ಗೂಗಲ್ ಸಾಂದರ್ಭಿಕ ಚಿತ್ರ 
ವಾಣಿಜ್ಯ

ಗೂಗಲ್ ನಿಂದ 12,000 ಉದ್ಯೋಗಿಗಳ ವಜಾ; 'ಕ್ಷಮಿಸಿ' ಎಂದ ಸುಂದರ್ ಪಿಚೈ

ಟೆಕ್ ದೈತ್ಯ ಮೈಕ್ರೋಸಾಫ್ಟ್ ಸೇರಿದಂತೆ ಹಲವು ಟೆಕ್ ಕಂಪನಿಗಳು ಉದ್ಯೋಗಿಗಳ ವಜಾ ಪ್ರಕ್ರಿಯೆ ಮುಂದುವರೆಸಿದ್ದು, ಗೂಗಲ್ ಮಾತೃ ಸಂಸ್ಥೆ ಆಲ್ಫಾಬೆಟ್ 12,000 ಉದ್ಯೋಗಗಳನ್ನು ತೆಗೆದುಹಾಕುವುದಾಗಿ ಶುಕ್ರವಾರ ಘೋಷಿಸಿದೆ.

ಬೆಂಗಳೂರು: ಟೆಕ್ ದೈತ್ಯ ಮೈಕ್ರೋಸಾಫ್ಟ್ ಸೇರಿದಂತೆ ಹಲವು ಟೆಕ್ ಕಂಪನಿಗಳು ಉದ್ಯೋಗಿಗಳ ವಜಾ ಪ್ರಕ್ರಿಯೆ ಮುಂದುವರೆಸಿದ್ದು, ಗೂಗಲ್ ಮಾತೃ ಸಂಸ್ಥೆ ಆಲ್ಫಾಬೆಟ್ 12,000 ಉದ್ಯೋಗಗಳನ್ನು ತೆಗೆದುಹಾಕುವುದಾಗಿ ಶುಕ್ರವಾರ ಘೋಷಿಸಿದೆ.

ಜನವರಿ 18 ರಂದು ಮೈಕ್ರೋಸಾಫ್ಟ್ ಕಂಪನಿ 10,000 ಉದ್ಯೋಗ ಕಡಿತಗೊಳಿಸುವುದಾಗಿ ಘೋಷಿಸಿತ್ತು. ಇದರ ಬೆನ್ನಲ್ಲೇ ಈಗ ಗೂಗಲ್ ನ ಆಲ್ಫಾಬೆಟ್ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗಿದೆ.

ಗೂಗಲ್ ಸಿಇಒ ಸುಂದರ್ ಪಿಚೈ ಅವರು ಉದ್ಯೋಗಿಗಳಿಗೆ ಕಳುಹಿಸಿದ ಇಮೇಲ್‌ನಲ್ಲಿ, "ಕಳೆದ ಎರಡು ವರ್ಷಗಳಲ್ಲಿ ನಾವು ನಾಟಕೀಯ ಬೆಳವಣಿಗೆಯ ಅವಧಿಗಳನ್ನು ನೋಡಿದ್ದೇವೆ. ಆ ಬೆಳವಣಿಗೆಯನ್ನು ಸರಿಪಡಿಸಲು. ನಮ್ಮ ಗಮನವನ್ನು ತೀಕ್ಷ್ಣಗೊಳಿಸಲು ಮತ್ತು ನಮ್ಮ ವೆಚ್ಚದ ವ್ಯವಹಾರಗಳನ್ನು ಪುನರ್‌ ರೂಪಿಸಲು ಹಾಗೂ ನಮ್ಮ ಪ್ರತಿಭೆ ಮತ್ತು ಬಂಡವಾಳವನ್ನು ನಮ್ಮ ಅತ್ಯುನ್ನತ ಆದ್ಯತೆಗಳಿಗೆ ನಿರ್ದೇಶಿಸಲು ಪ್ರಮುಖ ಸಂದರ್ಭ ಇದಾಗಿದೆ ಎಂದು ಹೇಳಿದ್ದಾರೆ.

"ಕಂಪನಿಯ ಈ ನಿರ್ಧಾರಕ್ಕಾಗಿ ನಾನು ತೀವ್ರ ವಿಷಾದ ವ್ಯಕ್ತಪಡಿಸುತ್ತೇನೆ. ಈ ಬದಲಾವಣೆಗಳು ಗೂಗ್ಲರ್‌ಗಳ ಜೀವನದ ಮೇಲೆ ಪರಿಣಾಮ ಬೀರುತ್ತವೆ ಎಂಬ ಅಂಶ ನನಗೂ ಅತ್ಯಂತ ಭಾರವಾಗಿದೆ ಎಂದು ಪಿಚೈ ತಿಳಿಸಿದ್ದಾರೆ.

ಕಂಪನಿಯು ಪೂರ್ಣ ಅಧಿಸೂಚನೆಯ ಅವಧಿಯಲ್ಲಿ(ಕನಿಷ್ಠ 60 ದಿನಗಳು) ಉದ್ಯೋಗಿಗಳಿಗೆ ವೇತನ ಪಾವತಿಸುತ್ತದೆ. ಗೂಗಲ್‌ನಲ್ಲಿ ಪ್ರತಿ ಹೆಚ್ಚುವರಿ ವರ್ಷಕ್ಕೆ 16 ವಾರಗಳ ಸಂಬಳ ಮತ್ತು ಎರಡು ವಾರಗಳಿಂದ ಪ್ರಾರಂಭವಾಗುವ ಬೇರ್ಪಡಿಕೆ ಪ್ಯಾಕೇಜ್ ಅನ್ನು ಗೂಗಲ್‌ ನೀಡುತ್ತದೆ ಮತ್ತು ಕನಿಷ್ಠ 16 ವಾರಗಳ ಜಿಎಸ್‌ಯು ವೆಸ್ಟಿಂಗ್ ಅನ್ನು ನೀಡಲಾಗುತ್ತದೆ ಎಂದು ಪಿಚೈ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ