ಪ್ಯಾನ್-ಆಧಾರ್ ಲಿಂಕ್ 
ವಾಣಿಜ್ಯ

ಆಧಾರ್‌-ಪ್ಯಾನ್ ಜೋಡಣೆಗೆ ಕೊನೆಯ ದಿನ: ಜೂನ್ 30 ರವರೆಗೆ ವಿಸ್ತರಣೆ

ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯಾವಕಾಶ ನೀಡುವ ಸಲುವಾಗಿ, ಪ್ಯಾನ್ ಸಂಖ್ಯೆ ಮತ್ತು ಆಧಾರ್ ನ್ನು ಲಿಂಕ್ ಮಾಡುವ ದಿನಾಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ.

ನವದೆಹಲಿ: ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯಾವಕಾಶ ನೀಡುವ ಸಲುವಾಗಿ, ಪ್ಯಾನ್ ಸಂಖ್ಯೆ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ, ಆ ಮೂಲಕ ವ್ಯಕ್ತಿಗಳು ಯಾವುದೇ ಪರಿಣಾಮಗಳನ್ನು ಎದುರಿಸದೆ ತಮ್ಮ ಆಧಾರ್ ಅನ್ನು ಪ್ಯಾನ್-ಆಧಾರ್ ಲಿಂಕ್ ಮಾಡಲು ನಿಗದಿತ ಪ್ರಾಧಿಕಾರಕ್ಕೆ ತಿಳಿಸಬಹುದು.

2023ರ ಜುಲೈ 1 ರಿಂದ, ಲಿಂಕ್ ಮಾಡದ ಪಾನ್ ಸಂಖ್ಯೆಗೆ ಪರಿಣಾಮ ಎದುರಿಸಬೇಕಾಗಿದ್ದು ಅವು ನಿಷ್ಕ್ರಿಯಗೊಳ್ಳುತ್ತವೆ. ಒಂದು ಸಾವಿರ ರೂಪಾಯಿ ಶುಲ್ಕವನ್ನು ಪಾವತಿಸಿದ ನಂತರ ನಿಗದಿತ ಪ್ರಾಧಿಕಾರಕ್ಕೆ ಆಧಾರ್ ಗೆ ಮಾಹಿತಿ ನೀಡಿದಾಗ, 30 ದಿನಗಳಲ್ಲಿ ಪ್ಯಾನ್ ನ್ನು ಮತ್ತೆ ಕಾರ್ಯಗತಗೊಳಿಸಬಹುದು ಎಂದು ಆದಾಯ ತೆರಿಗೆ ಇಲಾಖೆ ಪ್ರಕಟಣೆ ತಿಳಿಸಿದೆ.

ಹಿಂದಿನ ಗಡುವು ಮಾರ್ಚ್ 31 ರಂದು ಎಂದು ತಿಳಿಸಲಾಗಿತ್ತು. ಆಧಾರ್-ಪ್ಯಾನ್ ಲಿಂಕ್ ಮಾಡಲು ವ್ಯಕ್ತಿಗಳು ತಮ್ಮ ಆಧಾರ್ ನ್ನು ಯಾವುದೇ ಪರಿಣಾಮಗಳನ್ನು ಎದುರಿಸದೆ ನಿಗದಿತ ಪ್ರಾಧಿಕಾರಕ್ಕೆ ಜೂನ್ 30ರ ರವರೆಗೆ ತಿಳಿಸಬಹುದು ಎಂದು ಅದು ಹೇಳಿದೆ.

ಆದಾಯ ತೆರಿಗೆ ಕಾಯಿದೆ, 1961 ರ ನಿಬಂಧನೆಗಳ ಅಡಿಯಲ್ಲಿ, ಜುಲೈ 1, 2017 ರಂತೆ PAN ನ್ನು ನಿಗದಿಪಡಿಸಿದ ಮತ್ತು ಆಧಾರ್ ಸಂಖ್ಯೆಯನ್ನು ಪಡೆಯಲು ಅರ್ಹರಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮಾರ್ಚ್ 31 ರಂದು ಅಥವಾ ಮೊದಲು ನಿಗದಿತ ಪ್ರಾಧಿಕಾರಕ್ಕೆ ತನ್ನ ಆಧಾರ್ ನ್ನು ತಿಳಿಸಬೇಕಾಗುತ್ತದೆ.

ಜುಲೈ 1, 2023 ರಿಂದ, ಅಗತ್ಯವಿರುವಂತೆ ತಮ್ಮ ಆಧಾರ್ ನ್ನು ತಿಳಿಸಲು ವಿಫಲರಾದ ತೆರಿಗೆದಾರರ PAN ನಿಷ್ಕ್ರಿಯಗೊಳ್ಳುತ್ತದೆ. ಇಲ್ಲಿಯವರೆಗೆ 51 ಕೋಟಿಗೂ ಹೆಚ್ಚು ಪ್ಯಾನ್‌ಗಳನ್ನು ಈಗಾಗಲೇ ಆಧಾರ್‌ನೊಂದಿಗೆ ಲಿಂಕ್ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ