ಆರ್. ಕೃಷ್ಣಕುಮಾರ್ 
ವಾಣಿಜ್ಯ

ರತನ್ ಟಾಟಾ ಆಪ್ತ, ಟಾಟಾ ಸನ್ಸ್‌ನ ಮಾಜಿ ನಿರ್ದೇಶಕ ಆರ್‌.ಕೃಷ್ಣಕುಮಾರ್ ವಿಧಿವಶ

ಟಾಟಾ ಗ್ರೂಪ್ ನಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದ ಹಾಗೂ ರತನ್ ಟಾಟಾ ಅವರಿಗೆ ಆತ್ಮೀಯರಾಗಿದ್ದ ಆರ್.ಕೆ.ಕೃಷ್ಣಕುಮಾರ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಮುಂಬಯಿ: ಟಾಟಾ ಗ್ರೂಪ್ ನಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದ ಹಾಗೂ ರತನ್ ಟಾಟಾ ಅವರಿಗೆ ಆತ್ಮೀಯರಾಗಿದ್ದ ಆರ್. ಕೃಷ್ಣಕುಮಾರ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕೃಷ್ಣಕುಮಾರ್ ಭಾನುವಾರ ಸಂಜೆ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳ ಮೂಲದ ಕೃಷ್ಣಕುಮಾರ್ ಅವರಿಗೆ 84 ವರ್ಷ ವಯಸ್ಸಾಗಿತ್ತು, ಟಾಟಾ ಸಮೂಹದ ಇಂಡಿಯನ್ ಹೋಟೆಲ್ಸ್ ಮುಖ್ಯಸ್ಥ ಸೇರಿದಂತೆ ವಿವಿಧ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು.

ಕೃಷ್ಣಕುಮಾರ್ ನಿಧನಕ್ಕೆ ರತನ್ ಟಾಟಾ ಸಂತಾಪ ಸೂಚಿಸಿದ್ದಾರೆ. ನನ್ನ ಸ್ನೇಹಿತ, ಸಹೋದ್ಯೋಗಿ ಅವರ ಅಗಲಿಕೆಯನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಉದ್ಯಮ ಮತ್ತು ವೈಯಕ್ತಿಕವಾಗಿ ಅವರ ಜೊತೆಗಿನ ಒಡನಾಟವನ್ನು ಸದಾ ಸ್ಮರಿಸುತ್ತೇನೆ. ಅವರು ಟಾಟಾ ಸಮೂಹ ಮತ್ತು ಟಾಟಾ ಟ್ರಸ್ಟ್‌ನ ನಿಜವಾದ ದಿಗ್ಗಜರಾಗಿದ್ದು, ನಮಗೆಲ್ಲರಿಗೂ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು.

ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರ್ ಸಹ ಸಂತಾಪ ಸೂಚಿಸಿದ್ದು, ಟಾಟಾ ಸಮೂಹಕ್ಕೆ ಕೃಷ್ಣಕುಮಾರ್ ನೀಡಿದ್ದ ಅಗಾಧ ಕೊಡುಗೆಯನ್ನು ಸ್ಮರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT