ಸಂಗ್ರಹ ಚಿತ್ರ 
ವಾಣಿಜ್ಯ

NDTV ಪ್ರತಿ ಷೇರಿಗೆ ಹೆಚ್ಚುವರಿ 48.65 ರೂ..; ಅದಾನಿ ಗ್ರೂಪ್ ಆಫರ್

ಖ್ಯಾತ ರಾಷ್ಟ್ರೀಯ ಸುದ್ದಿವಾಹಿನಿ ಎನ್ ಡಿಟಿವಿ ಷೇರು ಖರೀದಿ ಪ್ರಕ್ರಿಯೆಗೆ ಮುಂದಾಗಿರುವ ಅದಾನಿ ಸಮೂಹ ಇದೀಗ ಸುದ್ದಿವಾಹಿನಿ ಸಂಸ್ಥೆಗೆ ಮತ್ತೊಂದು ಆಫರ್ ನೀಡಿದ್ದು, ಈ ಹಿಂದೆ ತಾನು ಘೋಷಣೆ ಮಾಡಿದ್ದ ದರಕ್ಕಿಂತ ಪ್ರತೀ ಷೇರಿಗೆ ಹೆಚ್ಚುವರಿ 48.65 ರೂ ನೀಡುವುದಾಗಿ ಘೋಷಣೆ ಮಾಡಿದೆ.

ಮುಂಬೈ: ಖ್ಯಾತ ರಾಷ್ಟ್ರೀಯ ಸುದ್ದಿವಾಹಿನಿ ಎನ್ ಡಿಟಿವಿ ಷೇರು ಖರೀದಿ ಪ್ರಕ್ರಿಯೆಗೆ ಮುಂದಾಗಿರುವ ಅದಾನಿ ಸಮೂಹ ಇದೀಗ ಸುದ್ದಿವಾಹಿನಿ ಸಂಸ್ಥೆಗೆ ಮತ್ತೊಂದು ಆಫರ್ ನೀಡಿದ್ದು, ಈ ಹಿಂದೆ ತಾನು ಘೋಷಣೆ ಮಾಡಿದ್ದ ದರಕ್ಕಿಂತ ಪ್ರತೀ ಷೇರಿಗೆ ಹೆಚ್ಚುವರಿ 48.65 ರೂ ನೀಡುವುದಾಗಿ ಘೋಷಣೆ ಮಾಡಿದೆ.

ಹೌದು.. ಅದಾನಿ ಗ್ರೂಪ್ NDTV ಮತ್ತೊಂದು ಓಪನ್ ಆಫರ್ ನೀಡಿದ್ದು, ಈ ಹಿಂದೆ ತಾನು ಖರೀದಿಸಿದ ಎನ್‌ಡಿಟಿವಿ ಷೇರುಗಳಿಗೆ ರೂ 48.65/ಷೇರಿಗೆ ಹೆಚ್ಚುವರಿ ಬೆಲೆಯನ್ನು ಪಾವತಿಸಲು ನಿರ್ಧರಿಸಿದೆ. ಈ ಹಿಂದೆ ತಾನು ಪ್ರತೀ ಷೇರಿಗೆ 294 ರೂ ನೀಡಿ ಖರೀದಿಸುವುದಾಗಿ ಹೇಳಿತ್ತು. ಇದೀಗ ಇದೇ ದರಕ್ಕೆ ಮತ್ತೆ ಹೆಚ್ಚುವರಿ 48.65 ರೂ ಸೇರಿಸಿ ಪ್ರತೀ ಷೇರಿಗೆ ಒಟ್ಟು  342.65 ರೂ ನೀಡುವುದಾಗಿ ಅದಾನಿ ಸಂಸ್ಥೆ ಘೋಷಣೆ ಮಾಡಿದೆ. 

ಈ ಹಿಂದೆ ವಿಶ್ವಪ್ರಧಾನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್ (VCPL) ಸಂಸ್ಥೆಯ ಹೆಸರಿನಲ್ಲಿ ಅದಾನಿ ಸಮೂಹದ ಎಎಮ್‌ಜಿ ಮೀಡಿಯಾ, ಪರೋಕ್ಷವಾಗಿ ಎನ್‌ಡಿಟಿವಿಯ ಶೇ. 26 ರಷ್ಟು ಷೇರುಗಳ ಖರೀದಿ ಮಾಡಲು ನಿರ್ಧರಿಸಿತ್ತು.  ವಿಶ್ವಪ್ರಧಾನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಎಎಂಜಿ ಮೀಡಿಯಾ ನೆಟ್‌ವರ್ಕ್ಸ್‌ ಲಿಮಿಟೆಡ್ (AMNL) ಸಂಸ್ಥೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತದೆ.

ಎನ್ ಡಿಟಿವಿ ಮೂರು ದಶಕಗಳಿಂದ ಪ್ರಮುಖ ಮಾಧ್ಯಮ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಂಪನಿಯು ಮೂರು ರಾಷ್ಟ್ರೀಯ ಸುದ್ದಿ ವಾಹಿನಿಗಳನ್ನು(NDTV 24x7, NDTV India and NDTV Profit) ಹೊಂದಿದೆ.

2022ರ ಆರ್ಥಿಕ ವರ್ಷದಲ್ಲಿ ಎನ್‌ಡಿಟಿವಿ ಒಟ್ಟು 421 ಕೋಟಿ ಆದಾಯ ಸಂಗ್ರಹಿಸಿತ್ತು. ಈ ಪೈಕಿ 85 ಕೋಟಿ ಲಾಭ ದಾಖಲಿಸಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT