ಆರ್. ಕೃಷ್ಣಕುಮಾರ್ 
ವಾಣಿಜ್ಯ

ರತನ್ ಟಾಟಾ ಆಪ್ತ, ಟಾಟಾ ಸನ್ಸ್‌ನ ಮಾಜಿ ನಿರ್ದೇಶಕ ಆರ್‌.ಕೃಷ್ಣಕುಮಾರ್ ವಿಧಿವಶ

ಟಾಟಾ ಗ್ರೂಪ್ ನಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದ ಹಾಗೂ ರತನ್ ಟಾಟಾ ಅವರಿಗೆ ಆತ್ಮೀಯರಾಗಿದ್ದ ಆರ್.ಕೆ.ಕೃಷ್ಣಕುಮಾರ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಮುಂಬಯಿ: ಟಾಟಾ ಗ್ರೂಪ್ ನಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದ ಹಾಗೂ ರತನ್ ಟಾಟಾ ಅವರಿಗೆ ಆತ್ಮೀಯರಾಗಿದ್ದ ಆರ್. ಕೃಷ್ಣಕುಮಾರ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕೃಷ್ಣಕುಮಾರ್ ಭಾನುವಾರ ಸಂಜೆ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳ ಮೂಲದ ಕೃಷ್ಣಕುಮಾರ್ ಅವರಿಗೆ 84 ವರ್ಷ ವಯಸ್ಸಾಗಿತ್ತು, ಟಾಟಾ ಸಮೂಹದ ಇಂಡಿಯನ್ ಹೋಟೆಲ್ಸ್ ಮುಖ್ಯಸ್ಥ ಸೇರಿದಂತೆ ವಿವಿಧ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು.

ಕೃಷ್ಣಕುಮಾರ್ ನಿಧನಕ್ಕೆ ರತನ್ ಟಾಟಾ ಸಂತಾಪ ಸೂಚಿಸಿದ್ದಾರೆ. ನನ್ನ ಸ್ನೇಹಿತ, ಸಹೋದ್ಯೋಗಿ ಅವರ ಅಗಲಿಕೆಯನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಉದ್ಯಮ ಮತ್ತು ವೈಯಕ್ತಿಕವಾಗಿ ಅವರ ಜೊತೆಗಿನ ಒಡನಾಟವನ್ನು ಸದಾ ಸ್ಮರಿಸುತ್ತೇನೆ. ಅವರು ಟಾಟಾ ಸಮೂಹ ಮತ್ತು ಟಾಟಾ ಟ್ರಸ್ಟ್‌ನ ನಿಜವಾದ ದಿಗ್ಗಜರಾಗಿದ್ದು, ನಮಗೆಲ್ಲರಿಗೂ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು.

ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರ್ ಸಹ ಸಂತಾಪ ಸೂಚಿಸಿದ್ದು, ಟಾಟಾ ಸಮೂಹಕ್ಕೆ ಕೃಷ್ಣಕುಮಾರ್ ನೀಡಿದ್ದ ಅಗಾಧ ಕೊಡುಗೆಯನ್ನು ಸ್ಮರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT