ಮೈಕ್ರೋಸಾಫ್ಟ್ 
ವಾಣಿಜ್ಯ

ಕಳಪೆ ಆರ್ಥಿಕತೆ: ಮೈಕ್ರೋಸಾಫ್ಟ್ ನಲ್ಲಿ 10 ಸಾವಿರ ಉದ್ಯೋಗ ಕಡಿತ

ಕಳಪೆ ಆರ್ಥಿಕತೆ ಕಾರಣದಿಂದ ಟೆಕ್ ದೈತ್ಯ ಮೈಕ್ರೋಸಾಫ್ಟ್ ಮುಂದಿನ ಮಾರ್ಚ್ 31ರ ವೇಳೆಗೆ ಜಾಗತಿಕವಾಗಿ ಶೇ. 5 ರಷ್ಟು ಅಂದರೆ 10,000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಬುಧವಾರ ಘೋಷಿಸಿದೆ.

ಬೆಂಗಳೂರು: ಕಳಪೆ ಆರ್ಥಿಕತೆ ಕಾರಣದಿಂದ ಟೆಕ್ ದೈತ್ಯ ಮೈಕ್ರೋಸಾಫ್ಟ್ ಮುಂದಿನ ಮಾರ್ಚ್ 31ರ ವೇಳೆಗೆ ಜಾಗತಿಕವಾಗಿ ಶೇ. 5 ರಷ್ಟು ಅಂದರೆ 10,000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಬುಧವಾರ ಘೋಷಿಸಿದೆ.

ಈ ಉದ್ಯೋಗ ಕಡಿತ ಎಷ್ಟು ಭಾರತೀಯ ಉದ್ಯೋಗಿಗಳ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 1990 ರಲ್ಲಿ ಭಾರತದಲ್ಲಿ ಕಾರ್ಯಾಚರಣೆಯನ್ನು ಆರಂಭಿಸಿದ ಮೈಕ್ರೋಸಾಫ್ಟ್, ದೇಶದ 11 ನಗರಗಳಲ್ಲಿ 20,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದೆ.

ಗ್ರಾಹಕರು ಈಗ ತಮ್ಮ ಡಿಜಿಟಲ್ ವೆಚ್ಚವನ್ನು ಕಡಿಮೆ ಮಾಡಲು ಬಯಸುತ್ತಿದ್ದಾರೆ. ಕಡಿಮೆ ವೆಚ್ಚದಲ್ಲಿ ಹೆಚ್ಚು ಕೆಲಸಗಳನ್ನು ಬಯಸುತ್ತಿದ್ದಾರೆ. ಜಗತ್ತಿನ ಕೆಲವು ಪ್ರದೇಶಗಳಲ್ಲಿ ಆರ್ಥಿಕ ಹಿಂಜರಿತ ಇದೆ. ಇನ್ನು ಕೆಲವು ಪ್ರದೇಶಗಳು ಆರ್ಥಿಕ ಹಿಂಜರಿತ ಎದುರಿಸುವ ನಿರೀಕ್ಷೆಯಲ್ಲಿರುವ ಕಾರಣ ಗ್ರಾಹಕರು ಎಚ್ಚರಿಕೆ ವಹಿಸಿದ್ದಾರೆ ಎಂದು ಮೈಕ್ರೋಸಾಫ್ಟ್ ಹೇಳಿದೆ.

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಅವರು ಉದ್ಯೋಗಿಗಳಿಗೆ ಬರೆದ ಟಿಪ್ಪಣಿಯಲ್ಲಿ, "ನಾವು ಗಮನಾರ್ಹ ಬದಲಾವಣೆಯ ಸಮಯದಲ್ಲಿ ಜೀವಿಸುತ್ತಿದ್ದೇವೆ... ಪ್ರಪಂಚದ ಕೆಲವು ಭಾಗಗಳು ಆರ್ಥಿಕ ಹಿಂಜರಿತ ಎದುರಿಸುತ್ತಿದ್ದು, ಪ್ರತಿಯೊಂದು ಉದ್ಯಮದಲ್ಲಿ ಮತ್ತು ಭೌಗೋಳಿಕತೆಯಲ್ಲಿ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಹೇಳಿದ್ದಾರೆ.

ಸಾಂಸ್ಥಿಕ ಪುನರ್‌ರಚನೆ ಭಾಗವಾಗಿ ಮೈಕ್ರೋಸಾಫ್ಟ್‌ ಕಳೆದ ಜುಲೈ ವೇಳೆಗೆ ಮೂರು ಭಾರಿ ಉದ್ಯೋಗ ಕಡಿತ ಪ್ರಕಟಿಸಿತ್ತು. ಆದರೂ ಕಂಪನಿಯ ಪರಿಸ್ಥಿತಿ ಸುಧಾರಣೆ ಆಗಿಲ್ಲ. ಹೀಗಾಗಿ ಮತ್ತೆ 10 ಸಾವಿರ ಉದ್ಯೋಗ ಕಡಿತಕ್ಕೆ ಮುಂದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ