ಗೂಗಲ್ ಸಿಇಒ ಸುಂದರ್ ಪಿಚೈ 
ವಾಣಿಜ್ಯ

12,000 ಸಿಬ್ಬಂದಿಗಳ ವಜಾ ಮಾಡದಿದ್ದರೆ ಸಮಸ್ಯೆ ಇನ್ನಷ್ಟು ಜಟಿಲವಾಗುತ್ತಿತ್ತು: ಗೂಗಲ್ ಸಿಇಒ ಸುಂದರ್ ಪಿಚೈ

ಗೂಗಲ್ ಸಂಸ್ಛೆಯಿಂದ 12 ಸಾವಿರ ಸಿಬ್ಬಂದಿಗಳ ವಜಾ ಮಾಡಿದ ಕ್ರಮವನ್ನು ಸಮರ್ಥಿಸಿಕೊಂಡಿರುವ ಗೂಗಲ್ ಸಿಇಒ ಸುಂದರ್ ಪಿಚೈ ಅವರು, ಸಿಬ್ಬಂದಿಗಳ ವಜಾ ಮಾಡದಿದ್ದರೆ ಸಮಸ್ಯೆ ಇನ್ನಷ್ಟು ಜಟಿಲವಾಗುತ್ತಿತ್ತು ಎಂದು ಹೇಳಿದ್ದಾರೆ.

ಬೆಂಗಳೂರು: ಗೂಗಲ್ ಸಂಸ್ಛೆಯಿಂದ 12 ಸಾವಿರ ಸಿಬ್ಬಂದಿಗಳ ವಜಾ ಮಾಡಿದ ಕ್ರಮವನ್ನು ಸಮರ್ಥಿಸಿಕೊಂಡಿರುವ ಗೂಗಲ್ ಸಿಇಒ ಸುಂದರ್ ಪಿಚೈ ಅವರು, ಸಿಬ್ಬಂದಿಗಳ ವಜಾ ಮಾಡದಿದ್ದರೆ ಸಮಸ್ಯೆ ಇನ್ನಷ್ಟು ಜಟಿಲವಾಗುತ್ತಿತ್ತು ಎಂದು ಹೇಳಿದ್ದಾರೆ.

ಕಂಪನಿಯ ಆಂತರಿಕ ಸಭೆಯಲ್ಲಿ ಪಿಚೈ ಈ ರೀತಿ ಹೇಳಿಕೆ ನೀಡಿದ್ದು, ಇನ್ನಷ್ಟು ಕಠಿಣ ಸಮಸ್ಯೆ ಎದುರಿಸುವುದನ್ನು ತಪ್ಪಿಸಲು ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಲಾಯ್ತು ಎಂದು ಪಿಚೈ ಹೇಳಿದ್ದಾರೆ.

ಗೂಗಲ್‌ನ ಒಟ್ಟು ಸಿಬ್ಬಂದಿಗಳ ಪೈಕಿ ಶೇ 6 ಅಂದರೆ 12,000 ಮಂದಿಯನ್ನು ಕೆಲಸದಿಂದ ಕಿತ್ತು ಹಾಕಿದ ಬೆನ್ನಲ್ಲೇ, ಅವರು ಈ ರೀತಿಯಾಗಿ ಹೇಳಿದ್ದಾರೆ.

‘ಕಂಪನಿಯ ಸಂಸ್ಥಾಪಕರು ಹಾಗೂ ನಿರ್ದೇಶಕರೊಂದಿಗೆ ಚರ್ಚೆ ಮಾಡಿ ಸಿಬ್ಬಂದಿ ಸಂಖ್ಯೆಯನ್ನು ಶೇ.6 ರಷ್ಟು ಕಡಿಮೆ ಮಾಡಲು ನಿರ್ಧರಿಸಲಾಯಿತು. ಒಂದು ವೇಳೆ ನಾವು ಸ್ಪಷ್ಟವಾಗಿ, ನಿರ್ಣಾಯಕವಾಗಿ ಮತ್ತು ತ್ವರಿತವಾಗಿ ಕೆಲಸ ಮಾಡಿದೇ ಇದ್ದರೆ, ಸಮಸ್ಯೆಗಳು ಹೆಚ್ಚಾಗಿ, ಇದಕ್ಕಿಂತ ಕಠಿಣ ಸಮಸ್ಯೆ ಎದುರಿಸಬೇಕಿತ್ತು. ಹೀಗಾಗಿ ನಾನು ಈ ನಿರ್ಧಾರ ಮಾಡಿದೆ‘ ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ.

ಇದಕ್ಕೂ ಮುನ್ನ ಶುಕ್ರವಾರ ಉದ್ಯೋಗ ಕಡಿತದ ಬಗ್ಗೆ ಉದ್ಯೋಗಿಗಳಿಗೆ ಇ–ಮೇಲ್‌ ಮಾಡಿದ್ದ ಅವರು, ‘ನಾನು ನಿಮ್ಮೊಂದಿಗೆ ಬೇಸರದ ಸಂಗತಿಯನ್ನು ಹಂಚಿಕೊಳ್ಳಬೇಕಿದೆ. ನಾವು ನಮ್ಮ ಸಿಬ್ಬಂದಿಯನ್ನು ಸುಮಾರು 12000 ದಷ್ಟು ಕಡಿಮೆ ಮಾಡಲು ಮುಂದಾಗಿದ್ದೇವೆ. ಇದರ ಪರಿಣಾಮ ಎದುರಿಸುವ ಅಮೆರಿಕದ ಉದ್ಯೋಗಿಗಳಿಗೆ ನಾವು ಈಗಾಗಲೇ ಮೇಲ್ ಮಾಡಿದ್ದೇವೆ. ಇತರೆ ರಾಷ್ಟ್ರಗಳಲ್ಲಿ ಅಲ್ಲಿನ ಸ್ಥಳೀಯ ಕಾನೂನಿಗನ್ವಯ ಈ ಪ್ರಕ್ರಿಯೆ ತಡವಾಗಬಹುದು‘ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT