಟ್ವಿಟರ್ ಅನ್ನು 44 ಶತಕೋಟಿ ಡಾಲರ್‌ಗೆ ಖರೀದಿಸಿದ ನಂತರ, ವೇದಿಕೆಯು ಜಾಗತಿಕವಾಗಿ ಬೃಹತ್ ವೆಚ್ಚ ಕಡಿತದ ಚಾಲನೆಯನ್ನು ಪ್ರಾರಂಭಿಸಿದ ಕಾರಣ ಭಾರತದ ಪ್ರಮುಖ ಸ್ಥಳಗಳಲ್ಲಿ ಎರಡು ಕಚೇರಿಗಳನ್ನು ಮುಚ್ಚಲಾಗಿದೆ.

ಸಂಸ್ಥೆಯು ಪ್ರಪಂಚದಾದ್ಯಂತ ನಡೆಸಿದ ಉದ್ಯೋಗ ವಜಾದಿಂದಾಗಿ ತನ್ನ ಉದ್ಯೋಗಿಗಳ ಸಾಮರ್ಥ್ಯ 7,000 ದಿಂದ 2,300ಕ್ಕೆ ಇಳಿದಿದೆ. ಕಳೆದ ವರ್ಷ ಸಿಇಒ ಪರಾಗ್ ಅಗರವಾಲ್ ಮತ್ತು ಸಿಎಫ್ಒ ಮತ್ತು ಇತರ ಅನೇಕ ಉನ್ನತ ಶ್ರೇಣಿಯ ಕೆಲಸಗಾರರನ್ನು ವಜಾಗೊಳಿಸುವುದರೊಂದಿಗೆ ಉದ್ಯೋಗದಿಂದ ವಜಾಗೊಳಿಸುವ ಪ್ರಕ್ರಿಯೆ ಪ್ರಾರಂಭವಾಗಿತ್ತು. 

ಟ್ವಿಟರ್ ಭಾರತದಲ್ಲಿಯೂ ತನ್ನ 200ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದೆ. 

ಅಮೆರಿಕ ಮೂಲದ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್, ನವೆಂಬರ್ ಆರಂಭದಲ್ಲಿ ಉದ್ಯೋಗಿಗಳಿಗೆ ಆಂತರಿಕ ಇಮೇಲ್‌ ಕಳುಹಿಸಿ, 'ಟ್ವಿಟರ್ ಅನ್ನು ಆರೋಗ್ಯಕರ ಹಾದಿಯಲ್ಲಿ ಇರಿಸುವ ಪ್ರಯತ್ನದಲ್ಲಿ, ನಮ್ಮ ಜಾಗತಿಕ ಉದ್ಯೋಗಿಗಳನ್ನು ಕಡಿಮೆ ಮಾಡುವ ಕಠಿಣ ಪ್ರಕ್ರಿಯೆಯ ಮೂಲಕ ನಾವು ಹಾದು ಹೋಗುತ್ತಿದ್ದೇವೆ' ಎಂದು ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಹಿಳಾ ವಿಶ್ವಕಪ್ 2025: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 53 ರನ್‌ಗಳ ಭರ್ಜರಿ ಜಯ, ಸೆಮಿಫೈನಲ್‌ಗೆ INDIA ಲಗ್ಗೆ!

ವೆಸ್ಟ್ ಬ್ಯಾಂಕ್ ವಶಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೇ ಅಮೆರಿಕದ ಬೆಂಬಲ ಕಳಕೊಳ್ಳಬೇಕಾಗುತ್ತೆ: ಇಸ್ರೇಲ್‌ಗೆ ಟ್ರಂಪ್ ಕಟು ಎಚ್ಚರಿಕೆ

ರಕ್ಷಣಾ ವಲಯಕ್ಕೆ 79,000 ಕೋಟಿ ರೂ. ಮೌಲ್ಯದ ಉಪಕರಣಗಳ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ!

ಹೊಸ ಸಿಜೆಐ ನೇಮಕಕ್ಕೆ ಪ್ರಕ್ರಿಯೆ ಆರಂಭ: ಯಾರಾಗಲಿದ್ದಾರೆ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ?

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಎರಡ್ಮೂರು ದಿನಗಳಲ್ಲಿ AAI ವರದಿ ಸಲ್ಲಿಕೆ- ಎಂ.ಬಿ ಪಾಟೀಲ್

SCROLL FOR NEXT