ಸಾಂದರ್ಭಿಕ ಚಿತ್ರ 
ವಾಣಿಜ್ಯ

18 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸದಿಂದ ವಜಾ: ಇ–ಕಾಮರ್ಸ್ ದೈತ್ಯ ಅಮೆಜಾನ್ ಘೋಷಣೆ

ಇ–ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿ 18 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವುದಾಗಿ ಗುರುವಾರ ಹೇಳಿದೆ.

ನವದೆಹಲಿ: ಇ–ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿ 18 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವುದಾಗಿ ಗುರುವಾರ ಹೇಳಿದೆ. 2022ರ ನವೆಂಬರ್‌ನಲ್ಲಿ 10,000 ಉದ್ಯೋಗಿಗಳನ್ನು ಅಷ್ಟೆ ತೆಗೆಯಲಾಗುತ್ತದೆ ಎಂದು ಕಂಪನಿ ಹೇಳಿತ್ತು. ಆದರೀಗ ಹಿಂದೆ ತಿಳಿಸಿದ್ದಕ್ಕಿಂತ ಹೆಚ್ಚು ನೌಕರರನ್ನು ವಜಾಗೊಳಿಸಲು ಚಿಂತಿಸಿದೆ.

ಕಂಪನಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಉದ್ಯೋಗ ಕಡಿತಕ್ಕೆ ರಿಟೇಲ್ ಮಾರಾಟ, ಮಾನವ ಸಂಪನ್ಮೂಲ ಹಾಗೂ ಉಪಕರಣಗಳ ವಿಭಾಗವನ್ನು ಕೇಂದ್ರೀಕರಿಸಲಿದೆ ಎಂದು ಅಮೆಜಾನ್‌ ಸಿಇಒ ಆ್ಯಂಡಿ ಜೆಸ್ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಚ್‌ಪಿ, ಮೆಟಾ, ಮತ್ತು ಟ್ವಿಟರ್‌ನಂತಹ ಕಂಪನಿಗಳು ಕೂಡ ವೆಚ್ಚ ಕಡಿತದ ಮೊರೆ ಹೋಗಿವೆ.

ಅನಿಶ್ಚಿತ ಆರ್ಥಿಕತೆ ಹಾಗೂ ಕೋವಿಡ್ ಸಂದರ್ಭದಲ್ಲಿ ಮಾಡಿಕೊಂಡಿದ್ದ ಅಧಿಕ ನೇಮಕಾತಿ ಅಂಶವನ್ನು ಉಲ್ಲೇಖಿಸಿ ಅಮೆಜಾನ್ ಉದ್ಯೋಗಿಗಳ ವಜಾ ನಿರ್ಧಾರವನ್ನು ಕೈಗೊಂಡಿದೆ. ನವೆಂಬರ್‌ನಲ್ಲಿ ಮಾಡಿಕೊಂಡಿದ್ದ ಕಡತವನ್ನು ಇಂದು ನಾವು ಹಂಚಿಕೊಳ್ಳುತ್ತಿದ್ದೇವೆ, ಕಂಪನಿಯಿಂದ 18,000 ಉದ್ಯೋಗಿಗಳನ್ನು ತೆಗೆದುಹಾಕುತ್ತಿದ್ದೇವೆ ಎಂದು ಸಿಇಒ ಆಂಡಿ ಜಾಸ್ಸಿ ಬುಧವಾರ ತಿಳಿಸಿರುವುದಾಗಿ ವರದಿಯಾಗಿದೆ.

ಉದ್ಯೋಗಿಗಳನ್ನು ತೆಗೆದುಹಾಕುತ್ತಿರುವ ನಿರ್ಧಾರ ಅವರನ್ನು ಕಷ್ಟಕ್ಕೆ ದೂಡುತ್ತದೆ ಎಂಬುದು ನಮಗೆ ತಿಳಿದಿದೆ. ಆದರೆ ನಾವು ಈ ಪ್ರಕ್ರಿಯೆಯನ್ನು ಲಘುವಾಗಿ ತಗೆದುಕೊಳ್ಳುತ್ತಿಲ್ಲ. ನಾವು ವಜಾಗೊಳಿಸುತ್ತಿರುವವರಿಗೆ ಬೆಂಬಲ ನೀಡುವ ಎಲ್ಲಾ ಪ್ರಯತ್ನಗಳನ್ನೂ ಮಾಡುತ್ತಿದ್ದೇವೆ. ಅವರಿಗೆ ಪ್ರತ್ಯೇಕ ಪಾವತಿ, ಆರೋಗ್ಯ ವಿಮೆಯ ಪ್ರಯೋಜನಗಳು, ಬಾಹ್ಯ ಉದ್ಯೋಗ ನಿಯೋಜನೆಗೆ ಬೆಂಬಲ ನೀಡುವ ಪ್ಯಾಕೇಜ್ ಅನ್ನು ಒದಗಿಸುವುದಾಗಿ ಜಾಸ್ಸಿ ಭರವಸೆ ನೀಡಿದ್ದಾರೆ

2020ರ ಆರಂಭದಿಂದ 2022ರ ಆರಂಭದ ನಡುವೆ ಅಮೆಜಾನ್ ತನ್ನ ಉದ್ಯೋಗಿಳನ್ನು ಜಾಗತಿಕವಾಗಿ ದ್ವಿಗುಣಗೊಳಿಸಿತ್ತು. ಕೋವಿಡ್ ಸಂದರ್ಭದಲ್ಲಿ ವಿತರಕರ ಬೇಡಿಕೆ ಹೆಚ್ಚಿದ್ದರಿಂದ ಇದನ್ನು ಪೂರೈಸಲು ಚಿಲ್ಲರೆ ವ್ಯಾಪಾರಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಿಕೊಂಡಿತ್ತು. ಕಂಪನಿ ಸೆಪ್ಟೆಂಬರ್ ಅಂತ್ಯದ ವೇಳೆಗೆ 15.40 ಲಕ್ಷ ಉದ್ಯೋಗಿಗಳನ್ನು ಹೊಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT