ಝೀರೋಧ ಸಿಇಒ ನಿಖಿಲ್ ಕಾಮತ್ 
ವಾಣಿಜ್ಯ

ಸಿಲಿಕಾನ್ ವ್ಯಾಲಿ ಬ್ಯಾಂಕ್ ವೈಫಲ್ಯದಿಂದ ಕಲಿಯಬೇಕಿರುವ ಪಾಠ ಏನು?: ಝೀರೋಧ ಸಿಇಒ ನಿಖಿಲ್ ಕಾಮತ್ ವಿವರಣೆ ಹೀಗಿದೆ..

ಸಿಲಿಕಾನ್ ವ್ಯಾಲಿ ಬ್ಯಾಂಕ್ (ಎಸ್ ವಿಬಿ) ಕುಸಿತದ ಬಗ್ಗೆ ಚರ್ಚೆಗಳಾಗುತ್ತಿದ್ದು, ಈ ಕುಸಿತದಿಂದ ನಾವು ಕಲಿಯಬೇಕಿರುವ ಪಾಠಗಳೇನು ಎಂಬುದರ ಬಗ್ಗೆ ಝೀರೋಧ ಸ್ಥಾಪಕ ಹಾಗೂ ಇನ್ವೆಸ್ಟರ್ ನಿತಿನ್ ಕಾಮತ್ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಬೆಂಗಳೂರು: ಸಿಲಿಕಾನ್ ವ್ಯಾಲಿ ಬ್ಯಾಂಕ್ (ಎಸ್ ವಿಬಿ) ಕುಸಿತದ ಬಗ್ಗೆ ಚರ್ಚೆಗಳಾಗುತ್ತಿದ್ದು, ಈ ಕುಸಿತದಿಂದ ನಾವು ಕಲಿಯಬೇಕಿರುವ ಪಾಠಗಳೇನು ಎಂಬುದರ ಬಗ್ಗೆ ಝೀರೋಧ ಸ್ಥಾಪಕ ಹಾಗೂ ಇನ್ವೆಸ್ಟರ್ ನಿತಿನ್ ಕಾಮತ್ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.
 
ಎಸ್ ವಿಬಿ ಆಗಿರಬಹುದು ಅಥವಾ ಇತ್ತೀಚಿನ ಯೆಸ್ ಬ್ಯಾಂಕ್ ಆಗಿರಬಹುದು ಇದರ ಕುಸಿತದ ಬಗ್ಗೆ ಟ್ವೀಟ್ ಮಾಡಿರುವ ಕಾಮತ್, ಎಲ್ಲಾ ಉದ್ಯಮದಲ್ಲೂ ಒಂದಲ್ಲಾ ಒಂದು ಹಂತದಲ್ಲಿ, ಅನಿರೀಕ್ಷಿತ ಬದಲಾವಣೆಗಳು ಎದುರಾಗಬಹುದು. ಆದ್ದರಿಂದ ಪ್ರತಿಯೊಂದನ್ನೂ ರಿಸ್ಕ್ ಎಂದೇ ಪರಿಗಣಿಸಿ ಹಾಗೂ ಅದನ್ನು ಎದುರಿಸಲು ಅಥವಾ ನಿವಾರಿಸಲು ಅಗತ್ಯವಿರುವ ಎಲ್ಲವನ್ನೂ ಮಾಡಿ. ಉದ್ಯಮದಲ್ಲಿ ಅಂತಹ ಸನ್ನಿವೇಶಗಳನ್ನು ಎದುರಿಸಿ ದಾಟಿ ಮುಂದೆ ಸಾಗಬೇಕು ಎಂದು ವಿವರಿಸಿದ್ದಾರೆ.

"ಎಸ್ ವಿಬಿ ಅಥವಾ ಯೆಸ್ ಬ್ಯಾಂಕ್ ಕುಸಿತದ ಉದಾಹರಣೆಯಿಂದ ಕಲಿಯಬೇಕಾಗಿರುವುದೇನು ಎಂದರೆ, ಭಾರತೀಯ ಪರಿಭಾಷೆಯಲ್ಲಿ, ಕಾರ್ಯನಿರ್ವಹಣೆಯ ಬಂಡವಾಳವನ್ನು ಬೇರೆ ಬೇರೆ ಬ್ಯಾಂಕ್ ಗಳಲ್ಲಿ ಇಡುವ ಕ್ರಮ ಒಳಿತು ಎಂಬ ಪಾಠ" ಎಂದು ನಿತಿನ್ ಕಾಮತ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT